Home / ಕವನ / ಕವಿತೆ / ಪ್ರಾರ್‍ಥನೆ

ಪ್ರಾರ್‍ಥನೆ

ನಾನು ಯಾವ ನೆಲದಲ್ಲಾದರೂ ನಡೆದಾಡಲಿ
ನನ್ನ ಮಾತೃಭೂಮಿಯ ಮಣ್ಣವಾಸನೆಯೇ ಸೂಸಿಬರಲಿ
ನಾನು ಕಾಶ್ಮೀರ ಕಣಿವೆಯ ಸುವಾಸನೆ ಮೂಸಿರುವೆನು.
ದ್ವೇಷದ ವಿಷಗಾಳಿ ವರ್‍ಜವಾಗಿದೆ ನನಗೆ
ಸ್ಫೋಟಕ ಮದ್ದಿನ ಘಮಟು ವಾಸನೆ ಒಗ್ಗಲಾರದು
ನನಗೆ ಹಿಮಚ್ಛಾದಿತ ಹಿಮಾಲಯವೇ ಅಚ್ಚು ಮೆಚ್ಚು
ಆದರೂ ಅವರೇಕೆ ಹೇಳುತ್ತಿದ್ದಾರೆ?
ನನಗೆ ರಾಸ ಪರ್‍ವತವೇ ಪ್ರಿಯವೆಂದು.

ನಾನು ಹಜ್ ಯಾತ್ರೆ ಕೈಕೊಂಡರೂ
ಮದೀನಾದ ನೆಲದಲ್ಲಿ ಪ್ರಾರ್‍ಥಿಸಿದರೂ
ಭಾರತದ ಏಳೆಗಾಗಿಯೇ ಪ್ರಾರ್‍ಥಿಸುವೆನು.
ನನ್ನ ದೇಶದ ಸುಖ ಸಮೃದ್ಧಿಯನೇ ಬಯಸುವೆನು
ನನಗೆ ಆಡಲು ಮಡಿಲು ನೀಡಿದ
ನೀರು, ಆಹಾರ, ಗಾಳಿ ಕೊಟ್ಟು ಪೋಷಿಸಿದ
ಮಾತೃ ಭೂಮಿಯ ಶ್ರೇಯಸ್ಸು ಬಯಸುವೆ.
ನನ್ನ ದೇಹದ ಹನಿ ಹನಿ ರಕ್ತದಲ್ಲೂ
ಭಾರತದ ಹೆಸರೇ ಪ್ರತಿಧ್ವನಿಸುತ್ತಿರುತ್ತದೆ.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಾನು ಗಡಿಯಾಚೆಯವಳೆಂದು?.

ನನ್ನ ದೇಶದಲ್ಲಿ ನಿರಂತರ ಹರಿಯುತ್ತಿವೆ
ಗಂಗೆ, ಯಮುನೆ, ಕೃಷ್ಣ, ಕಾವೇರಿಯರು
ಪ್ರೀತಿಯ ತಾಜಮಹಲು ನನ್ನ ದೇಶದಲ್ಲಿಯೇ ಇದೆ.
ಚಾರ್‌ಮಿನಾರ್, ಕುತುಬ್‌ ಮೀನಾರ್‌ಗಳು.
ಬದುಕಿರುವೆನು ನಾನು ಕಾಶೀ, ಮಥುರಾ
ಅಜ್ಮೀರ್‌ಬಾಬಾನ ಸೌಹಾರ್‍ದ ನೆಲೆಗಳಲ್ಲಿ
ಸೌಹಾರ್‍ದ ತಾಣ ಸುಂದರ ಹೂಬನ
ಪೋಷಿಸಿದವಳು ನಾನು.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಾನು ಕೋಮಲ ಹೂಗಳ ದ್ವೇಷಿಯೆಂದು?

ನಾನು ಲೋಕದ ಯಾವ
ಮೂಲೆಯಲ್ಲಾದರೂ ಕೊನೆಯುಸಿರೆಳೆಯಲಿ
ದೂರದಿಂದಲಾದರೂ ನನ್ನ ಭಾರತದ
ಗಡಿ ಕಾಣುತ್ತಿರಲಿ ಎಂದು ಬಯಸುವೆನು.
ಯಾವ ದೇಶದ ನೀರೇ ಕುಡಿಯಲಿ
ಪವಿತ್ರ ಝಂಝಂ ಸೇವಿಸಿದರೂ ಸಹ
ಅದರಲ್ಲಿ ಗಂಗೆಯ ಸ್ವಾದ ಹುಡುಕುವೆನು.
ಪ್ರಾರ್‍ಥನೆಗೆ ಕೈ ಎತ್ತಿದ ಪ್ರತಿ ಬಾರಿಯೂ
ನನ್ನ ದೇಶದ ಎಳ್ಗೆಯನೇ ಬಯಸುವೆನು.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಿನ್ನ ಬದ್ಧತೆಯನ್ನು ಸಾಬೀತು ಪಡಿಸು ಎಂದು?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...