Home / ಕವನ / ಕವಿತೆ / ಪ್ರಾರ್‍ಥನೆ

ಪ್ರಾರ್‍ಥನೆ

ನಾನು ಯಾವ ನೆಲದಲ್ಲಾದರೂ ನಡೆದಾಡಲಿ
ನನ್ನ ಮಾತೃಭೂಮಿಯ ಮಣ್ಣವಾಸನೆಯೇ ಸೂಸಿಬರಲಿ
ನಾನು ಕಾಶ್ಮೀರ ಕಣಿವೆಯ ಸುವಾಸನೆ ಮೂಸಿರುವೆನು.
ದ್ವೇಷದ ವಿಷಗಾಳಿ ವರ್‍ಜವಾಗಿದೆ ನನಗೆ
ಸ್ಫೋಟಕ ಮದ್ದಿನ ಘಮಟು ವಾಸನೆ ಒಗ್ಗಲಾರದು
ನನಗೆ ಹಿಮಚ್ಛಾದಿತ ಹಿಮಾಲಯವೇ ಅಚ್ಚು ಮೆಚ್ಚು
ಆದರೂ ಅವರೇಕೆ ಹೇಳುತ್ತಿದ್ದಾರೆ?
ನನಗೆ ರಾಸ ಪರ್‍ವತವೇ ಪ್ರಿಯವೆಂದು.

ನಾನು ಹಜ್ ಯಾತ್ರೆ ಕೈಕೊಂಡರೂ
ಮದೀನಾದ ನೆಲದಲ್ಲಿ ಪ್ರಾರ್‍ಥಿಸಿದರೂ
ಭಾರತದ ಏಳೆಗಾಗಿಯೇ ಪ್ರಾರ್‍ಥಿಸುವೆನು.
ನನ್ನ ದೇಶದ ಸುಖ ಸಮೃದ್ಧಿಯನೇ ಬಯಸುವೆನು
ನನಗೆ ಆಡಲು ಮಡಿಲು ನೀಡಿದ
ನೀರು, ಆಹಾರ, ಗಾಳಿ ಕೊಟ್ಟು ಪೋಷಿಸಿದ
ಮಾತೃ ಭೂಮಿಯ ಶ್ರೇಯಸ್ಸು ಬಯಸುವೆ.
ನನ್ನ ದೇಹದ ಹನಿ ಹನಿ ರಕ್ತದಲ್ಲೂ
ಭಾರತದ ಹೆಸರೇ ಪ್ರತಿಧ್ವನಿಸುತ್ತಿರುತ್ತದೆ.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಾನು ಗಡಿಯಾಚೆಯವಳೆಂದು?.

ನನ್ನ ದೇಶದಲ್ಲಿ ನಿರಂತರ ಹರಿಯುತ್ತಿವೆ
ಗಂಗೆ, ಯಮುನೆ, ಕೃಷ್ಣ, ಕಾವೇರಿಯರು
ಪ್ರೀತಿಯ ತಾಜಮಹಲು ನನ್ನ ದೇಶದಲ್ಲಿಯೇ ಇದೆ.
ಚಾರ್‌ಮಿನಾರ್, ಕುತುಬ್‌ ಮೀನಾರ್‌ಗಳು.
ಬದುಕಿರುವೆನು ನಾನು ಕಾಶೀ, ಮಥುರಾ
ಅಜ್ಮೀರ್‌ಬಾಬಾನ ಸೌಹಾರ್‍ದ ನೆಲೆಗಳಲ್ಲಿ
ಸೌಹಾರ್‍ದ ತಾಣ ಸುಂದರ ಹೂಬನ
ಪೋಷಿಸಿದವಳು ನಾನು.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಾನು ಕೋಮಲ ಹೂಗಳ ದ್ವೇಷಿಯೆಂದು?

ನಾನು ಲೋಕದ ಯಾವ
ಮೂಲೆಯಲ್ಲಾದರೂ ಕೊನೆಯುಸಿರೆಳೆಯಲಿ
ದೂರದಿಂದಲಾದರೂ ನನ್ನ ಭಾರತದ
ಗಡಿ ಕಾಣುತ್ತಿರಲಿ ಎಂದು ಬಯಸುವೆನು.
ಯಾವ ದೇಶದ ನೀರೇ ಕುಡಿಯಲಿ
ಪವಿತ್ರ ಝಂಝಂ ಸೇವಿಸಿದರೂ ಸಹ
ಅದರಲ್ಲಿ ಗಂಗೆಯ ಸ್ವಾದ ಹುಡುಕುವೆನು.
ಪ್ರಾರ್‍ಥನೆಗೆ ಕೈ ಎತ್ತಿದ ಪ್ರತಿ ಬಾರಿಯೂ
ನನ್ನ ದೇಶದ ಎಳ್ಗೆಯನೇ ಬಯಸುವೆನು.
ಆದರೂ ಅವರೇಕೆ ಹೇಳುತ್ತಿದ್ದಾರೆ
ನಿನ್ನ ಬದ್ಧತೆಯನ್ನು ಸಾಬೀತು ಪಡಿಸು ಎಂದು?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...