ದೊಡ್ಡವರು

ದೊಡ್ಡವರದೆಲ್ಲವೂ ದೊಡ್ಡದೆಂಬುವ ಮಾತು
ಸುಳ್ಳಲ್ಲ! ಶ್ರವಣ ಬೆಳಗುಳದಲ್ಲಿ ಒಂದು ಸಾ-
ವಿರ ವರುಷ ನಿಂತ ಗೊಮ್ಮಟ! ವಿಜಯನಗರದ-
ಲ್ಲಿರುವ ಸಾಸಿವೆ ಗಣಪ! ವಿಜಯಪುರದೊಳಗೀಗು
ಆಡಿದ್ದ ನಾಡಾಡಿ ಏಳೇಳು ಸಲ ನಲಿವ
ಗೋಳಗುಮ್ಮಟ! ಚೆನ್ನ ಕೇಶವನ ಕಣ್ಣಿದಿರು
ಕುಣಿಕುಣಿವ ನಲ್ಲರೂಹಿನ ಕಲ್ಲು! ವಿಜಯ ವಿ-
ಠ್ಠಲನ ಪಾಡುವ ಕಂಬ! ಹಳ್ಳಿವಳ್ಳಿಯ ಶಿಲಾಶಾಸನವು!

ಕನ್ನಡರ ಕೈವಾಡದಿಂದ್ರಜಾಲಕೆ ಕಲ್ಲು
ಕುಸುರಿತು! ಶಿಲಾಧ್ಯಾನದಿಂದ ಧೇನಿಸುವವರ
ಚೇತನಕಚೇತನ ಸಮಾಧಿಯೇ ಕವಿದುದೋ?
ಬರಬರುತ ಕಲ್ಲಾದುದೋ? ಚಕ್ರವರ್‍ತಿಗಳ
ಸಿಂಹಪೀಠವು, ಜಗದ್ಗುರುಪೀಠ, ಕಲ್ನಾಟಿ-
ಸಿದ ವೀರರಾಡಿದಾಂಡುಬೊಲವು, ಮಾಸತಿಯ
ನಿಸದಿಗೆಯ ಭೂಮಿ, ಪಾಳ್, ಪಡು, ಬರಡು. ಜಾಗೃತಿಯು
ಘನ,-ಕೃತಿಯು ಘನವು-ವಿಸ್ಮೃತಿಯು ಘನ! ದೊಡ್ಡವರು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲದ ಓಟ
Next post ಉಪದೇಶ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…