Home / ಕವನ / ಕವಿತೆ / ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣ ತೆತ್ತವಳೆ,  ಚಿಲುಕದಮೇಲೆ
ಮುಂಗೈಯನೂರಿ ನಿಂತವಳೆ,
ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ
ಒಂದೆ ಹೂವನು ಮುಡಿದವಳೆ,
ಒಂದೊಂದೆ ಬಳೆಯ ತೊಟ್ಟವಳೆ, ಈ ಮನೆಯೊಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ಹತ್ತಿದ ದೀಪ
ಮಂಕಾಗಿ ತೋರಿ ನಿಂತವಳೆ,
ಸಂತೆಗೆ ಹೋಗಿ ಬರಿಗೈಲೆ ಬಂದೆಯ, ಪಾಪ !-
ಚಿಂತೆ, ಏತರ ಚಿಂತೆ, ನಿನಗೆ?

ನಿನಗಾವ ಚಿಂತೆ ಚಿಕ್ಕವಳೆ, ಚಿನ್ನದ ಬಳೆಗೆ
ಒಪ್ಪುವ ತುಂಬುಗೈಯವಳೆ !
ಗಾಳಿಯ ಸುಳಿಗೆ ಹೂವಾದ ಮಲ್ಲಿಗೆಯರಳೆ,
ಬಂಡಿಯ ದನಿಗೆ ಬೆಚ್ಚುವಳೆ !-

ನಿನಗಾವ ಚಿಂತೆ, ಚಿಕ್ಕವಳೆ, ತುಂಬಿದ ಮನೆಗೆ
ಘನವಾಗಿ ಬಂದ ಗುಣದವಳೆ,
ನುಡಿದೊಂದು ಮಾತು ಸಾಕೆನುವ ಇನಿದನಿಯವಳೆ,
ತಲೆತಗ್ಗಿ ನಾಚಿ ನಡೆಯುವಳೆ?

ಮಳೆ ಬಿದ್ದು, ಕೆರೆ ತುಂಬಿ ನೀರು! ಮಿಂಚುವ ನೀರು,
ಬರಿ ನೀರೆ? ಥೇಟು ಪನ್ನೀರು !
ಅತ್ತಿತ್ತ ನೆಲ ಹೂವ ತೇರು; ಅಲ್ಲಿಗೆ ಬಾನು
ಇದ್ದೀತು ಒಂದೆರಡು ಮಾರು !

ಮನೆಗಿಂತ ಬಾನು ಎತ್ತರವೆ? ಆದರೆ ಏನು?
ಬಾನಿಗೆ ತಾರೆ ಹತ್ತಿರವೆ?
ಏನಂಥ ಬೆಟ್ಟ ಹೊತ್ತಿರುವೆ? ಸುಮ್ಮನೆ ನೀನು
ಸೊಂಪಾಗಿ ನಿಲುವುದುತ್ತರವೆ ?

ತೋಟದ ಮೇಲೆಲ್ಲ ತೆಂಗು; ತೆಂಗಿನ ಮೇಲೆ
ತೆರೆದ ಹೊಂಬಾಳೆಯ ರಂಗು!
ಗೊನೆ ಬಿಟ್ಟ ರಸಬಾಳೆ ಕಂದು; ಹಣ್ಣಿನ ಮೇಲೆ
ಹುದುಗಿತ್ತು ಗಿಣಿಯೊಂದು ಬಂದು.

ವೀಣೆಗೆ ತಂತಿಯ ಚೆಂತೆ; ತಂತಿಗೆ ತನ್ನ
ಹುಡುಕುವ ಬೆರಳಿನ ಚಿಂತೆ ;
ಬೆರಳಿಗೆ ಉಂಗುರದ ಚಿಂತೆ ; ಚಿಂತೆಗೆ ತನ್ನ
ಮಡಿಲ ತುಂಬುವುದೊಂದೆ ಚಿಂತೆ.

ಇಲ್ಲದ ಸಲ್ಲದ ಚಿಂತೆ ; ಅದು ಬಂದಂತೆ
ಹೋದೀತು ಇರಲೊಂದು ಗಳಿಗೆ !
ಸಂಶಯ ನನಗಿಲ್ಲ, ಚೆಲುವೆ; ಚೆಲುವಿಗೆ ಚಿಂತೆ;
ಚಿಂತೆಯಿಲ್ಲದ ಚೆಲುವು ಚೆಲುವೆ ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...