Home / ಕವನ / ಕವಿತೆ / ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣ ತೆತ್ತವಳೆ,  ಚಿಲುಕದಮೇಲೆ
ಮುಂಗೈಯನೂರಿ ನಿಂತವಳೆ,
ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ
ಒಂದೆ ಹೂವನು ಮುಡಿದವಳೆ,
ಒಂದೊಂದೆ ಬಳೆಯ ತೊಟ್ಟವಳೆ, ಈ ಮನೆಯೊಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ಹತ್ತಿದ ದೀಪ
ಮಂಕಾಗಿ ತೋರಿ ನಿಂತವಳೆ,
ಸಂತೆಗೆ ಹೋಗಿ ಬರಿಗೈಲೆ ಬಂದೆಯ, ಪಾಪ !-
ಚಿಂತೆ, ಏತರ ಚಿಂತೆ, ನಿನಗೆ?

ನಿನಗಾವ ಚಿಂತೆ ಚಿಕ್ಕವಳೆ, ಚಿನ್ನದ ಬಳೆಗೆ
ಒಪ್ಪುವ ತುಂಬುಗೈಯವಳೆ !
ಗಾಳಿಯ ಸುಳಿಗೆ ಹೂವಾದ ಮಲ್ಲಿಗೆಯರಳೆ,
ಬಂಡಿಯ ದನಿಗೆ ಬೆಚ್ಚುವಳೆ !-

ನಿನಗಾವ ಚಿಂತೆ, ಚಿಕ್ಕವಳೆ, ತುಂಬಿದ ಮನೆಗೆ
ಘನವಾಗಿ ಬಂದ ಗುಣದವಳೆ,
ನುಡಿದೊಂದು ಮಾತು ಸಾಕೆನುವ ಇನಿದನಿಯವಳೆ,
ತಲೆತಗ್ಗಿ ನಾಚಿ ನಡೆಯುವಳೆ?

ಮಳೆ ಬಿದ್ದು, ಕೆರೆ ತುಂಬಿ ನೀರು! ಮಿಂಚುವ ನೀರು,
ಬರಿ ನೀರೆ? ಥೇಟು ಪನ್ನೀರು !
ಅತ್ತಿತ್ತ ನೆಲ ಹೂವ ತೇರು; ಅಲ್ಲಿಗೆ ಬಾನು
ಇದ್ದೀತು ಒಂದೆರಡು ಮಾರು !

ಮನೆಗಿಂತ ಬಾನು ಎತ್ತರವೆ? ಆದರೆ ಏನು?
ಬಾನಿಗೆ ತಾರೆ ಹತ್ತಿರವೆ?
ಏನಂಥ ಬೆಟ್ಟ ಹೊತ್ತಿರುವೆ? ಸುಮ್ಮನೆ ನೀನು
ಸೊಂಪಾಗಿ ನಿಲುವುದುತ್ತರವೆ ?

ತೋಟದ ಮೇಲೆಲ್ಲ ತೆಂಗು; ತೆಂಗಿನ ಮೇಲೆ
ತೆರೆದ ಹೊಂಬಾಳೆಯ ರಂಗು!
ಗೊನೆ ಬಿಟ್ಟ ರಸಬಾಳೆ ಕಂದು; ಹಣ್ಣಿನ ಮೇಲೆ
ಹುದುಗಿತ್ತು ಗಿಣಿಯೊಂದು ಬಂದು.

ವೀಣೆಗೆ ತಂತಿಯ ಚೆಂತೆ; ತಂತಿಗೆ ತನ್ನ
ಹುಡುಕುವ ಬೆರಳಿನ ಚಿಂತೆ ;
ಬೆರಳಿಗೆ ಉಂಗುರದ ಚಿಂತೆ ; ಚಿಂತೆಗೆ ತನ್ನ
ಮಡಿಲ ತುಂಬುವುದೊಂದೆ ಚಿಂತೆ.

ಇಲ್ಲದ ಸಲ್ಲದ ಚಿಂತೆ ; ಅದು ಬಂದಂತೆ
ಹೋದೀತು ಇರಲೊಂದು ಗಳಿಗೆ !
ಸಂಶಯ ನನಗಿಲ್ಲ, ಚೆಲುವೆ; ಚೆಲುವಿಗೆ ಚಿಂತೆ;
ಚಿಂತೆಯಿಲ್ಲದ ಚೆಲುವು ಚೆಲುವೆ ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...