Home / ಕವನ / ಕವಿತೆ / ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣತೆತ್ತವಳೆ!!

ಚಿಂತೆಗೆ ಕಣ್ಣ ತೆತ್ತವಳೆ,  ಚಿಲುಕದಮೇಲೆ
ಮುಂಗೈಯನೂರಿ ನಿಂತವಳೆ,
ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ
ಒಂದೆ ಹೂವನು ಮುಡಿದವಳೆ,
ಒಂದೊಂದೆ ಬಳೆಯ ತೊಟ್ಟವಳೆ, ಈ ಮನೆಯೊಳಗೆ
ಚಿಂತೆ, ಏತರ ಚಿಂತೆ, ನಿನಗೆ?

ಚಿಂತೆಗೆ ಕಣ್ಣ ತೆತ್ತವಳೆ, ಹತ್ತಿದ ದೀಪ
ಮಂಕಾಗಿ ತೋರಿ ನಿಂತವಳೆ,
ಸಂತೆಗೆ ಹೋಗಿ ಬರಿಗೈಲೆ ಬಂದೆಯ, ಪಾಪ !-
ಚಿಂತೆ, ಏತರ ಚಿಂತೆ, ನಿನಗೆ?

ನಿನಗಾವ ಚಿಂತೆ ಚಿಕ್ಕವಳೆ, ಚಿನ್ನದ ಬಳೆಗೆ
ಒಪ್ಪುವ ತುಂಬುಗೈಯವಳೆ !
ಗಾಳಿಯ ಸುಳಿಗೆ ಹೂವಾದ ಮಲ್ಲಿಗೆಯರಳೆ,
ಬಂಡಿಯ ದನಿಗೆ ಬೆಚ್ಚುವಳೆ !-

ನಿನಗಾವ ಚಿಂತೆ, ಚಿಕ್ಕವಳೆ, ತುಂಬಿದ ಮನೆಗೆ
ಘನವಾಗಿ ಬಂದ ಗುಣದವಳೆ,
ನುಡಿದೊಂದು ಮಾತು ಸಾಕೆನುವ ಇನಿದನಿಯವಳೆ,
ತಲೆತಗ್ಗಿ ನಾಚಿ ನಡೆಯುವಳೆ?

ಮಳೆ ಬಿದ್ದು, ಕೆರೆ ತುಂಬಿ ನೀರು! ಮಿಂಚುವ ನೀರು,
ಬರಿ ನೀರೆ? ಥೇಟು ಪನ್ನೀರು !
ಅತ್ತಿತ್ತ ನೆಲ ಹೂವ ತೇರು; ಅಲ್ಲಿಗೆ ಬಾನು
ಇದ್ದೀತು ಒಂದೆರಡು ಮಾರು !

ಮನೆಗಿಂತ ಬಾನು ಎತ್ತರವೆ? ಆದರೆ ಏನು?
ಬಾನಿಗೆ ತಾರೆ ಹತ್ತಿರವೆ?
ಏನಂಥ ಬೆಟ್ಟ ಹೊತ್ತಿರುವೆ? ಸುಮ್ಮನೆ ನೀನು
ಸೊಂಪಾಗಿ ನಿಲುವುದುತ್ತರವೆ ?

ತೋಟದ ಮೇಲೆಲ್ಲ ತೆಂಗು; ತೆಂಗಿನ ಮೇಲೆ
ತೆರೆದ ಹೊಂಬಾಳೆಯ ರಂಗು!
ಗೊನೆ ಬಿಟ್ಟ ರಸಬಾಳೆ ಕಂದು; ಹಣ್ಣಿನ ಮೇಲೆ
ಹುದುಗಿತ್ತು ಗಿಣಿಯೊಂದು ಬಂದು.

ವೀಣೆಗೆ ತಂತಿಯ ಚೆಂತೆ; ತಂತಿಗೆ ತನ್ನ
ಹುಡುಕುವ ಬೆರಳಿನ ಚಿಂತೆ ;
ಬೆರಳಿಗೆ ಉಂಗುರದ ಚಿಂತೆ ; ಚಿಂತೆಗೆ ತನ್ನ
ಮಡಿಲ ತುಂಬುವುದೊಂದೆ ಚಿಂತೆ.

ಇಲ್ಲದ ಸಲ್ಲದ ಚಿಂತೆ ; ಅದು ಬಂದಂತೆ
ಹೋದೀತು ಇರಲೊಂದು ಗಳಿಗೆ !
ಸಂಶಯ ನನಗಿಲ್ಲ, ಚೆಲುವೆ; ಚೆಲುವಿಗೆ ಚಿಂತೆ;
ಚಿಂತೆಯಿಲ್ಲದ ಚೆಲುವು ಚೆಲುವೆ ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...