Home / ಕವನ / ಕವಿತೆ / ೨೬-೧-೫೦

೨೬-೧-೫೦

ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು
ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ,
ಮರಕತ ದ್ವೀಪದಮನೆಗೆ. ದಣಿಗೂ ದಣಿವು!
ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ
ತ್ರಿಶೂಲದಂತಾಯ್ತು ನೋಡುನ ಕಣ್ಣಿಗೆ!

ತಲೆಯ ಮೇಲಿನ ಹೆಜ್ಜೆ. -ಈ ಮಾತು ಮುಗಿಯಿತು;
`ಹೆಜ್ಜೆಯೇ ಅಲ್ಲ ಮಕುಟದ ಮುತ್ತು ಅದು,
ಇರಲಿ ರಾಜತ್ವ ನೆಪಮಾತ್ರ’ ಎನುವಂತಿಲ್ಲ,-
ಮಕುಟ ರಹಿತ ಸಾಮ್ರಾಜ್ಞಿ ಭಾರತಲಕ್ಷ್ಮಿ,
ರಾಜತ್ವ ರಹಿತ ರಾಜ್ಯಾಂಗ ಮನೋಮಂದಿರೆ.

ನೆನೆ ನೆನೆ ಓ ಮನನೆ ನಿನ್ನ ಎದೆಗತ್ತಲೆಯೆ
ಬಲಿಗೊಟ್ಟ ತಂದೆ ಬಾಳಿನ ಚಂದ್ರಬಿಂಬವನು.
ಆ ನೋಟ ನಿನ್ನ ಕಣ್ಣಾಗಿ, ಅಮೃತವೆ ತುಂಬಿ,
ಗಾಂಧಿಜಿಯ ಮಂದಹಾಸವೆ ಗುರುವಾಗಲಿ !

ಬಾಂಬಿನ ಅಲಂಕಾರ ನಿನಗಿಲ್ಲ, ತಾಯೆ,
ಶಾಂತಿ ಪ್ರಿಯೆ, ಚಂದ್ರಕಾಂತಿ ಪ್ರಿಯೆ,
ಗಂಗಾ ಯಮುನಾ ನದನದೀ ಸ್ನಾತೆ,
ಉಪನಿಷದ್ವಿಪಿನ ಹೋಮಾಗ್ನಿ ಸಂಜಾತೆ !

ಚಳಿಗಾಲ ಬಂದಿರಲು, ಮುದುಕಿ ಮುಮ್ಮೂಲೆಯಲಿ
ಒಂದು ಕಿಡಿ ಕೆಂಡದೆದುರಿನಲಿ ಮೈ ಹಿಡಿಯಾಗಿ
ಬೆದರಿ ಕುಳಿತಂತೆ, ಚಿಂತೆಗೆ ಆತ್ಮನನು ತೆತ್ತು
ಸಂಗ್ರಾಮ ಭೀತಿಯಲಿ ಸೋತು ಸೊರಗಿ ಜಗತ್ತು
ದೂರ ಸಭೆಗಳಲಿ ಮುಗಿಯುವ ಮುನ್ನ ಎಚ್ಚರಿಸು.
ನಿನ್ನ ಗಂಭೀರವಾಣಿಯ ಪಾರಿವಾಳಗಳ
ಬೆಳ್ಗರಿಯ ಬೀಸಿ ಶಾಂತಿಯ ಶಿಶುವನುಪಚರಿಸು;
ಅದು ಬೆಳೆದು ಲೋಕನಾಯಕನಾಗಿ ರಾರಾಜಿಸಲಿ!

ಜಗಜ್ಜನನಿಯಲ್ಲ ನೀನು; ಜಗನ್ಮೋಹಿನಿಯೂ ಅಲ್ಲ;
ಜಗದ್ಧಾತ್ರಿಯಾಗಿರು ನೀನು; ಅಹಿಂಸಾವತ್ಸಲೆ,
ನಿನ್ನ ಶಾಸನವಿದು (ನಡೆ ನಗಾರಿಯ ಮೇಲೆ;
ಈ ಧರ್ಮ ನಿನ್ನ ಬಾವುಟದ ಇನ್ನೂ ಮೇಲೆ):

“ವಯಂ ಪುನಃ ಏವಂ ಆಚಕ್ಷಾಮಹೇ,
ಏನಂ ಭಾಷಾಮಹೇ, ಏವಂ ಪ್ರರೂಯಾಮಃ,
ಏವಂ ಪ್ರಜ್ಞಾಪಯಾಮಃ,-
ಸರ್ವೇ ಪ್ರಾಣಾಃ, ಸರ್ವೇ ಭೂತಾಃ, ಸರ್ವೇ ಜೀವಾಃ,
ಸರ್ವೇ ಸತ್ವಾಃ,
ನ ಹಂತಾವ್ಯಾಃ
ನ ಆಜ್ಞಾಪರಿಯಿತವ್ಯಾಃ
ನ ಪರಿಗ್ರಹೀತವ್ಯಾಃ
ನ ಪರಿತಾಪಯಿತವ್ಯಾಃ
ನ ಉಪದ್ರೋತವ್ಯಾಃ
ಆರ್ಯವಚನಮೇತತ್
ಓಂ ತತ್‍ಸತ್.”
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...