Home / ಕವನ / ಕವಿತೆ / ಏನೆಂದು ಹೇಳಲಿ ಅಕ್ಕ

ಏನೆಂದು ಹೇಳಲಿ ಅಕ್ಕ

ಏನೆಂದು ಹೇಳಲಿ ಅಕ್ಕ
ಮುತ್ತಿನ ಕತೆಯ
ಏನೆಂದು ಹೇಳಲಿ ಅದ
ಕಿತ್ತವನ ಕತೆಯ

ಬೃಂದಾವನ ತುಂಬ ಸುರಿಯಿತು ಮುತ್ತು
ಅದು ಸುರಿದರು ಇನ್ನೂ ಮುಗಿಯದೆ ಇತ್ತು

ಅತ್ತು ಕೇಳಿದ ಕೃಷ್ಣ
ಮತ್ತೂ ಕೇಳಿದ ಕೃಷ್ಣ
ಒತ್ತಾಯಿಸಿ ಕೇಳಿದ
ಸತ್ತಾಯಿಸಿ ಕೇಳಿದ
ಒಬ್ಬೊಬ್ಬ ಗೋಪಿಕೆಯ
ಹತ್ತು ಸಲ ಕೇಳಿದ
ಏನೆಂದು ಹೇಳಲಿ ಅಕ್ಕ
ಈ ಮುತ್ತಿನ ಕತೆಯ

ಒಬ್ಬೊಬ್ಬಳಿಂದಲು
ಒಂದೊಂದು ಮುತ್ತು
ದಿನವು ಬೇಡಿದನೆ
ಇನ್ನೊಂದು ಮುತ್ತು

ತುಟಿಗೊಂದು ಮುತ್ತು
ಕೆನ್ನೆಗೊಂದ್ಮುತ್ತು
ಹಣೆಗೊಂದು ಮುತ್ತು
ಹುಬ್ಬಿಗೆರಡಿತ್ತು

ನಗುತಿದ್ದರೊಂದು ಮುತ್ತು
ನಾಚುತಿದ್ದರು ಒಂದು ಮುತ್ತು
ಸುಮ್ಮನೆ ಹೋಗುತಿದ್ದರೆ ಮುತ್ತು
ಬಿಮ್ಮನೆ ಇದ್ದರೆ ಮುತ್ತೇ ಮುತ್ತು

ಮರೆಗಿದ್ದರೊಂದು ಮುತ್ತು
ಮಾತಾಡುತಿದ್ದರೆರಡು ಮುತ್ತು
ಹಾಡುತಿದ್ದರೆ ಹತ್ತು ಮುತ್ತು
ಮೌನವಾಗಿದ್ದರೆ ಮುನ್ನೂರು ಮುತ್ತು

ಹಾಲು ಕರೆಯುತ್ತಿದ್ದರೆ
ಕೇಳಿದಷ್ಟು ಮುತ್ತು
ನೀರು ತರುತಿದ್ದರೆ
ನೂರೊಂದು ಮುತ್ತು
ಐನೀರಿಗೈನೂರು ಮುತ್ತು
ರಂಗಿನಾಟಕೆ ಸಾವಿರ ಮುತ್ತು

ನಿನ್ನೆ ಬೇಕೆಂದನೆ
ಈ ದಿನ ಬೇಕೆಂದನೆ
ಈಗ ಬೇಕೆಂದನೆ
ಆಗ ಬೇಕೆಂದನೆ
ಯಾವತ್ತಿಗೂ ಅದು
ಸಾಕಾಗುವುದೆಂದನೆ
ಯಾವತ್ತಿಗೂ ಅದು
ಸಾಕಾಗದೆಂದನೆ

ಮುತ್ತು ಕೊಟ್ಟೇ ದಾರಿ
ಹೋಗಬೇಕೆಂದನೆ
ಶುದ್ಧ ಮುತ್ತೇ
ಆಗಬೇಕೆಂದನೆ
ಇದ್ದಷ್ಟೂ ಅವು
ಸಾಲದೆಂದನೆ
ಉದ್ದ ಮುತ್ತುಗಳೇ
ಒಳ್ಳೆಯದೆಂದನೆ
ಕದ್ದಾದರೂ ಅವ
ಕೊಡಬೇಕೆಂದನೆ

ಕೊಟ್ಟುದನೆಲ್ಲವ
ಚೆಲ್ಲಾಡಿ ಕೇಳಿದನೆ
ಕಳೆದುಹೋದುವು ಎಂದು
ಗೋಳಾಡಿ ಕೇಳಿದನೆ
ಆಡಿ ಕೇಳಿದನೆ ಕುಣಿ-
ದಾಡಿ ಕೇಳಿದನೆ
ಎಲ್ಲೆಂದರಲ್ಲಿ ಕಾಡಿ ಕೇಳಿದನೆ
ನಗಾಡಿ ಕೇಳಿದನೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...