Home / ಕವನ / ಕವಿತೆ / ಭರತನಿದ್ದ ಬಾಹುಬಲಿಯಿದ್ದ

ಭರತನಿದ್ದ ಬಾಹುಬಲಿಯಿದ್ದ

ಭರತನಿದ್ದ ಬಾಹುಬಲಿಯಿದ್ದ
ಗೊಮ್ಮಟನಿರಲಿಲ್ಲ
ಜಿನನಿರಲಿಲ್ಲ

ಭರತ ಬಾಹುಬಲಿಯ ಮಧ್ಯೆ
ಯುದ್ಧ ನಡೆದಿತ್ತು ಅಣ್ಣತಮ್ಮನ ನಡುವೆ
ಗೊಮ್ಮಟನಿರಲಿಲ್ಲ
ಜಿನನಿರಲಿಲ್ಲ

ಗಧಾಯುದ್ಧ ಖಡ್ಗ ಯುದ್ಧ
ಸಕಲಾಸ್ತ್ರ ಯುದ್ಧ ನಡೆದಿತ್ತು ಸಹಸ್ರವರ್‍ಷ
ಗೊಮ್ಮಟನಿರಲಿಲ್ಲ
ಜಿನನಿರಲಿಲ್ಲ

ಸಕಲ ಸಮಬಲ ಯುದ್ಧ
ಕೊನೆಗೊಂದೆ ಯುದ್ಧ ಅದು ದೃಷ್ಟಿ ಯುದ್ಧ
ಗೊಮ್ಮಟನಿರಲಿಲ್ಲ
ಜಿನನಿರಲಿಲ್ಲ

ದೃಷ್ಟಿ ಯುದ್ಧದಲಿ ಬಾಹುಬಲಿ ಗೆದ್ದ
ಯುದ್ಧ ಗೆದ್ದವನೆ ಎಲ್ಲ ರಾಜ್ಯವ ಗೆದ್ದ
ಗೊಮ್ಮಟನಿರಲಿಲ್ಲ
ಜಿನನಿರಲಿಲ್ಲ

ಆಗಲೇ ಅವನು ಎಲ್ಲ ಬಿಟ್ಟದ್ದು
ಬಿಟ್ಟಾಗಲೇ ಅವನು ನಿಜವಾಗಿ ಗೆದ್ದುದು
ಆಗಲೇ ಅವನು ಗೊಮ್ಮಟನಾದುದು
ಜಿನನು ಆದುದು

ರಾಜ್ಯ ಕೋಶಗಳ ಬಿಟ್ಟ
ಗೆದ್ದುದೆಲ್ಲವ ಬಿಟ್ಟ
ಗೆಲ್ಲಬೇಕೆಂಬುದನೆ ಬಿಟ್ಟ
ಅಹಂ ಬಿಟ್ಟ
ಅಹಂಕಾರವ ಬಿಟ್ಟ
ಉಟ್ಟ ಬಟ್ಟೆಯನೆ ಬಿಟ್ಟೆದ್ದು ನಿಂತ
ಆಕಾಶದೆತ್ತರಕೆ ಬೆಳೆದವನೆ ಗೊಮ್ಮಟ
ನಿನ್ನೆ ಇಂದು ನಾಳೆಗೂ
ಅವನಿಗವನೆ ಸದೃಶ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...