Home / ಕವನ / ಕವಿತೆ / ಕಾಸರಗೋಡು

ಕಾಸರಗೋಡು

ಎಷ್ಟೋ ನಾಡುಗಳಿವೆ ಎಷ್ಟೋ ಕಾಡುಗಳಿವೆ
ಕಾಸರಗೋಡು ಒಂದೇ
ಅದು ನಾ ಹುಟ್ಟಿ ಬೆಳೆದ ನಾಡು

ಕಾಶ್ಮೀರವಲ್ಲ ಕುಲು ಮನಾಲಿಯಲ್ಲ
ನೀಲಗಿರಿ ಊಟಿಯಲ್ಲ
ಆದರೂ ಅದಕಿರುವುದು
ಅದರದೇ ಆದ ಚಂದ

ಪಡುಗಡಲ ತಡಿಯ
ಒಂದು ತುಣುಕು
ಸುಂದರ ಚಂದ್ರಗಿರಿ ನದಿಪಕ್ಕ
ಚಂದ್ರಖಂಡದಂತದರ ಸೊಬಗು

ಭೋರ್‍ಗರೆವ ಸಮುದ್ರ ಪಡುವಲಲಿ
ಆಕಾಶಚುಂಬಿ ಸಹ್ಯಾದ್ರಿ ಬೆಟ್ಟ ಮೂಡಲಲಿ
ಮಧ್ಯೆ ಹಾಸಿ ಮಲಗಿದೆ ನಮ್ಮ
ಪ್ರೀತಿಯ ಕಾಸರಗೋಡು

ಕನ್ನಡ ತುಳು ಮಲೆಯಾಳ
ಕೊಂಕಣಿ ಮರಾಠಿ ಉರ್‍ದು
ಹಲವು ಹಕ್ಕಿಗಳ ಕಲರವದಂತೆ
ಅದೆ ಒಂದು ಕೇಳ್ವ ಸೊಗಸು

ದೇವಾಲಯ ಇಗರ್‍ಜಿ ಮಸೀದಿ
ಅಲ್ಲಲ್ಲಿ ಜಾತ್ರೆ ತೇರು ಬೆಡಿ ಸಂತೆ ಭೂತಕೋಲ
ಚೆಂಡೆ ಮದ್ದಳೆ ಯಕ್ಷಗಾನ ಬಯಲಾಟ
ಲೋಕದೊಳಗೆ ಇದೊಂದು ಲೋಕ

ಮಾವು ಇಮ್ಮಾವು ಹಲಸು
ತೇಗ ಬೀಟೆ ಶ್ರೀಗಂಧ
ಗೇರು ಬೀಜ ಕಾಳು ಮೆಣಸು
ಹುಲಿ ಹಂದಿ ಕಾಡು ಗೆಣಸು

ಕಂಗು ತಂಗು ಬಾಳೆ ಹಸಿರು
ಭತ್ತ ಕಬ್ಬು ಗದ್ದೆ ಬಯಲು
ಬೆಟ್ಟ ಕಣಿವೆ ಹಳ್ಳಕೊಳ್ಳಗಳ
ನೋಟ ಸಾಲುಸಾಲು

ಅದು ನೋಡು ಬೆರ್‍ಚಪ್ಪ
ಇದು ನೋಡು ಬೈಪಣೆ
ಇದು ತೊಂಡೆ ಚಪ್ಪರ ಬೆಂಡೆ ಬದನೆ ಸಾಲು
ಅಲಸಂಡೆ ಕುಂಬಳ ಸಿಹಿಗುಂಬಳ
ಸೊರಕಾಯಿ ಸೌತೆ
ಅಲ್ಲಲ್ಲಿ ಸಿಹಿನೀರ ಒರತೆ
ಇನ್ನೇನು ಯಾವುದಕೆ ಕೊರತೆ

ನೋಡುನೋಡು ಪನ್ನೀರು
ನೋಡು ಮಲ್ಲಿಗೆ ಸೇವಂತಿಗೆ
ನೋಡು ಎರವಂತಿಗೆ ನಿತ್ಯಪುಷ್ಪ
ನೋಡು ಕೇದಿಗೆ ರತ್ನಕಂಟಿಕೆ ಇದು ತುಲಸಿ
ನೋಡಿದೋ ತುಂಬಿ ಜೇನ್ನೊಣ ಜೇನು
ತೊಡವೆ ಮಂಜೆಟ್ಟಿ ಕೋಲುಜೇನು ಹೆಜ್ಜೇನು
ಇದೊ ಕಾಗೆ ಕೋಗಿಲೆ ಗಿಳಿ ಗುಬ್ಬಿ ಬಜಕರೆ ಹಕ್ಕಿ
ಇದಿಗೊ ಮನೆಬಾಗಿಲಿಗೆ ಸಿಹಿನೀರ ತರುವ ಅಬ್ಬಿ

ಕುಂಬಳೆ ಮಂಜೇಶ್ವರ ಮಂಗಲ್ಪಾಡಿ
ಕಾರಡ್ಕ ಬದಿಯಡ್ಕ ಬೋವಿಕಾನ
ಪೆರ್‍ಲ ಮುಳ್ಳರ್‍ಯ ಸುಳ್ಯ ಮಧೂರು
ಸೂರಂಬೈಲು
ಏನೆಂಥ ಹೆಸರುಗಳ ಊರು

ಓ ಆತ ಪಕೀರ ಈತ ಕೊರಗ ತುಕ್ರ ತನಿಯ
ಅವ ಮಾಲಿಂಗು ಈಕೆ ಕೊರಪಾಳು
ಇನ್ನಿವಳು ಬೆಳಚ್ಚಿ
ನನ್ನನೆತ್ತಿದವರು ಸೊಂಟದಲಿ ಹೆಗಲಲ್ಲಿ
ನೆತ್ತಿಯಲಿ
ನನ್ನನಾಡಿಸಿದವರು ಪ್ರೀತಿ ನೀಡಿದವರು
ಮಾತು ಕಲಿಸಿದವರು
ಈಗೆಲ್ಲಿ ಅವರು ಓ ಈಗೆಲ್ಲಿ ಅವರು

ಪಂಪನಿಗೆ ಬನವಾಸಿ ನಾನೊ ಅನಿವಾಸಿ
ಪಂಪನಂತೆಯೆ ನಾನು ವ್ಯಸನಿ
ಆರಂಕುಶಮಿಟ್ಟೊಡಂ
ನೆನೆವುದೆನ್ನ ಮನ ನನ್ನ ಹುಟ್ಟೂರ

ತೆಂಕಣಗಾಳಿಯಲಂಪು
ನಮ್ಮವರ ಮಾತಿನಿಂಪು
ನೆನಪುಗಳು ಕರೆಯುವುವು
ಮೇಘಗಳಂತೆ ಮಳೆಯಂತೆ
ದಿನದಿನವು ವರ್‍ಷಧಾರೆ

ಹರ್‍ಷವನಲಾರೆ ದುಃಖವನಲಾರೆ
ಹೆಸರಿಲ್ಲದೊಂದು ಭಾವ
ನನ್ನ ಮನಃ ಪಟಲದಲಿ ತುಂಬಿದೆ ಸದಾ
ನನ್ನೆಚ್ಚರದಂತೆ ನನ್ನ ಮನಃ ಸಾಕ್ಷಿಯಂತೆ

ಅದು ಮಿಡಿವ ತನಕ
ನನಗೆ ಭಯವಿಲ್ಲ
ಬೇಸರವಿಲ್ಲ
ಸ್ವರ್‍ಗವೋ ನರಕವೋ
ಆವೂರೊ ಈವೂರೊ
ಅದು ಮಿಡಿವ ತನಕ
ನಾನತೀತ ಎಂದೆಂದಿಗೂ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...