Home / ಕವನ / ಕವಿತೆ / ಧಾರಾವಾಹಿ

ಧಾರಾವಾಹಿ

ರಕ್ಕಸರಿನ್ನೂ ಮುಗಿದಿಲ್ಲ
ರಕ್ಕಸರಿನ್ನೂ ಬರುತಿದ್ದಾರೆ
ಬರಲೇಬೇಕು
ರಕ್ಕಸರಿನ್ನೂ ಬರದಿದ್ದರೆ
ಮುಂದುವರಿಯುವುದು ಹೇಗೆ ?
ರಕ್ಕಸರಿರ್‍ತಾರೆ ಖಳನಾಯಕರಿರ್‍ತಾರೆ
ಚೌಕಿಯಲ್ಲಿ ವೇಷ ತೊಟ್ಟುಕೊಂಡು
ಮಲಗಿರ್‍ತಾರೆ ಇಲ್ಲವೆ ಚಕ್ಕಂದ
ಆಡಿಹಾಡಿರ್‍ತಾರೆ ಹಾಡಿಕೊಂಡಿರ್‍ತಾರೆ
ಸಮಯಕ್ಕೆ ಸರಿಯಾಗಿ ಎದ್ದು ಬರುತ್ತಾರೆ
ದುಷ್ಟ ವೇಷ ಪುಂಡು ವೇಷ ಪ್ರಚಂಡ ವೇಷ
ಬಣ್ಣದ ವೇಷ
ಹಾ ಎಂಥಾವೇಶ
ರಕ್ಕಸರೂ ಕೆಲ ಛದ್ಮವೇಷ
ಬಡ ಬಡ ಬ್ರಾಹ್ಮಣ ಕಳ್ಳ ಸನ್ಯಾಸಿ
ದಾರಿಹೋಕ ಇಲ್ಲವೆ ತೀರಾ ತಲೆಹೋಕ
ಹಾವಾಡಿಗ ವರ್‍ತಕ ಅಥವಾ
ಜನಸಾಮಾನ್ಯ
ವಂಚಿಸಿದ ನಂತರ ಅವರು ನಿಜ ವೇಷವ
ತೋರುವರು
ಅದೇನು ಅಕರಾಳ ವಿಕರಾಳ
ಏನು ರಾಳದ ಪುಡಿ ಎಡಬಲ ದೊಂದಿ
ಬಯಲ ಕೊನೆಯಿಂದ ಎದ್ದು ಬರುತಾರೆ
ಅದೇನಟ್ಟಹಾಸ ಅದೇನು ಹೂಂಕಾರ
ನಿದ್ದೆ ತೂಗುತ ಇದ್ದ ಜನ ಈಗ ಎಚ್ಚರ
ನೋಡಿದರಿದೋ ಎದುರಿಗೇ ಇದೆ ಒಂದು ಘೋರಾಕಾರ
ಜನ ತತ್ತರ
ಒಮ್ಮೆಲೆ ಹಾಹಾಕಾರ
ಏನಿದು ಉಪಟಳ ಏನಿದು ಹಿಂಸೆ
ಏನಿದು ಜನಾಂಗ ಹತ್ಯೆ
ಈಗುಳಿದುದು ಒಂದೇ
ದೇವರ ಪ್ರಾರ್‍ಥನೆ
ಅಯ್ಯ ಬಾರೋ ಅಪ್ಪ ಬಾರೋ
ಹೇಗಾದರೂ ನಮ್ಮ ಕಾಪಾಡೋ
ಅವನೂ ಬರುತಾನೆ ಶಂಖ ಊದಿ
ಬರದೇನು ಮಾಡ್ತಾನೆ ಧರ್‍ಮಗ್ಲಾನಿ
ನಿವಾರಿಸಬೇಕು ತಾನೆ
ಹತ್ತವತಾರಿ ಇದೆಷ್ಟನೆ ಬಾರಿ
ಬಾರಿ ಬಾರಿಗೂ ರಕ್ಕಸರ ತಲೆ ಹಾರಿಸಿ
ದುಷ್ಟನಿಗ್ರಹ ಶಿಷ್ಟ ಅನುಗ್ರಹ
ಎಷ್ಟಾದರು ಅವತಾರ
ಅದೂ ಮುಗಿಯದು ಲೋಕವೆ ಹಾಗೆ
ನಿರಂತರ ಧಾರಾವಾಹಿ
ಇತ್ತ ವಿದೂಷಕ ವಿಧವಿಧ ವೇಷ
ಧರಿಸಿ ಪ್ರವೇಶಿಸುತಾನೆ
ಮಧ್ಯಂತರದಲಿ
ಅಥವಾ ಕೆಲವು ಸಲ ಸಣ್ಣ ಪಾತ್ರದಲಿ
ಉದಾಹರಣೆಗೆ ದೂತ
ಅಥವಾ ಅಂಬಿಗ
ರಾಯರ ಕೆಲಸ ದೇವರ ಕೆಲಸ
ಹೈರಾಣಾದ ಪ್ರೇಕ್ಷಕರನ್ನ
ನಗಿಸೋದೂ ಅವನ ಕೆಲಸ
ಆದರೆ ನಗಿಸೋದು ಯಾರು
ಖುದ್ದು ಈ ವಿದೂಷಕನ
ಅವನೆಂದೂ ನಗಲೇಬಾರದು
ಹೆಂಡ್ತಿಗೆ ಕಾಯಿಲೆ ಮಕ್ಕಳು ದಡ್ಡರು
ಇವನಿಗೊ ನಿದ್ದೇನೆ ಇಲ್ಲದೆ
ನೆತ್ತಿಗೇರಿದೆ ಕಪಿತ್ಥ ಜಂಬೂ
ಓ ದೇವರೆ, ನಿನ್ನ ಲೀಲೆಯಲಿ
ಈ ಇವನಿಗೇನು ಬೆಲೆ
ಈ ನಮಗೇನು ನೆಲೆ
ಬರಿನೆಲದಲ್ಲಿ ಕೂತವರು ನಾವು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...