Home / ಕವನ / ಕವಿತೆ / ಧಾರಾವಾಹಿ

ಧಾರಾವಾಹಿ

ರಕ್ಕಸರಿನ್ನೂ ಮುಗಿದಿಲ್ಲ
ರಕ್ಕಸರಿನ್ನೂ ಬರುತಿದ್ದಾರೆ
ಬರಲೇಬೇಕು
ರಕ್ಕಸರಿನ್ನೂ ಬರದಿದ್ದರೆ
ಮುಂದುವರಿಯುವುದು ಹೇಗೆ ?
ರಕ್ಕಸರಿರ್‍ತಾರೆ ಖಳನಾಯಕರಿರ್‍ತಾರೆ
ಚೌಕಿಯಲ್ಲಿ ವೇಷ ತೊಟ್ಟುಕೊಂಡು
ಮಲಗಿರ್‍ತಾರೆ ಇಲ್ಲವೆ ಚಕ್ಕಂದ
ಆಡಿಹಾಡಿರ್‍ತಾರೆ ಹಾಡಿಕೊಂಡಿರ್‍ತಾರೆ
ಸಮಯಕ್ಕೆ ಸರಿಯಾಗಿ ಎದ್ದು ಬರುತ್ತಾರೆ
ದುಷ್ಟ ವೇಷ ಪುಂಡು ವೇಷ ಪ್ರಚಂಡ ವೇಷ
ಬಣ್ಣದ ವೇಷ
ಹಾ ಎಂಥಾವೇಶ
ರಕ್ಕಸರೂ ಕೆಲ ಛದ್ಮವೇಷ
ಬಡ ಬಡ ಬ್ರಾಹ್ಮಣ ಕಳ್ಳ ಸನ್ಯಾಸಿ
ದಾರಿಹೋಕ ಇಲ್ಲವೆ ತೀರಾ ತಲೆಹೋಕ
ಹಾವಾಡಿಗ ವರ್‍ತಕ ಅಥವಾ
ಜನಸಾಮಾನ್ಯ
ವಂಚಿಸಿದ ನಂತರ ಅವರು ನಿಜ ವೇಷವ
ತೋರುವರು
ಅದೇನು ಅಕರಾಳ ವಿಕರಾಳ
ಏನು ರಾಳದ ಪುಡಿ ಎಡಬಲ ದೊಂದಿ
ಬಯಲ ಕೊನೆಯಿಂದ ಎದ್ದು ಬರುತಾರೆ
ಅದೇನಟ್ಟಹಾಸ ಅದೇನು ಹೂಂಕಾರ
ನಿದ್ದೆ ತೂಗುತ ಇದ್ದ ಜನ ಈಗ ಎಚ್ಚರ
ನೋಡಿದರಿದೋ ಎದುರಿಗೇ ಇದೆ ಒಂದು ಘೋರಾಕಾರ
ಜನ ತತ್ತರ
ಒಮ್ಮೆಲೆ ಹಾಹಾಕಾರ
ಏನಿದು ಉಪಟಳ ಏನಿದು ಹಿಂಸೆ
ಏನಿದು ಜನಾಂಗ ಹತ್ಯೆ
ಈಗುಳಿದುದು ಒಂದೇ
ದೇವರ ಪ್ರಾರ್‍ಥನೆ
ಅಯ್ಯ ಬಾರೋ ಅಪ್ಪ ಬಾರೋ
ಹೇಗಾದರೂ ನಮ್ಮ ಕಾಪಾಡೋ
ಅವನೂ ಬರುತಾನೆ ಶಂಖ ಊದಿ
ಬರದೇನು ಮಾಡ್ತಾನೆ ಧರ್‍ಮಗ್ಲಾನಿ
ನಿವಾರಿಸಬೇಕು ತಾನೆ
ಹತ್ತವತಾರಿ ಇದೆಷ್ಟನೆ ಬಾರಿ
ಬಾರಿ ಬಾರಿಗೂ ರಕ್ಕಸರ ತಲೆ ಹಾರಿಸಿ
ದುಷ್ಟನಿಗ್ರಹ ಶಿಷ್ಟ ಅನುಗ್ರಹ
ಎಷ್ಟಾದರು ಅವತಾರ
ಅದೂ ಮುಗಿಯದು ಲೋಕವೆ ಹಾಗೆ
ನಿರಂತರ ಧಾರಾವಾಹಿ
ಇತ್ತ ವಿದೂಷಕ ವಿಧವಿಧ ವೇಷ
ಧರಿಸಿ ಪ್ರವೇಶಿಸುತಾನೆ
ಮಧ್ಯಂತರದಲಿ
ಅಥವಾ ಕೆಲವು ಸಲ ಸಣ್ಣ ಪಾತ್ರದಲಿ
ಉದಾಹರಣೆಗೆ ದೂತ
ಅಥವಾ ಅಂಬಿಗ
ರಾಯರ ಕೆಲಸ ದೇವರ ಕೆಲಸ
ಹೈರಾಣಾದ ಪ್ರೇಕ್ಷಕರನ್ನ
ನಗಿಸೋದೂ ಅವನ ಕೆಲಸ
ಆದರೆ ನಗಿಸೋದು ಯಾರು
ಖುದ್ದು ಈ ವಿದೂಷಕನ
ಅವನೆಂದೂ ನಗಲೇಬಾರದು
ಹೆಂಡ್ತಿಗೆ ಕಾಯಿಲೆ ಮಕ್ಕಳು ದಡ್ಡರು
ಇವನಿಗೊ ನಿದ್ದೇನೆ ಇಲ್ಲದೆ
ನೆತ್ತಿಗೇರಿದೆ ಕಪಿತ್ಥ ಜಂಬೂ
ಓ ದೇವರೆ, ನಿನ್ನ ಲೀಲೆಯಲಿ
ಈ ಇವನಿಗೇನು ಬೆಲೆ
ಈ ನಮಗೇನು ನೆಲೆ
ಬರಿನೆಲದಲ್ಲಿ ಕೂತವರು ನಾವು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...