Home / ಕವನ / ಕವಿತೆ / ಏನಿದು ದೆವ್ವ ಏನಿದು ಬೆಂಕಿ?

ಏನಿದು ದೆವ್ವ ಏನಿದು ಬೆಂಕಿ?

ಪುಸ್ತಕಗಳಿವೆ ಅವು ಇರಬೇಕಾದ ಜಾಗದಲ್ಲಿ ಮರದ
ಆಟಿಕೆಗಳಲ್ಲಿ ಒಪ್ಪ ಓರಣವಾಗಿ ಪೆಪಿರಸ್ ಹಾಳೆಗಳಲ್ಲಿ
ಆದರೆ ಯಾಕೆ ಕಳೆದೊಂದು ವಾರದಿಂದಲು ಯಾವ
ಓದುಗರೂ ಬಂದಿಲ್ಲ-ಒಬ್ಬ ವೃದ್ಧ ವಿದ್ವಾಂಸನ ಹೊರತು?
ಆತ ಪ್ರತಿದಿನ ಬರುವವ ಗ್ರಂಥಾಲಯ ತೆರೆಯಲು ಕಾಯುವವ
ಇಡೀ ದಿನ ಇದ್ದು
ಮುಚ್ಚುವ ವೇಳೆ ಗೊಣಗುವವ
ಅವನಿಗೋಸ್ಕರವೆ ಬರುವಂತೆ ಬರುತ್ತಾನೆ ಗ್ರಂಥಪಾಲಕ
ಗ್ರಂಥಪಾಲಕನ ಮುಖದಲ್ಲೇನೋ ಸಾರ್ಥಕತೆ ಮತ್ತು ದುಗುಡ
ಏಕ ಕಾಲಕ್ಕೆ
ಕಸ ತೆಗವ ಆ ಸುಂದರ ಹುಡುಗಿಯೂ ಬರುತ್ತಿಲ್ಲ
ಕಿಟಿಕಿ ಮುಚ್ಚಿದರೂ ಬಂದು ಬೀಳುತ್ತದೆ ಉತ್ತರದಿಂದ ಧೂಳು ಕಸ
ಕೂತುಕೊಳ್ಳುತ್ತವೆ ಪ್ರತಿ ಪುಸ್ತಕದ ಮೇಲೆ
ಆ ಹುಡುಗಿಯ ಕೈಯ ಮಖಮಲ್ಲಿನ ವಸ್ತ್ರದ ಸುಖ
ಇವುಗಳ ಮೈಗೀಗ ಇಲ್ಲ
ಏನಾಗಿದೆ ಎಲ್ಲರಿಗೆ?
ಪುಸ್ತಕಗಳಿಗೆ ಗೊತ್ತಿಲ್ಲ
ಕೊಳ್ಳಿದೆವ್ವಗಳು ಬರುತ್ತಿದ್ದಾವೆ ಕತ್ತಲ ಕೂಪದಿಂದ ಅವು ಅಕ್ಷರ ದ್ವೇಷಿಗಳು
ಇಷ್ಟೊಂದು ದೊಡ್ಡ ಭಂಡಾರ ಉರಿಯಲೂ ಸಮಯ ಬೇಕು
ದೆವ್ವಗಳಿಗೆ ಅಸಹನೆ ಒಂದೇ ಒಂದು ಹಾಳೆಯನ್ನೂ ಬಿಡದೆ
ಉರಿಸಿದರೇ ತೃಪ್ತಿ
ಕವಿಗಳು ಕಲಾವಿದರು ವಿಜ್ಞಾನಿಗಳೀಗ ಭಸ್ಮೀಭೂತ ನಾಮಿಕರು ಅನಾಮಿಕರು
ಈ ಭೂರಿ ದಹನದಿಂದ ಲೋಕ ಚೇತರಿಸಿಕೊಳ್ಳುವುದಕ್ಕೆ ಇನ್ನು
ಅದೆಷ್ಟೋ ಕಾಲ ಬೇಕು ಆದರೂ ಕೊಳ್ಳಿ ದೆವ್ವಗಳು ನಾಶವಾಗುವುದಿಲ್ಲ ಯಾವತ್ತಿಗೂ
ಅವಕ್ಕೀಗ ಇರುಳ ಆಶ್ರಯ ಬೇಡ ಹಾಡು ಹಗಲೇ ಸುತ್ತಾಡುತ್ತವೆ
ಬೆಂಕಿ ಕಾಣುವುದಿಲ್ಲ ಆದರೂ ಬೆಂಕಿಯಿದೆ
ತೂಕಡಿಸುವ ಓದುಗರ ಮೈಮನಸು ನುಗ್ಗಿ
ತೀರಿಸಿಕೊಳ್ಳಲು ತಮ್ಮ ಕಾಲಾಂತರದ ಹಗೆ
ವೃದ್ಧ ವಿದ್ವಾಂಸನಿಗದು ಗೊತ್ತಿದೆಯೇ ಇಷ್ಟೊಂದು ಓದುತ್ತ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...