Home / ಕವನ / ಕವಿತೆ / ಏನಿದು ದೆವ್ವ ಏನಿದು ಬೆಂಕಿ?

ಏನಿದು ದೆವ್ವ ಏನಿದು ಬೆಂಕಿ?

ಪುಸ್ತಕಗಳಿವೆ ಅವು ಇರಬೇಕಾದ ಜಾಗದಲ್ಲಿ ಮರದ
ಆಟಿಕೆಗಳಲ್ಲಿ ಒಪ್ಪ ಓರಣವಾಗಿ ಪೆಪಿರಸ್ ಹಾಳೆಗಳಲ್ಲಿ
ಆದರೆ ಯಾಕೆ ಕಳೆದೊಂದು ವಾರದಿಂದಲು ಯಾವ
ಓದುಗರೂ ಬಂದಿಲ್ಲ-ಒಬ್ಬ ವೃದ್ಧ ವಿದ್ವಾಂಸನ ಹೊರತು?
ಆತ ಪ್ರತಿದಿನ ಬರುವವ ಗ್ರಂಥಾಲಯ ತೆರೆಯಲು ಕಾಯುವವ
ಇಡೀ ದಿನ ಇದ್ದು
ಮುಚ್ಚುವ ವೇಳೆ ಗೊಣಗುವವ
ಅವನಿಗೋಸ್ಕರವೆ ಬರುವಂತೆ ಬರುತ್ತಾನೆ ಗ್ರಂಥಪಾಲಕ
ಗ್ರಂಥಪಾಲಕನ ಮುಖದಲ್ಲೇನೋ ಸಾರ್ಥಕತೆ ಮತ್ತು ದುಗುಡ
ಏಕ ಕಾಲಕ್ಕೆ
ಕಸ ತೆಗವ ಆ ಸುಂದರ ಹುಡುಗಿಯೂ ಬರುತ್ತಿಲ್ಲ
ಕಿಟಿಕಿ ಮುಚ್ಚಿದರೂ ಬಂದು ಬೀಳುತ್ತದೆ ಉತ್ತರದಿಂದ ಧೂಳು ಕಸ
ಕೂತುಕೊಳ್ಳುತ್ತವೆ ಪ್ರತಿ ಪುಸ್ತಕದ ಮೇಲೆ
ಆ ಹುಡುಗಿಯ ಕೈಯ ಮಖಮಲ್ಲಿನ ವಸ್ತ್ರದ ಸುಖ
ಇವುಗಳ ಮೈಗೀಗ ಇಲ್ಲ
ಏನಾಗಿದೆ ಎಲ್ಲರಿಗೆ?
ಪುಸ್ತಕಗಳಿಗೆ ಗೊತ್ತಿಲ್ಲ
ಕೊಳ್ಳಿದೆವ್ವಗಳು ಬರುತ್ತಿದ್ದಾವೆ ಕತ್ತಲ ಕೂಪದಿಂದ ಅವು ಅಕ್ಷರ ದ್ವೇಷಿಗಳು
ಇಷ್ಟೊಂದು ದೊಡ್ಡ ಭಂಡಾರ ಉರಿಯಲೂ ಸಮಯ ಬೇಕು
ದೆವ್ವಗಳಿಗೆ ಅಸಹನೆ ಒಂದೇ ಒಂದು ಹಾಳೆಯನ್ನೂ ಬಿಡದೆ
ಉರಿಸಿದರೇ ತೃಪ್ತಿ
ಕವಿಗಳು ಕಲಾವಿದರು ವಿಜ್ಞಾನಿಗಳೀಗ ಭಸ್ಮೀಭೂತ ನಾಮಿಕರು ಅನಾಮಿಕರು
ಈ ಭೂರಿ ದಹನದಿಂದ ಲೋಕ ಚೇತರಿಸಿಕೊಳ್ಳುವುದಕ್ಕೆ ಇನ್ನು
ಅದೆಷ್ಟೋ ಕಾಲ ಬೇಕು ಆದರೂ ಕೊಳ್ಳಿ ದೆವ್ವಗಳು ನಾಶವಾಗುವುದಿಲ್ಲ ಯಾವತ್ತಿಗೂ
ಅವಕ್ಕೀಗ ಇರುಳ ಆಶ್ರಯ ಬೇಡ ಹಾಡು ಹಗಲೇ ಸುತ್ತಾಡುತ್ತವೆ
ಬೆಂಕಿ ಕಾಣುವುದಿಲ್ಲ ಆದರೂ ಬೆಂಕಿಯಿದೆ
ತೂಕಡಿಸುವ ಓದುಗರ ಮೈಮನಸು ನುಗ್ಗಿ
ತೀರಿಸಿಕೊಳ್ಳಲು ತಮ್ಮ ಕಾಲಾಂತರದ ಹಗೆ
ವೃದ್ಧ ವಿದ್ವಾಂಸನಿಗದು ಗೊತ್ತಿದೆಯೇ ಇಷ್ಟೊಂದು ಓದುತ್ತ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...