Home / ಕವನ / ಕವಿತೆ / ಹೀಗಿರಲು

ಹೀಗಿರಲು

ಈ ಕವಿತೆಗಳಲ್ಲಿ ಯಾಕೆ ಇಷ್ಟೊಂದು ಏಕಾಂತ

ಪ್ರಾಕೃತದ ಸ್ಮೃತಿಯಂತೆ
ಹೋದಲ್ಲಿ ಬರುವ ತಾಳೆ ಮರವೇ
ದಾರಿಯುದ್ದಕ್ಕೂ
ಜತೆಗಾರ

ಯಾಕಿಲ್ಲ ಅರ್ಥ ಯಾಕಿಲ್ಲ ಉದ್ದೇಶ
ಯಾಕಿಲ್ಲ ಪ್ರಮಾಣ ಹಾಗೂ ವ್ಯಾಕರಣ
ನಿನ್ನ ತಾಡಪತ್ರಗಳ ನಿಗೂಢ ಸಂಜ್ಞೆಗಳಲ್ಲಿ
ಕೇವಲ ಗೆರೆಗಳು ಮಾತ್ರ ಕಾಣಿಸುತ್ತಿವೆ ಯಾಕೆ
ಬಳಕೆಯಲ್ಲಿರದ ದಾರಿಗಳ ಹಾಗೆ
ಹುಲ್ಲು ಕಡ್ಡಿ ನಾಚಿಕೆ ಮುಳ್ಳು ಹಬ್ಬಿ

ಹಾಗೂ ಅವನು ಹೋಗದ ಜಾಗಗಳೇ ಇಲ್ಲ
ಉಗಿಬಂಡಿಯಲ್ಲೂ ಅವನ ಜತೆ ಬಸ್ಸಿನಲ್ಲೂ
ಹೊಸ ಪೇಟೆಯಲ್ಲಿ ಅವನು ಸುತ್ತಾಡಿದಾಗಲೂ
ಜನ ನಿಬಿಡತೆಯಲ್ಲಿ ಮತ್ತು ಜನ ಶೂನ್ಯತೆಯಲ್ಲಿ
ಪಂಪನ ಓದಿದಾಗಲೂ ಶೇಕ್ಸ್‌ಪಿಯರನ ಅನುವಾದಿಸಿದಾಗಲೂ
ನಾಡಿನಲ್ಲೂ ಪರದೇಶದಲ್ಲೂ
ಎಲ್ಲೆಡೆಯಲ್ಲೂ ಮಗುವಿನಂತೆ ಛಲಹಿಡಿದು

ಅದರ ಗಲಗಲ ಸದ್ದು ಇತರೆಲ್ಲ
ಸದ್ದುಗಳಿಗಿಂತ ಅವನಿಗಿಷ್ಟ ಅರ್ಥವಿಲ್ಲದೆ ಅದು ಮಾತಾಡುವ ಕ್ರಮಕ್ಕೆ
ಮನಸೋತ
ಮನುಷ್ಯ ಕಾಣದ್ದನ್ನು ಅದು ಕಾಣುವುದು ಬೆಟ್ಟದಾಚೆಗಿರುವುದನ್ನೂ ನೋಡುವುದು

ಅಷ್ಟೊಂದು ಎತ್ತರ ಅದರ ಶಿರ
ಹವಾಮಾನದ ಸಕಲ ಶಕುನಗಳನ್ನೂ ಮೊದಲು ಹಿಡಿಯುವುದು ಅದು
ಆದರೂ ಎಷ್ಟೊಂದು ಒಂಟಿ

ಕೆಲವು ಸಲ ಅದರಂತೆ ಆಗುವ ವಾಂಛೆ
ನೀಳ ಕಾಯ ಮತ್ತು ಸೂರ್ಯ ಪ್ರಭೆ
ಜಗದ ಹಂಗಿಲ್ಲದೆ ಒಬ್ಬನಾಗುವ ಇಚ್ಛೆ
ಕಾಲದ ಗಣನೆ ಮೈಮನದ ಸುಳಿಯಲ್ಲಿ
ಅಮೃತತ್ವ ಆದರ ಹಣ್ಣಿನಲ್ಲಿ

ಸುದೀರ್ಘ ನೆರಳು ಬಯಲಲ್ಲಿ ಬೆಳೆಯಲ್ಲಿ
ಬಿದ್ದು ತೇಲುವುದು ಅದರಲ್ಲಿ
ಹುಲ್ಲು ಮಲಗುವುದು
ಹಕ್ಕಿಗಳು ಹಾಯುವುವು
ಇಂದು ನಾಳೆಗಳ ಹಿಂದು ಮುಂದಾಗಿ

ಹೀಗಿರಲು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...