Home / ಕವನ / ಕವಿತೆ / ಹೀಗಿರಲು

ಹೀಗಿರಲು

ಈ ಕವಿತೆಗಳಲ್ಲಿ ಯಾಕೆ ಇಷ್ಟೊಂದು ಏಕಾಂತ

ಪ್ರಾಕೃತದ ಸ್ಮೃತಿಯಂತೆ
ಹೋದಲ್ಲಿ ಬರುವ ತಾಳೆ ಮರವೇ
ದಾರಿಯುದ್ದಕ್ಕೂ
ಜತೆಗಾರ

ಯಾಕಿಲ್ಲ ಅರ್ಥ ಯಾಕಿಲ್ಲ ಉದ್ದೇಶ
ಯಾಕಿಲ್ಲ ಪ್ರಮಾಣ ಹಾಗೂ ವ್ಯಾಕರಣ
ನಿನ್ನ ತಾಡಪತ್ರಗಳ ನಿಗೂಢ ಸಂಜ್ಞೆಗಳಲ್ಲಿ
ಕೇವಲ ಗೆರೆಗಳು ಮಾತ್ರ ಕಾಣಿಸುತ್ತಿವೆ ಯಾಕೆ
ಬಳಕೆಯಲ್ಲಿರದ ದಾರಿಗಳ ಹಾಗೆ
ಹುಲ್ಲು ಕಡ್ಡಿ ನಾಚಿಕೆ ಮುಳ್ಳು ಹಬ್ಬಿ

ಹಾಗೂ ಅವನು ಹೋಗದ ಜಾಗಗಳೇ ಇಲ್ಲ
ಉಗಿಬಂಡಿಯಲ್ಲೂ ಅವನ ಜತೆ ಬಸ್ಸಿನಲ್ಲೂ
ಹೊಸ ಪೇಟೆಯಲ್ಲಿ ಅವನು ಸುತ್ತಾಡಿದಾಗಲೂ
ಜನ ನಿಬಿಡತೆಯಲ್ಲಿ ಮತ್ತು ಜನ ಶೂನ್ಯತೆಯಲ್ಲಿ
ಪಂಪನ ಓದಿದಾಗಲೂ ಶೇಕ್ಸ್‌ಪಿಯರನ ಅನುವಾದಿಸಿದಾಗಲೂ
ನಾಡಿನಲ್ಲೂ ಪರದೇಶದಲ್ಲೂ
ಎಲ್ಲೆಡೆಯಲ್ಲೂ ಮಗುವಿನಂತೆ ಛಲಹಿಡಿದು

ಅದರ ಗಲಗಲ ಸದ್ದು ಇತರೆಲ್ಲ
ಸದ್ದುಗಳಿಗಿಂತ ಅವನಿಗಿಷ್ಟ ಅರ್ಥವಿಲ್ಲದೆ ಅದು ಮಾತಾಡುವ ಕ್ರಮಕ್ಕೆ
ಮನಸೋತ
ಮನುಷ್ಯ ಕಾಣದ್ದನ್ನು ಅದು ಕಾಣುವುದು ಬೆಟ್ಟದಾಚೆಗಿರುವುದನ್ನೂ ನೋಡುವುದು

ಅಷ್ಟೊಂದು ಎತ್ತರ ಅದರ ಶಿರ
ಹವಾಮಾನದ ಸಕಲ ಶಕುನಗಳನ್ನೂ ಮೊದಲು ಹಿಡಿಯುವುದು ಅದು
ಆದರೂ ಎಷ್ಟೊಂದು ಒಂಟಿ

ಕೆಲವು ಸಲ ಅದರಂತೆ ಆಗುವ ವಾಂಛೆ
ನೀಳ ಕಾಯ ಮತ್ತು ಸೂರ್ಯ ಪ್ರಭೆ
ಜಗದ ಹಂಗಿಲ್ಲದೆ ಒಬ್ಬನಾಗುವ ಇಚ್ಛೆ
ಕಾಲದ ಗಣನೆ ಮೈಮನದ ಸುಳಿಯಲ್ಲಿ
ಅಮೃತತ್ವ ಆದರ ಹಣ್ಣಿನಲ್ಲಿ

ಸುದೀರ್ಘ ನೆರಳು ಬಯಲಲ್ಲಿ ಬೆಳೆಯಲ್ಲಿ
ಬಿದ್ದು ತೇಲುವುದು ಅದರಲ್ಲಿ
ಹುಲ್ಲು ಮಲಗುವುದು
ಹಕ್ಕಿಗಳು ಹಾಯುವುವು
ಇಂದು ನಾಳೆಗಳ ಹಿಂದು ಮುಂದಾಗಿ

ಹೀಗಿರಲು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...