Home / ಕವನ / ಕವಿತೆ / ಇತಿಹಾಸದ ದಾರಿ

ಇತಿಹಾಸದ ದಾರಿ

ಇತಿಹಾಸದ ದಾರಿ ನೇರವಾಗಿತ್ತೆ ಎಂದಾದರೂ
ಎಡವಿಕೊಂಡೇ ಬಂದಿತೆ ಅದು ಇಲ್ಲೀವರೆಗೆ
ಇಲ್ಲಿಂದ ಇನ್ನೆಲ್ಲಿಗೆ ಕೋ ವಾಡಿಸ್ ಎನ್ನುತ್ತ ಪ್ರತಿಯೊಂದು ಬಾರಿ?
ದಾರಿ ಇದ್ದಿದ್ದರೆ ತಾನೆ ಅದಕ್ಕೆ ದಾರಿ ಕೇಳುವುದಕ್ಕು? ದಾರಿಯಿಲ್ಲದಲ್ಲಿ
ಸಾಗುವುದು ಇತಿಹಾಸ
ನನಗಿಷ್ಟೆ ಗೊತ್ತು

ಸಹಸ್ರಾರು ಗಾಯಗಳು ಗಾಯದ ಮೇಲೆ ಬರೆಗಳು
ಕೆಲವು ಮಾಯ್ದಿವೆ ಕಾಲಾಂತರದಲ್ಲಿ ಕಾಣಿಸದಾಗಿವೆ
ಕೆಲವು ವ್ರಣಗಳಿನ್ನೂ ಸೋರುತ್ತಿವೆ

ಇತಿಹಾಸದ ಬೃಹತ್ತು ತಾಳುವಂಥದು ನಮಗೆ
ಗೊತ್ತಾಗುವುದಿಲ್ಲ
ಇತಿಹಾಸದ ಸುಸ್ತೆನ್ನುವುದಿದೆ ಹೆಬ್ಬಂಡೆಗಳ ಮೇಲೆ ಕುಳಿತು
ದಣಿವಾರಿಸಿಕೊಳ್ಳುವುದು ದೈತ್ಯ ಇಗುವಾನ ಕುಳಿತ ಹಾಗೆ
ಸತ್ತಂತೆ ಸತ್ತಿತೆಂದರೆ ತಲೆಯಾಡಿಸುವುದು
ಅದರ ಹಿನ್ನೋಟ ಅಂಥ ಕಾಲದಲಿ

ಭೀಕರ ಚಂಡಮಾರುತಕ್ಕೆ ಅಪ್ಪಳಿಸುವ ಮರ
ಅಲ್ಲಲ್ಲಿ ಗೂಡುಕಟ್ಟಿರುವ ಇರುವೆಗಳು
ಕೆಲವು ಬಿದ್ದು ಸಾಯುತ್ತವೆ ನೆಲದಲ್ಲಿ
ಇನ್ನುಳಿದವು ಹಾಗೇ ನೋಡುತ್ತವೆ ಬೆಪ್ಪಾಗಿ

ಎಲ್ಲಿ ಅಡಗಿರುತ್ತದೆ ಇತಿಹಾಸದ ಕ್ರತುಶಕ್ತಿ
ಎಂದು ಕೇಳುತ್ತೇನೆ
ರಾಜನಲ್ಲಿ ಅಥವ ವಿದೂಷಕನಲ್ಲಿ?

ಆಟದ ಗೆಲುವು ಎಲ್ಲಿರುತ್ತದೆ ಇದೊಂದು
ಆಟವೆ ಆಗಿದ್ದಲ್ಲಿ
ಆಡಿದವನ ಕೈಯಲ್ಲಿ ಅಥವ ಕಾಯಿಯ ವಕ್ರತೆಯಲ್ಲಿ?

ನದಿ ಮತ್ತು ಸೇತು ಗಿರಿ ಮತ್ತು ಸುರಂಗ
ಹಡಗವೂ ತುಫಾನವೂ ಯಾವುದು
ಯಾವುದು?

ಇಷ್ಟು ದೂರಕ್ಕೆ ವಕ್ರತೆಯೆನ್ನುವುದೇ ಇಲ್ಲ
ಎಲ್ಲ ವಕ್ರತೆಗಳೂ ಸರಳ ರೇಖೆಗಳೆ ಯಾಕೆಂದರೆ ನಾವು ಅನಂತತೆಯ
ಅಂಚಿನಲ್ಲಿದ್ದೇವೆ ಇಣುಕುತ್ತ
ಚಂದ್ರನ ಆಳಗಳೂ ದೃಷ್ಟಿ ಬೊಟ್ಟುಗಳೆ

ಸರಿ ತಪ್ಪು ನ್ಯಾಯಾನ್ಯಾಯಗಳು ಮೆನೆಖಿಯನ್ ವಿಂಗಡನೆ
ಇಂದು ಕಾರಣ ನೀಡಿದಷ್ಟೂ ದ್ವಂದ್ವಗಳು ನಾಶ
ಇತಿಹಾಸವೊಂದು ಕಂಟಿನ್ಯೂವಂ
ಅಥವ ತರಂಗಾಂತರಂಗ?

ಕತ್ತಲಿಲ್ಲದ ಬೆಳಕಿಲ್ಲದ ಮಬ್ಬಿನ ಪ್ರದೇಶ
ಯಾರು ಸಂಜ್ಞಾದೇವಿ ಯಾರು ಛಾಯಾದೇವಿ
ಪುರಾಣಗಳ ನಾಶಪಡಿಸಿದ ಇತಿಹಾಸ ಬೇರ್ಪಡಿಸುವಂತಿಲ್ಲ
ಕಾಯದಿಂದ ಛಾಯೆಯ

ಅದು ಹಿಂದೆ ನೋಡಿದಾಗ ತನ್ನ ಕಣ್ಣನ್ನೆ ಕಂಡ ಹಾಗೆ
ಮುಂದೆ ನೋಡಿದಾಗ ಅದಕ್ಕೆ ಕಣ್ಣುಗಳೆ ಇಲ್ಲ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...