Home / ಕವನ / ಕವಿತೆ / ಕೆಲವು ದೇಶಗಳು ರಶಿಯದ ಹಾಗೆ

ಕೆಲವು ದೇಶಗಳು ರಶಿಯದ ಹಾಗೆ

ಕೆಲವು ದೇಶಗಳು ರಶಿಯದ ಹಾಗೆ ಬಹಳ ಬೃಹತ್ತಾಗಿ
ಕೆಲವು ಮಾಲಿಯ ಹಾಗೆ ಸಂಕ್ಷಿಪ್ತ

ದೊಡ್ಡ ದೇಶದ ಜನ ಒಬ್ಬರಿಗೊಬ್ಬರು ಅಪರಿಚಿತ
ಒಂದು ಕೊನೆಯಿಂದ ಇನ್ನೊಂದು ಕೊನೆ ತನಕ
ತಲುಪಲು ದಿನಗಳು ವಾರಗಳು ಮಾಸಗಳು ಬೇಕು

ಪ್ರತಿ ಯಾತ್ರೆಯೂ ಒಂದು ಮಹಾಯಾತ್ರೆ
ಅಥವಾ ಶಿಕ್ಷೆ
ಮೋಸ್ಕೋದಿಂದ ಸೈಬೀರಿಯಾಕ್ಕೆ
ಕವಿಗಳು ಹೋದರು ಕ್ರಾಂತಿಕಾರಿಗಳು ಹೋದರು

ಚಿಕ್ಕ ದೇಶಗಳಲ್ಲಿ ಎಲ್ಲರಿಗೆ ಎಲ್ಲರೂ ಗೊತ್ತು
ಸುದ್ದಿಯೆಂದರೆ ಅದು ಬಾವಿಕಟ್ಟೆಯಲಿ ನೆರೆಕರೆಯ ಪಿಸುಮಾತು

ಸಾಗುವುದಕ್ಕೆ ಆರಂಭ ಅಂತ್ಯವೆಂಬುದಿಲ್ಲ
ಅದು ಗದ್ದೆ ಸುತ್ತಿದ ಹಾಗೆ ನಮ್ಮ ಹಳ್ಳಿಯಲ್ಲಿ ದಿನಾ

ದೊಡ್ಡ ದೇಶಗಳಲ್ಲಿ ಏಕ ಕಾಲಕ್ಕೆ ಒಂದೆಡೆ ಬೀಳುವುದು ಹಿಮ
ಇನ್ನೊಂದೆಡೆ ಬಿಸಿಲ ಝಳ
ಬೆಟ್ಟದ ತಪ್ಪಲಲ್ಲಿ ಕುರಿಗಳ ಹಿಂಡು

ಕರಾವಳಿಯಲ್ಲಿ ಬೆಸ್ತರ ದಂಡು
ಅವರ ಭಾಷೆಗಳು ಬೇರೆ ಅರ್ಥವಾಗುವುದು ಸ್ವಲ್ಪ ಸ್ವಲ್ಪ

ಚಿಕ್ಕ ದೇಶಗಳಲ್ಲಿ ಹವೆಯೊಂದೇ ಭಾಷೆಯೊಂದೇ
ಉಡುತೊಡುವ ರೀತಿ ಒಂದೇ ಊಟ ಒಂದೇ

ಚರಿತ್ರೆ ಹಣ್ಣು ಕತ್ತರಿಸುವಂತೆ ಕತ್ತರಿಸಿ ಇಡಲಿಲ್ಲ
ಮಾನವ ಜನಾಂಗವನ್ನು ಒಂದೆ ತಾಟಿನಲ್ಲಿ ನೀಟಾಗಿ

ನದಿಯೂ ಹರಿಯಲಿಲ್ಲ ನೇರ ಗೆರೆಗಳಲ್ಲಿ ಪರ್ವತಗಳೂ
ಇದ್ದುವು ತಮ್ಮ ಖುಷಿಯಲ್ಲಿ

ಸರಿಪಡಿಸುವ ಎಲ್ಲ ಪ್ರಯತ್ನಗಳೂ ತತ್ತರಿಸಿ ಬೀಳುತ್ತಿವೆ
ಸರಿ ಯಾವುದು ತಪ್ಪು ಯಾವುದು ಎಂದು ಗೊತ್ತಿಲ್ಲದಿರುತ್ತ

ವಲಸೆ ಬಂದ ಹಕ್ಕಿಗಳೇ
ನೀವೇನು ಹೇಳುವಿರಿ ಎಷ್ಟು ದೇಶಗಳ ಕಂಡವರು
ಮಾತಾಡದೆ ಇರುವಿರಿ
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...