Home / ಕವನ / ಕವಿತೆ / ಅದರ ಪಾಡಿಗೆ

ಅದರ ಪಾಡಿಗೆ

ಕನಸಿಗನ ಕನವರಿಕೆ ಕವನ ಅಲ್ಲಲ್ಲಿ
ವಾಕ್ಯ ಮುರಿದ ವ್ಯಾಕರಣ ತನಗೆ ತಾನೇ
ಬದ್ಧ ಉಳಿದಂತೆ ಎಲ್ಲವೂ ಅಸಂಬದ್ಧ
ಕಾರ್ಯವ ಹುಡುಕುವುದು ಕಾರಣ

ಮಧ್ಯರಾತ್ರಿ ಮಲಗಿದ ಧರಿತ್ರಿ ವಿಸ್ಮಯ
ತುಂಬಿದ ಜನನಿಬಿಡ ಸಂಜ್ಞೆ ಬಿಂಬಿಸುವ
ಹಾಗೆ ದಿಂಬಿನ ಮೇಲೆ ಬಿಂಬ ಮಗ್ಗುಲು
ಬದಲಿಸಿದ ಉದ್ಧತ ಪ್ರಜ್ಞೆ

ಕದವಿಕ್ಕಿ ಬೀಗದ ಕೈ ಬಿಸಾಕಿದ ಪದಗಳ
ನಡುವೆ ಅಂತರ ಬಹಳ ದಾಟಿದವನೂ
ನಾನೆ ಕುಸಿದವನೂ ನಾನೆ
ದಿಡ್ಡಿ ಬಾಗಿಲ ಹತ್ತಿರ

ಆಲಸಿಗ ಕೈಗೊಂಡ ಸುದೀರ್ಘ
ಯಾನ ಯಾವುದೇ ಪೂರ್ವಸಿದ್ಧತೆ ವಿನಾ
ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆ ಎಲ್ಲಿ
ರುವೆನೆಂಬುದನೆ ಮರೆತವನ

ಕೆಲವರು ನದಿ ದಾಟಿ ಹೋದರು
ಕೆಲವರು ಸೂರ್ಯಾಸ್ತ ನೋಡುತ್ತ
ನಿಂತರು ಕೆಲವರು ಗ್ರಾಮಾಂತರಗಳಲ್ಲಿ
ಕರಗಿದರು ಕೆಲವರು ಎದ್ದು ಹೋದರೂ

ಇದ್ದಲ್ಲಿ ಇದ್ದರು ಎಲ್ಲ ವೈರುಧ್ಯಗಳೂ
ಸರಿಗಮ ಒಂದೇ ಸಾಲಿನಲ್ಲಿ ಬೆಂಕಿ ಮತ್ತು
ಹಿಮ ಕಾಡಿನಲ್ಲಿ ವ್ಯಾಘ್ರ ಬಯಲಲ್ಲಿ ದನ
ಮಧ್ಯಾಹ್ನ ಟಾರಿನ ಪರಿಮಳ ಸಂಜೆ ಮಲ್ಲಿಗೆಯ

ಘಮಘಮ ಇರುಳೆಲ್ಲಾ ಎಚ್ಚರವಿದ್ದ
ಗೂಬೆ ಹಗಲು ತೂಗುವುದು ನಿದ್ದೆ
ಮಳೆಗೆ ಕಾಯುವ ಅಣಬೆಯ ಅತಿಸೂಕ್ಷ್ಮ ಬಿತ್ತು
ಬೇಸಿಗೆಯೆಲ್ಲಾ ಬಣಬೆಯೊಳಗಿತ್ತು

ಮನೆಯನೊಂದ ಕಟ್ಟಿಸಲೇನು ಮೋಡದ
ಕೆಳಗೆ ಮಳೆನೀರು ಯಾವ ಲೆಕ್ಕ ಬೇಸಿಗೆಯ
ಸೆಕೆ ಯಾವ ಲೆಕ್ಕ ಮೋಡವದರ ನಾಡಿಗೆ
ಮನೆ ಅದರ ಪಾಡಿಗೆ-ಎನ್ನುವುದೊಂದು
ಹಳೇ ಪದ್ಯ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...