Home / ಕವನ / ಕವಿತೆ / ಗೀತೆಯ ಹುಟ್ಟು

ಗೀತೆಯ ಹುಟ್ಟು

ಧರ್ಮಕ್ಷೇತ್ರದ ಭೂಮಿ
ಅಸಮ ಬಲ ಇಕ್ಕಡೆಯೊ-
ಳದಮಧ್ಯೆ ಗಂಭೀರ-ಶ್ರೀಕೃಷ್ಣನು.
ಕುರುಕ್ಷೇತ್ರ ಕುರುಸೇನೆ
ಕೌರವನ ರಣಘೋಷ-
ಸೇನಾನಿ ಫಲ್ಗುಣನು ಬಾಣಸಹಿತ.

ಕುರುಸೇನಾ ಕಡಲಲ್ಲಿ
ತೇಲುತಿಹ ಅರ್ಜುನನ
ರಥವೊಂದು-ಸಾರಥಿಯು ಶ್ರೀಕೃಷ್ಣನು;
ರೋಷ ಸಹನೆಯ ಮಧ್ಯೆ
ಬೇಕೊ ಬೇಡೆಂಬುದರ
ದ್ವಂದ್ವದಲಿ-ಜೀಕಲಾಡುತಯಿರ್ದುದು!

ಭಾರತದ ವಿಧಿನಿಯಮ-
ವನ್ನು ನಡೆಸುವ ಭರದಿ
ಸೇರಿರುವ ಪ್ರಶಾಂತ ಸೂರ್ಯೋದಯ
ಸೂರ್ಯಕಾಂತಿಯ ನಲ್ಮೆ
ಪಾರ್ಥಚಿತ್ರದ ಒಲ್ಮೆ
ಒಂದಾಗಿ ಸೇರಿದುವು ಕುರುಕ್ಷೇತ್ರದಿ.

ನೋಡಿದನು ಬಂಧುಗಳ,
ಗುರುಗಳನು ಹಿರಿಯರನು-
ಬೆಂದಮನ ಸಂತೈಸೆ ಚಕ್ರಧಾರಿ!
ಉಸುರಿದನು ಗೀತೆಯನು-
ವಿಶ್ವಯೋಗದ ಗುಟ್ಟು
ಬಿಚ್ಚಿದನು-ಅರ್ಜುನಗೆ ಅತಿಕಾಮಿಗೆ.

ಕೌರವನ ಹಠಯೋಗ
ಭಾರತದ ಬಲತ್ಯಾಗ-
ಕುರುಕ್ಷೇತ್ರ ಋಣಮುಕ್ತ ಧರ್ಮಕ್ಷೇತ್ರ!
ಗಂಭೀರ ಶಾಂತಿಯದು,
ಮೂಕವಾಗಿಹ ಸೇನೆ,
ರಥಗಾಲಿ ಸ್ತಬ್ಧತೆಯಿಂ ಗೀತಮಂತ್ರ!

ಕರ್ಮಯೋಗಿಯು ಕೃಷ್ಣ
ರಾಜಯೋಗಿಯು ಪಾರ್ಥ
‘ಕಿಂ ಕರ್ಮಾಕರ್ಮ’ಗಳ ವಾದಗಳಲಿ,
ಸತ್ವ ರಾಜಸ ತಮದ
ಹುಟ್ಟು ಸಾವಿನ ಬಲದ
ವಿಶ್ವರೂಪದ ಗೂಢ ರಹಸ್ಯಗಳನು.

ಚೊಕ್ಕ ಭಾಷೆಯ ಶ್ಲೋಕ,
ಪ್ರಶ್ನೆಗುತ್ತರ ಮಾತು-
ಏಸು ಸೊಗವೊ ಅವರ ಗುರುಶಿಷ್ಯತೆ!
ತುಂಬು ಕೂರ್ಮೆಯ ಮಾತು!
ಉಪನಿಷತ್ಕಲಶದ ಮಧುವು!
ವಿಶ್ವವ್ಯಾಪಿತ ವಾಣಿ-ಅಮರಗೀತೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...