Home / ಕವನ / ಕವಿತೆ / ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವ

ಮುಳುಗುತಿಹ ನೇಸರನು ಮುದಿಸಿಂಹನಂತಾಗಿ
ಪಶ್ಚಿಮಾದ್ರಿಯ ಗವಿಯ ಸೇರುತಿಹನು;
ತನ್ನ ಸರ್ವಾಧಿಕಾರತ್ವ ಕೊನೆಗೊಳ್ಳುತಿರೆ
ಲೋಗರೆಡೆ ಕೆಕ್ಕರಿಸಿ ನೋಡುತಿಹನು.

ಸಂಜೆ ಕಕ್ಕರಮಬ್ಬು ಗಗನ ಸಿಂಹಾಸನದಿ
ಕಪ್ಪು ಬಾವುಟವೆತ್ತಿ ತೋರಿಸಿಹುದು;
ಪಕ್ಷಿಸಂಕುಲ ಕೆಲೆದು ಬಿಡುಗಡೆಯ ಹಿಗ್ಗಿನಲಿ
ಹಾಡಿ ಜಯಜಯಕಾರ ಗೈಯುತಿಹುದು.

ಹಗಲ ಉರಿವಿಸಿಲ ಸಾಮ್ರಾಜ್ಯಶಾಹಿಯು ಉರುಳಿ
ಪಡುವ ಕಡಲಿನ ಹಡಗವೇರುತಿರಲು
ಸಂಧ್ಯಾಸಮೀರನದೊ ಸ್ವಾತಂತ್ರ್‍ಯಸಂದೇಶ
ಹೊತ್ತು ನಾಲ್ದೆಸೆಗಳಲಿ ಹರಡುತಿಹನು.

ಬಿತ್ತರದ ಬಾನಿನಲಿ ಮತ್ತೆ ಜನತಾ ರಾಜ್ಯ
ಮೆರೆಯುತಿದೆ ಚಿಕ್ಕೆಯ ಪ್ರಜಾಪ್ರಭುತ್ವ:
ವ್ಯಕ್ತಿಶಕ್ತಿಯ ಗುಣವಿಕಾಸ ಪ್ರಕಾಶದಲಿ
ಜಗವ ಬೆಳಗುವುದದರ ಮೂಲತತ್ವ.

ಆಕಾಶಗಂಗೆ ಶಾಸನ ಸಭೆಯನೇರ್ಪಡಿಸಿ
ಮಂತ್ರಿಮಂಡಲವನ್ನು ನಿರ್ಮಿಸಿಹುದು;
ಬುಧ ಬೃಹಸ್ಪತಿ ಶುಕ್ರ ಶನಿ ಮಂಗಳಾದ್ಯರನು
ವಿವಿಧ ಮಂತ್ರಿಗಳಾಗಿ ನೇಮಿಸಿಹುದು.

ಕೃತ್ತಿಕೆಯು ಮೃಗಶಿರವು ಸಪ್ತರ್ಷಿ ಮಂಡಲವು
ರಾಜಕೀಯದ ಪಕ್ಷಪಂಗಡವೆನೆ
ದಕ್ಷಿಣೋತ್ತರ ಧ್ರುವದ ರಾಯಭಾರಿತ್ವದಲಿ
ಮುಖ್ಯಮಂತ್ರಿಯು ಚಂದ್ರನಾಗಿರುವನೆ?

ಬಿಡುಗಡೆಯ ಸೌಭಾಗ್ಯ ಪಡೆದ ಬಾನಿನೊಳಿಂತು
ಶಾಂತಿ ಸಮದರ್ಶಿತ್ವ ತಂಪಿನಿರುಳು
ಬಡವ ಬಲ್ಲಿದರೆನದೆ ಸಮತೆಯಲಿ ತಣಿಸಿಹುದು
ಸರ್ವರಿಗು ಸಮಪಾಲು ಬೆಳದಿಂಗಳು.

***

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...