Home / ಕವನ / ಕವಿತೆ / ಕಟ್ಟುತ್ತಿರುವೆನು ಮಂದಿರವನ್ನು

ಕಟ್ಟುತ್ತಿರುವೆನು ಮಂದಿರವನ್ನು

ಕಟ್ಟುತ್ತಿರುವೆನು ಮಂದಿರವನ್ನು
ಎದೆಯ ಗೂಡಿನಲ್ಲಿ
ರಾಮ ರಹೀಮ ಕ್ರಿಸ್ತ ಅಲ್ಲಮ
ಎಲ್ಲರಿರುವರಲ್ಲಿ ||

ಆಂಜನೇಯನಿಗೂ ಏಸುಕ್ರಿಸ್ತನಿಗೂ
ಬಹಳ ನ್ಯಾಸ್ತವಿಲ್ಲಿ
ಬುದ್ಧ ನಾನಕ ಮಹಾವೀರರು
ಇವರ ಸ್ನೇಹದಲ್ಲಿ

ರಾಮ ಪವಡಿಸಿಹ ಮಸೀದಿಯಲ್ಲಿ
ಕ್ರಿಸ್ತನಾ ಕೋಣೆಯಲ್ಲಿ
ಇದಕೆ ಹೆಸರುಗಳು ಇಗರ್ಜಿ ಬಸದಿ
ನೂರು ಭಾಷೆಯಲ್ಲಿ

ಇಲ್ಲಿಯ ರಾಮ ನುಡಿವನು ಉರ್ದು
ಅಲ್ಲಾ ಸಂಸ್ಕೃತ ಬಲ್ಲ
ಕ್ರಿಸ್ತನಿಗೊ ತೆಲುಗೆಂದರೆ ಪ್ರೀತಿ
ಕನ್ನಡವಿಲ್ಲದೆ ಇಲ್ಲ

ಎಲ್ಲಾ ದೇವರು ಕ್ರಿಕೇಟಾಡುವರು
ಸೋಲು ಗೆಲುವು ಕ್ಷಣಿಕ
ಕಡೆಗೆ ಮಬ್ಬಲಿ ಒಂದೆ ಕ್ಲಬ್ಬಲಿ
ತೋರ್‍ವರೆಲ್ಲ ಪುಲಕ

ಜುಟ್ಟುಗಳಿದ್ದರೆ ಜುಟ್ಟೆಳೆದಾಟ
ಗಡ್ಡಗಳಿದ್ದರೆ ಮುಂಭಾರ
ದೇಹಕೆ ಭಾರ ಆ ಶಿವದಾರ
ಕಡಿಮೆಯಲ್ಲ ಜನಿವಾರ!

ಅವನು ಹೇಳುವನು ಕಿರೀಟ ಭಾರ
ಇವನಿಗೊ ಟೋಪಿಯು ಭಾರ
ಎಲ್ಲರು ಹಾರೈಸಿಹರು ಕ್ರಿಸ್ತಗೆ
ಶಿಲುಬೆಯಿಂದ ಪರಿಹಾರ

ಎಲ್ಲ ಚಾನೆಲಲಿ ಮತ ಮೌಢ್ಯಗಳು
ವಿಜ್ಞಾನಕೆ ಇದು ಥರವೇ
ಕಡೆಗೆ ನಮ್ಮನೂ ಎಳೆದು ತರುವಿರಿ
ನಿಮಗೆ ಇದು ಭೂಷಣವೇ

ಎದೆಯ ಗೂಡಿನಲಿ ರಾಮ ಅಳುವನು
ಪರಿವಾರದ ಜತೆಗೂಡಿ
ತಾಯಿಯ ಗರ್ಭವ ದಾಟಿದ ತಪ್ಪಿಗೆ
ಪ್ರಾಣಿ ಪಕ್ಷಿಗಳ ಕೂಡಿ
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...