Home / ಕಥೆ / ಕಿರು ಕಥೆ / ಅಮೃತ ಹಸ್ತ

ಅಮೃತ ಹಸ್ತ

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ಭೂಮಿ ಸಂತೋಷದಿಂದಲೇ ಗಮನಿಸಿತ್ತು.  ಆಗೆಲ್ಲಾ ಅತ್ಯಂತ ಉತ್ಸಾಹದಿಂದ ಬೀಗಿಕೊಂಡಿದ್ದ ಅಡಿಗಲ್ಲುಗಳು ದಿನಗಳೆದಂತೆ ಅನಾಥ ಪ್ರಜ್ಞೆಯಿಂದ ನರಳತೊಡಗಿದ್ದವು.

ಋತುಮಾನದ ವೈಪರೀತ್ಯಗಳಿಗೆ ಸಿಕ್ಕು ಕೆಲವು ಅಡಿಗಲ್ಲಗಳು ಸೊರಗಿದ್ದರೆ ಇನ್ನೂ ಕೆಲವು ವಿಧ್ವಂಸಕರ ದಾಳಿಗೆ ಸಿಕ್ಕು ವಿರೂಪಗೊಂಡಿದ್ದವು.  ಅವುಗಳಿಗೆ ಆಧಾರವಾಗಿದ್ದ ಗೋಡೆಗಳು ಕುಸಿದು ಹೋಗಿದ್ದವು.  ಅಸ್ತಿತ್ವಕ್ಕಾಗಿ ಚಡಪಡಿಸುತ್ತ ಅವಶೇಷಗಳಂತೆ ನಿಂತಿರುವ ಅಡಿಗಲ್ಲುಗಳಿಗೆ ದನಕರುಗಳು ಮೈತಿಕ್ಕಿ ತಮ್ಮ ತುರಿಕೆಯನ್ನು ಶಮನಗೊಳಿಸಿಕೊಳ್ಳುತ್ತಿದ್ದವು.  ನಾಯಿಗಳು ಆರಾಮಾಗಿ ಬಂದು ಉಚ್ಚೆ ಹೊಯ್ದರೆ, ಕಾಗೆಗಳು ಮಲ ವಿಸರ್ಜಿಸುತ್ತಿದ್ದವು.

ಅದನ್ನೆಲ್ಲವನ್ನು ಮೌನವಾಗಿ ಅನುಭವಿಸುತ್ತಿರುವ ಅಡಿಗಲ್ಲುಗಳನ್ನು ಕಂಡು ಭೂಮಿ ಒಂದಿನ “ಅಡಿಗಲ್ಲುಗಳೇ, ಏನಿದು ನಿಮ್ಮ ಅವಸ್ಥೆ?  ನಿಮ್ಮ ಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ” ಎಂದು ಮರುಕ ವ್ಯಕ್ತಪಡಿಸಿತು.

“ನಮ್ಮ ಹಣೆಯ ಬರಹ ಇದು.  ಎನು ಮಾಡುವುದು?”  ಅಡಿಗಲ್ಲು ತಹತಹಿಸಿದ್ದವು.

“ಬಹಳ ವರ್ಷಗಳ ಹಿಂದೆಯೇ ನೀವು ಭವ್ಯ ಕಟ್ಟಡಗಳ ಭಿತ್ತಿಗಳಲ್ಲಿ ಕಂಗೊಳಿಸಬೇಕಾಗಿತ್ತು.”

“ದೇವರು ನಮಗೆ ಅಂಥ ಭಾಗ್ಯ ನೀಡಲಿಲ್ಲ.”

“ನೀವು ಶಾಸನ ಪ್ರಭುಗಳ ಅಮೃತಹಸ್ತಗಳಿಂದ ಪ್ರತಿಪ್ಠಾಪನೆಗೊಂಡಿದ್ದೀರಿ” ಅಭಿಮಾನ ವ್ಯಕ್ತಪಡಿಸಿತು ಭೂಮಿ.

“ಹೌದು, ನಾವು ಶಾಪಗ್ರಸ್ಥರಾಗಿ ಇಲ್ಲಿ ಬಿದ್ದಿರುವುದಕ್ಕೆ ರಾಜಕಾರಣಿಗಳಮೃತಹಸ್ತಗಳೇ ಕಾರಣ” ನಿಟ್ಟುಸಿರಿದವು ಅಡಿಗಲ್ಲು.

*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...