Home / ಕವನ / ಕವಿತೆ / ನೇಣುಗಂಬದಲ್ಲಿ ನಿರಪರಾಧಿ

ನೇಣುಗಂಬದಲ್ಲಿ ನಿರಪರಾಧಿ

ಬಿಸಿಲ ಸೂರ್‍ಯನ ಕಾವು ತಟ್ಟಿ
ಕರುಳ ಬಳ್ಳಿಯ ಹೂವು ಬಾಡಿ
ಶಂಕೆಯಿದ್ದರೆ ಶೋಧಿಸಿ ನೋಡಿರಿ
ನನ್ನ ಮನೆ, ಮಾಡು, ಮೂಲೆ, ಗೂಡು
ಬೇಕಿದ್ದರೆ ನನ್ನ ರಕ್ತದ ಕಣಕಣದಲ್ಲಿ
ಕೋಟಿಕೋಟಿ ಜೀವಂತ ಸಾಕ್ಷಿಗಳಿವೆ.
ಹೆಕ್ಕಿ ನೋಡಿರಿ ಮುಕ್ಕಾದರೂ ಸರಿಯೇ
ಅಲ್ಲಿ ಪೂರ್‍ವಿಕರ ಜೋಗುಳ ಕೋಶವಿದೆ.
ಮಳೆ, ಮೋಡ, ಮೋಳಕೆಯಲ್ಲಿ ಶೋಧಿಸಿರಿ
ಸಿಡಿಲು, ಮಿಂಚು, ಗುಡುಗಿನ ಶಬ್ದದಲ್ಲಿ
ಸೂರ್‍ಯ ಚಂದ್ರರು ಸಂಧಿಸುವಲ್ಲಿ.

ತುತ್ತು ತುತ್ತಿಗೂ ಬೆವರ ಬಿತ್ತುವ
ಒಡಲಧಗೆ ನಂದಿಸುವ ಶ್ರಮಿಕನವನು.
ಕರುಳ ಬತ್ತಿಯ ಹೊಸೆದು ದೀಪ ಹಚ್ಚುವನು.
ಬಿರುಗಾಳಿಗೆ ಆರಿ ಹೋಗದಂತೆ
ಒಡಲೊಳಗಿನ ಕೆಂಡದ ಕನಸುಗಳಿಗೆ
ಕಿಡಿ ತಾಗದಂತೆ ಅಡ್ಡಗೋಡೆಯಾದವನು.

ಧರೆ ಹೊತ್ತಿ ಉರಿಯದಂತೆ
ಕಣ್ಣಾಳದ ಆಕಾಶ ನೆಲಕಚ್ಚದಂತೆ
ಕೊಲೆಕಗಡುಕರ ಸಂತೆ ಮೈದಾನದಲ್ಲಿ
ನಾಳೆಗಳು ಸುಟ್ಟು ಕರಕಲಾಗದಂತೆ
ಮುಳ್ಳುಗಳು ಚುಚ್ಚದಂತೆ ಎಚ್ಚರದಲಿ,
ಧರೆಯ ಭಾರಕ್ಕೆ ಹೆಗಲ ನೀಡಿದವನು.

ಭಯ ತುಂಬಿದ ಮುಖ ಬಿಳಿಚಿಕೊಂಡಿದೆ
ರಕ್ತ ಹೆಪ್ಪುಗಟ್ಟುತ್ತಿದೆ ಸ್ಫೋಟದ ಶಬ್ದಕೆ
ಎಲುಬಿಗೂಡಿನ ಹಂದರಗಳು ನಲುಗಿವೆ
ಗೋರಿಯಿಂದೆದ್ದ ಮೋಡ ಕಂಬನಿ ಸುರಿಸಿ
ಕೇಳುತ್ತಿದೆ ಹೇಳು ವ್ಯಾಘ್ರನೆ
ಸಿಡಿಮದ್ದಿಗೆ ಸಮುದಾಯದ ಬಲಿಯೇಕೆ?
ನೆಲದ ಮೇಲೆ ನರಮಂಡಲದ ಬಳ್ಳಿಯಿದೆ.
ನೇಣುಗಂಬದಲ್ಲಿ ನಿರಪರಾಧಿ ಬೇರುಗಳು
ರಕ್ತದೋಕುಳಿಯಲ್ಲಿ ತೊಯ್ಯಬೇಕೇಕೆ?
ಶಸ್ತ್ರಾಸ್ತ್ರಗಳು ನಾಗರೀಕತೆಯ ಕುರುಹುಗಳಲ್ಲ
ನಾಟಿ ಔಷಧಿಯೂ ಅಲ್ಲ, ಬುದ್ಧನ ಬೆಳಕು ಅಲ್ಲ,
ಪ್ರವಾದಿಗಳ ಹಿತನುಡಿಯೂ ಅಲ್ಲ
ಬಂದೂಕಿನ ನಳಿಕೆಯಲಿ ಕೊಳಲಿನ ಗಾನ
ಬದುಕಿನ ಕನಸುಗಳಿವೆ ಜೋಪಾನ!

ಬೆಟ್ಟದೆತ್ತರಕ್ಕೆ ಬಿದ್ದ ಹೆಣರಾಶಿಯಿಂದ
ಅರೆಜೀವಗಳ ನಾಬಿಯಾಳದ ಸಂಕಟ
ನೋವಿನ ಕಿಡಿಗಳ ನೇರ ನೋಟ
ಕಾಲನ ಹಾಲಾಹಲದ ಮುನ್ಸೂಚನೆಯೇ?
ದೇಶದ್ದುದ್ದಗಲಕ್ಕೂ ಸಂಚಾರ ಹೊರಟ ಭಸ್ಮಾಸುರ

ಜನಾಂಗೀಯ ದ್ವೇಷ ಬೆಳಸಿದ್ದು ಸಾಕು.
ಓಟಿನ ಬೇಟೆಯ ಲೆಕ್ಕಚಾರದಲ್ಲಿ
ಬೆನ್ನಹುರಿಗೆ ಸಿಡಿಮದ್ದು ಸಿಕ್ಕಿಸಿಕೊಂಡಿಹನು
ಚರ್‍ಚು, ಮಠ, ಮಸೀದಿಗಳ ಶಿಖರಕ್ಕೆ
ನೆತ್ತರು ಕಲೆಗಳಿವೆ-ಅತ್ತರು, ಉದುಬತ್ತಿಗಳಿವೆ.

ಅನಾಥ ಮಗುವಿನ ತುಟಿಯಲ್ಲಿ ನಗುವಿಲ್ಲ
ತುಕ್ಕು ಹಿಡಿದಿದೆ ಬುದ್ದಿಗೆ ಆತ್ಮಸಾಕ್ಷಿಗೆ
ಲೋಕದಲಿ ಮುಗಿದಿಲ್ಲ ಯುದ್ಧವಿನ್ನೂ
ಕ್ಯಾತೆ ತೆಗೆಯುತ್ತಲೇ ಇದ್ದಾನೆ ಠೇಕೇದಾರ.
ಮುಗಿಲಮೋಡಗಳು ಸಾಗರದಾಚೆ ನಿಂತು
ನೆತ್ತರ ಕಂಬನಿ ಸುರಿಸಿ ಬಿಕ್ಕುತ್ತಿವೆ.
ಧ್ಯಾನ ಗೋರಿಯಿಂದ ಹೊರ ಬಂದ ಬೆಳ್ಳಕ್ಕಿ
ಕಾಲದ ಗಂಟೆ ಬಾರಿಸಿ ಕೇಳುತ್ತಿದೆ.
ಒಬ್ಬನ ತಪ್ಪಿಗೆ ಸಮುದಾಯದ ಬಲಿಯೇಕೆ?
ನೇಣುಗಂಬದಲಿ ನಿಲ್ಲಿಸಿದ ಠೇಕೇದಾರನೇ ಹೇಳು
ಹೇಳುವದಾದರೆ ಅಪರಾಧಿಯ ಹೆಸರು.
ಸಮುದಾಯವನು ಸೂಲಿಗೇರಿಸುವ ಛಲವೇಕೆ?
ಮುಖ್ಯ ವಾಹಿನಿ ಛಿದ್ರಗೊಳಿಸುವ ಹುನ್ನಾರವೇಕೆ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...