Home / ಲೇಖನ / ವಿಜ್ಞಾನ / ಕೃತಕ ಮಾನವ ಸೃಷ್ಟಿ

ಕೃತಕ ಮಾನವ ಸೃಷ್ಟಿ

ವಿಜ್ಞಾನಿಗಳು ಇಷ್ಟರಲ್ಲಿಯೇ ಮಾನವನ ಜಿನ್ಸ್‌ಗಳನ್ನು ಅಧ್ಯಯನ ಮಾಡಿ ಅವುಗಳ ಒಂದು ಬೃಹತ್ ಸಂಗ್ರಹಾಲಯವನ್ನು ನಿರ್ಮಿಸಬಹುದು. ಈ ಜಿನ್ಸ್ ಸಂಗ್ರಹಾಲಯದಲ್ಲಿ ಪ್ರತಿಯೊಂದು ಜಿನ್ಸ್‌ಗಳ ವಿವರಗಳಿದ್ದು ಯಾವ ಜಿನ್ಸ್ ಯಾವ ಕಾರ್‍ಯಕ್ಕೆ ಯೋಗ್ಯ? ಜೀವಿಗಳಲ್ಲಿ ಕಾಣುವ ನ್ಯೂನ್ಯತೆಗಳಿಗೆ ಕಾರಣವೇನು? ಇದೇ ಮೊದಲಾದ ಪ್ರಶ್ನೆಗಳಿಗೆ ಸಮಂಜಸ ಉತ್ತರವನ್ನು ನೀಡಲು ಸಾಧ್ಯವಾಗಲೂ ಬಹುದು. ಈ ಬೃಹತ್ ಜಿನ್ಸ್ ವಿಶ್ವಕೋಶ ನಿರ್‍ಮಾಣವಾದ ನಂತರ ಕೃತಕ ಮಾನವನ ಸೃಷ್ಟಿ ಸುಲಭ ಸಾಧ್ಯವೆಂದು ವಿಜ್ಞಾನಿಗಳು ಹೇಳುತ್ತಾರೆ.

ಮಾನವನನ್ನು ಪೀಡಿಸುವ ಎಷ್ಟೋ ರೋಗಗಳು ಅನುವಂಶೀಯವಾಗಿ ತಂದೆ ತಾಯಿಗಳಿಂದ, ಅವರ ಸಂತತಿಯಿಂದ ಬರಬಹುದು. ಈ ರೋಗಗಳಿಗೆ ಅವುಗಳಲ್ಲಿರುವ ಜಿನ್ಸ್‌ಗಳಲ್ಲಿನ ನ್ಯೂನ್ಯತೆಗಳೇ ಕಾರಣ. ನ್ಯೂನ್ಯತೆಗಳುಳ್ಳ ರೋಗಕಾರಕ ಜಿನ್ಸ್‌ಗಳನ್ನು ಶರೀರದಿಂದ ಹೊರಹಾಕಲಾಗದಿದ್ದರೂ ಅದರ ಬದಲು ಸುಧಾರಿತ ಜಿನ್ಸ್‌ಗಳನ್ನು ಬಳಸಿ ನ್ಯೂನ್ಯತೆಗಳನ್ನು ಸರಿಪಡಿಸಲು ಸಾಧ್ಯ. ಆದರೆ ಇದು ಇಷ್ಟರಲ್ಲಿಯೇ ಕಾರ್ಯಸಾಧ್ಯವೇನು ಅಲ್ಲ. ವಿಜ್ಞಾನಿಗಳು ಮಾನವನ ಜಿನ್ಸ್‌ಗಳನ್ನು ಶರೀರದೊಳಕ್ಕೆ ಹೇಗೆ ಸೇರಿಸಬಹುದೆಂಬ ವಿಚಾರ ಇನ್ನೂ ತಿಳಿದಿಲ್ಲ ಮತ್ತು ಜೀವಕೋಶದೊಳಗೆ ಮೊದಲೇ ಬಿಡಾರ ಹೂಡಿರುವ ನ್ಯೂನ್ಯತೆ ಇರುವ ಜಿನ್ ಅನ್ನು ಅಲ್ಲಿಂದ ಹೇಗೆ ಉಚ್ಚಾಟನೆ ಮಾಡಬಹುದು ಎಂಬುವುದು ತಿಳಿದಿಲ್ಲ. ಇದೆಲ್ಲದರ ಅರಿವು ವಿಜ್ಞಾನಿಗಳಿಗಾದಾಗ ಜೀನ್ ಚುಚ್ಚು ಮದ್ದಿನಿಂದ ಬಯಸಿದ ಗುಣ ಲಕ್ಷಣಗಳನ್ನು ಸ್ವಭಾವಗಳನ್ನು ಬದಲಿಸಲು ಸಾಧ್ಯವಾಗಬಹುದು. ಕೃತಕ ಜೀನ್ ಸೃಷ್ಟಯಿಂದಾಗಿ ಈ ಕನಸುಗಳು ನನಸಾಗುವ ಕಾಲ ಇಷ್ಟರಲ್ಲಿಯೇ ಬರಬಹುದೆಂದು ಕೆಲವರು ನಿರೀಕ್ಷಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್