Home / ಕಥೆ / ಕಿರು ಕಥೆ / ಹಿತ್ತಾಳೆ ಕಿವಿ

ಹಿತ್ತಾಳೆ ಕಿವಿ

ಬಿಜ್ಜಳ ಮಹಾರಾಜರ ಬಳಿ ಅಣ್ಣ ಬಸವಣ್ಣನವರು ಮಹಾ ಮಂತ್ರಿಯಾದ ಹೊಸದರಲ್ಲಿ ಕಲ್ಯಾಣ ನಗರಿಯಲ್ಲಿದ್ದ ಚಾಡಿ ಕೋರರಾದ ಮಲ್ಲಪ್ಪ ಶೆಟ್ಟಿ ಕೊಂಡಿ ಮಂಚಣ್ಣ ಮುಂತಾದವರೆಲ್ಲ ಸೇರಿಕೊಂಡು ಒಮ್ಮೆ ಅಣ್ಣ ಬಸವಣ್ಣನವರು ಏಕಾಂತವಾಗಿದ್ದಾಗ ಅಲ್ಲಿಗೆ ಬಂದರು.

‘ಬಿಜ್ಜಳ ಮಹಾರಾಜರು ನಿಮ್ಮ ಬಗ್ಗೆ ಮೊನ್ನೆ ದಿನ ಎಲ್ಲರ ಎದುರಿಗೆ ನಿಮ್ಮನ್ನು ಕೇವಲವಾಗಿ ನಿಂದಿಸಿದರು!’ ಎಂದು ಬಂದವರು ಪೀಠಿಕೆ ಹಾಕಿ ಮಾತಿಗೆ ಮಾತು ಪೋಣಿಸುತ್ತಾ ಕುಳಿತರು.

“ನೀವು ಬಿಜ್ಜಳ ಮಹಾರಾಜರ ಮಾತುಗಳನ್ನು ಸತ್ಯವೆಂದು ನಂಬುವಿರೇನು ? ಅವರು ನಮ್ಮ ಬಗ್ಗೆ ಪ್ರೀತಿಯಿರುವವರು. ನಿಮ್ಮ ಮನಸ್ಥಿತಿ ಹಾಗೆ ಆಲೋಚಿಸಿರಬಹುದು. ಇಲ್ಲವೆ ನೀವು ಪೂರ್‍ವಗ್ರಹ ಪೀಡಿತರಿರಬಹುದು. ನಿಮಗೆ ಯಾವುದು ಸತ್ಯವೆನಿಸುವುದು?” ಅಣ್ಣ ಬಸವಣ್ಣನವರು ಬಂದಿದ್ದವರನ್ನು ಪ್ರಶ್ನಿಸಿ ಅವರ ಮುಖ ನೋಡುತ್ತಾ ಕುಳಿತರು.

ಅಲ್ಲಿದ್ದವರೆಲ್ಲ ಬೆವರ ತೊಡಗಿದರು. ತೊದಲ ತೊಡಗಿದರು.

‘ಮಹಾ ಮಂತ್ರಿಗಳೇ… ಬಿಜ್ಜಳ ಮಹಾರಾಜರು ಏನೆಂದು ನಮಗೇನು ತಿಳಿಯದು. ಸತ್ಯಾಸತ್ಯತೆ ಕುರಿತು ನಾವು ಆಲೋಚಿಸಿಲ್ಲ. ನಿಮ್ಮ ಬಗ್ಗೆ ಹಾಗೆ ಅಂದಿದ್ದನ್ನು ಹೇಳಲು ಬಂದಿದ್ದೆವು’ ಎಂದರು.

“ನಿಮ್ಮ ಚಾಡಿ ಮಾತುಗಳಿಂದೇನು ಲಾಭವಿಲ್ಲ. ಕಲ್ಯಾಣದ ಜನತೆಗೆ ಬಿಜ್ಜಳ ಮಹಾರಾಜರ ಬೊಕ್ಕಸ ತುಂಬಿಸಲು ಚಿಂತಿಸಿ, ಮಹಾರಾಜರ ಜನರ ತಲೆ ತುಂಬಿಸಿ ನೀವೂ ಹಾಳಾಗಬೇಡಿ ! ನೀವು ಮೊದಲು ಹೊರಡಿ. ಇನ್ನೆಂದು ನನ್ನ ಬಳಿ ಅವರಿವರ ಸುದ್ದಿ ತಂದು ನನ್ನ ಸಮಯ ವ್ಯರ್‍ಥ ಮಾಡಬೇಡಿ’ ಎಂದು ಅಣ್ಣ ಬಸವಣ್ಣನವರು ಖಾರವಾಗಿ ಪ್ರತಿಕ್ರಿಯಿಸಿದರು.

‘ನಾವು ನಿಮಗೆ ಉಪಕಾರ ಮಾಡಲು ಬಂದಿದ್ದೆವು. ನೀವು ನಮ್ಮನ್ನು ಅವಮಾನಿಸಿ ಕಳಿಸಿದ್ದು ಸರಿಯಿಲ್ಲ. ಇದರ ಪ್ರತಿಫಲ ಉಂಡೇ ಉಣ್ಣುವಿರಿ…’ ಎಂದು ಬಂದಿದ್ದವರು ಕೂಗಾಡಿದರು.

ಅಣ್ಣ ಬಸವಣ್ಣನವರು ಬಂದಿದ್ದವರನ್ನು ಮೌನ ವ್ರತದಿ ಸಾಗ ಹಾಕಿದರು.
*****

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...