Home / ಕವನ / ಕೋಲಾಟ / ಸ್ವಾಮಿ ಶಂಕರನಾ ನೆನೆದೇವೂ

ಸ್ವಾಮಿ ಶಂಕರನಾ ನೆನೆದೇವೂ

(ಅಡ್ಡ ಗುಣತದ ಪಡ)
ತಂದನಾನೋ ತಾನನಂದ್ರನಾನಾ
ತಂದನಾಽನೋ ತಾನನಾ || ೧ ||

ನವ್ಲ ರಾಯರ ಪಟ್ಣಕೇ ಬಂದರಿಬ್ರ ಕಲ್ಲಾರೂ
ನೆವಲಂತಿ ಕರ್ ದಾರೋ ಯೆಮ್ಮೆ ದಿಂಬವಾಗೇ || ೨ ||

ನಾಗಪ್ಪಾ ನಾದಾಗೇ ಹೋಗಪ್ಪಾ ಗುತ್ತೀಗೇ
ಬಾರಪ್ಪಾ ಶುಗ್ದೀ, ಬೆಲೆ ಮುಂದೇ
ನಾಗಮಂಡಲವೇ ಗಯಸೂನೋ || ನಾಗಪ್ಪಾ
ಮಂಡಲಕೇ, ನೀರಾ ಯರೆಶೂನೋ (ಯೆರೆಶೂನೆ) || ನಾಗಪ್ಪಾ
ಹುಲ್ಲಾನಾದೆಲ್ಲೀ ಬಯವಿಲ್ಲಾ || ೩ ||

ದಾಟಿರದಕೇ ವಿಶವಿಲ್ಲಾ || ನಾಗಪ್ಪಾ
ನಾಗಮಂಡಲವೇ ಗೆಯಸೂನೋ || ೪ ||

ತಂದನಂದಾನೋ ತಾನನಂದೆ, ನಾನಾರ
ತಂದನಂದಾನೇ ತಾನನಾನಾ || ೫ ||

ಸ್ವಾಮೀ, ನೆನವೆನೋ ಬೂಮಿಗೊಂದ ನೆನಿಯೋ
ಶಿವನೇ ಶಿವನಿಂಗಾ ಶರಣೋ || ೬ ||

ತಂದನ್ನೋ ನಾನೇ ತಾನನಂದೆ ನಾನಾರ
ತಂದನ್ನೇ ತಾನೇ ತಂದನಾನಾ || ೭ ||

ಸ್ವಾಮಿ ನೆನವೆನೋ ಬೂಮಿಯ ನೆನವೆನು
ಸ್ವಾಮಿ ಶಂಕರನಾ ನೆನೆವೆನೊ|| ೮ ||

ಸ್ವಾಮಿ ಶಂಕರನಾ ನೆನದಿಟ್ಟಲಾದೀದರೆ
ಬರದೀದ ಹಾಡೇ ಬರಲಂದೋ || (ಬೋರೆದ್ದೀ) ಬಂದಾರೇ || ೯ ||

ಶಲ್ಪ ಕೋಲು ಶಮನಾ ಮಯಲಲ್ಲಿ || ಮಯ್ಲಲ್ಲೀ ಶಲ್ಲೀದಾರೆ
ಮಲ್ಲಿಗೂವೊಂದೇ ಮುಡಿಯುವೆನೂ || (ಮುಡಿಯುವೆ) ಕಲವೇರಾ ಕಲವೇರಾ || ೧೦ ||

ಹಾಡು ತಪ್ಪಿದರೇ ನಗಬೇಡಿ || (ನಗಬೇಡಿ) ಕಲಬೇರಾ
ಹಾಡೀಗೆ ಜೆನಿಯಾ ಜನವಿಲ್ಲಾ || ಬಾವಾದೀರ || ೧೧ ||

ಹಾಡು ತಪ್ಪಿದರೇ ನೆಗಬೇಡೀ || ಕಲಬೇರಾ
ಹಾಡಿಗೆ ಜೆನಿಯಾ ಮೂದಲಿಲ್ಲ || ಬಾವಾದೀರೇ
ಜೋಡಿನಾ ಜನವೇ ಬರಲಿಲ್ಲಾ || ೧೨ ||

ಇಂದನಂದಾನೋ ತಾನನಂದೆ ನಾನಾರ
ತಂದ ನಂದಾನೋ ತಾನನಾನಾ || ೧೩ ||
*****
ಹೇಳಿದವರು: ಕುಪ್ಪ ಬೇಡು ಗೌಡ, ಕಲವೇ

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...