Home / ಕವನ / ಕವಿತೆ / ಅರ್‍ಪಣ-ತರ್‍ಪಣ

ಅರ್‍ಪಣ-ತರ್‍ಪಣ

“ಪುಷ್ಪವಿದ್ದಂತೆ ಮೊಗ್ಗೆಯನರ್‍ಪಿಸಿಕೊಂಡ ಶಿವನು!
ಪಕ್ವವಾದ ಫಳವಿದ್ದಂತೆ ಕಸುಗಾಯ ಕೊಯ್ಯನು ಶಿವನು!
-(ಬಾಲ ಸಂಗಯ್ಯನ ಮರಣ ಕಾಲಕ್ಕೆ ಬಸವದೇವನ ವಿಲಾಪ)
ಕೊಳಲಾಗಬಹುದಾಗಿತ್ತು, ಕಳಿಲಿದ್ದಾಗಲೇ ಕಡಿದ ಕಾಳ!
ದೇವ! ಮಗುವೆಂದು ತಿಳಿದಿದ್ದೆ ಆದಾಯಿತು ನೀರ್‍ಗುಳ್ಳಿ!
ಮನೆಯವನೆಂದು ತಿಳಿದಿದ್ದೆ ಅವನಾದ ಅತಿಥಿ!
ಕಣ್ತುಂಬ ಕಾಣಲಿಲ್ಲ; ಬಾಯ್ತುಂಬ ಮುದ್ದಿಡಲಿಲ್ಲ;
ಮನೆಯ ಮಮತೆಯ ಮೂರ್‍ತಿಯಾದೀತೆಂದಿದ್ದೆ-
ಆದರೆ-ಎಂಜಲು ಮಾಡಿದ್ದಿಲ್ಲ! ಆಯ್ತು-ಮಸಣದ-
ಮಹಾದೇವನ ಮುಡಿಯೊಳಗಿನ ಮೀಸಲ ಮದಗುಣಕಿ.
ಹುಳಹುಪ್ಪಡಿಯ ತಿನಸಾಯಿತು ಮೋಹದ ಮುದ್ದೆ !
ಜೀವಗಳೆದ ದೇಹವನ್ನು ಕಣ್ಣೀರ್‍ಸುರಿಸಿ ಕೊಟ್ಟೆ ಕೃಷ್ಣಾ-
ರ್‍ಪಣವೆಂದು. ಪಿತನ ಪಾಪದ ಪಿಂಡ ಕಣ್ಮರೆಗಾಯಿತು;
ಮಣ್ಮರೆಯಾಯ್ತು; ಕಂಗೊಳಿಸಲಕಲ್ಪನೆಯ ಪುಣ್ಯ ಪುಂಜ.
ಮಾತೆಯ ಶಾಪದ ಮೂರ್‍ತಿ ಬಯಲಾಯಿತು;
ಮುಸುಕಲಿ ಮಮತೆಯ ಧೂಪ ಮನೋರಾಜ್ಯದಲ್ಲಿ.
ನಿಮಿತ್ತ ಮಾತ್ರ, ಕ್ಷಣಿಕವಾಗಿ ಬಂದ ಕೂಸೇ!
ಸಂಸಾರದ ಸವಿ ಸುಖ ದುಃಖದ ಸರಿಬೆರಿಕೆಯೆಂದು ಕಲಿಸಿದೆ.
ಆದರೆ, ನಿಜವಾದ ಅಖಂಡ ಪ್ರೀತಿಝರಿಯನ್ನು ಪ್ರವಹಿಸಿದೆ.
ಅದರ ತೀರನಿವಾಸಿಯಾದ ಈ ವಾಣಿ ಹಾಡುವದು,
ಕ್ಷೇಮೇಂದ್ರ!
ನಿನ್ನ ನಾಮಾಂಕಿತ ನಾಮದ ಸನ್ಮಾನಕ್ಕಾಗಿ,
ಅಜ್ಜಿ ಅಮ್ಮಂದಿರ ಸಮಾಧಾನಕ್ಕಾಗಿ,
ನನ್ನ ಮನದ ಸುಮ್ಮಾನಕ್ಕಾಗಿ,
ಈ ಕಾವ್ಯ ತಂದೆ ಕೊಟ್ಟ ಮುದ್ದು.
*****
Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...