Home / ಕವನ / ಕವಿತೆ / ಅರ್‍ಪಣ-ತರ್‍ಪಣ

ಅರ್‍ಪಣ-ತರ್‍ಪಣ

“ಪುಷ್ಪವಿದ್ದಂತೆ ಮೊಗ್ಗೆಯನರ್‍ಪಿಸಿಕೊಂಡ ಶಿವನು!
ಪಕ್ವವಾದ ಫಳವಿದ್ದಂತೆ ಕಸುಗಾಯ ಕೊಯ್ಯನು ಶಿವನು!
-(ಬಾಲ ಸಂಗಯ್ಯನ ಮರಣ ಕಾಲಕ್ಕೆ ಬಸವದೇವನ ವಿಲಾಪ)
ಕೊಳಲಾಗಬಹುದಾಗಿತ್ತು, ಕಳಿಲಿದ್ದಾಗಲೇ ಕಡಿದ ಕಾಳ!
ದೇವ! ಮಗುವೆಂದು ತಿಳಿದಿದ್ದೆ ಆದಾಯಿತು ನೀರ್‍ಗುಳ್ಳಿ!
ಮನೆಯವನೆಂದು ತಿಳಿದಿದ್ದೆ ಅವನಾದ ಅತಿಥಿ!
ಕಣ್ತುಂಬ ಕಾಣಲಿಲ್ಲ; ಬಾಯ್ತುಂಬ ಮುದ್ದಿಡಲಿಲ್ಲ;
ಮನೆಯ ಮಮತೆಯ ಮೂರ್‍ತಿಯಾದೀತೆಂದಿದ್ದೆ-
ಆದರೆ-ಎಂಜಲು ಮಾಡಿದ್ದಿಲ್ಲ! ಆಯ್ತು-ಮಸಣದ-
ಮಹಾದೇವನ ಮುಡಿಯೊಳಗಿನ ಮೀಸಲ ಮದಗುಣಕಿ.
ಹುಳಹುಪ್ಪಡಿಯ ತಿನಸಾಯಿತು ಮೋಹದ ಮುದ್ದೆ !
ಜೀವಗಳೆದ ದೇಹವನ್ನು ಕಣ್ಣೀರ್‍ಸುರಿಸಿ ಕೊಟ್ಟೆ ಕೃಷ್ಣಾ-
ರ್‍ಪಣವೆಂದು. ಪಿತನ ಪಾಪದ ಪಿಂಡ ಕಣ್ಮರೆಗಾಯಿತು;
ಮಣ್ಮರೆಯಾಯ್ತು; ಕಂಗೊಳಿಸಲಕಲ್ಪನೆಯ ಪುಣ್ಯ ಪುಂಜ.
ಮಾತೆಯ ಶಾಪದ ಮೂರ್‍ತಿ ಬಯಲಾಯಿತು;
ಮುಸುಕಲಿ ಮಮತೆಯ ಧೂಪ ಮನೋರಾಜ್ಯದಲ್ಲಿ.
ನಿಮಿತ್ತ ಮಾತ್ರ, ಕ್ಷಣಿಕವಾಗಿ ಬಂದ ಕೂಸೇ!
ಸಂಸಾರದ ಸವಿ ಸುಖ ದುಃಖದ ಸರಿಬೆರಿಕೆಯೆಂದು ಕಲಿಸಿದೆ.
ಆದರೆ, ನಿಜವಾದ ಅಖಂಡ ಪ್ರೀತಿಝರಿಯನ್ನು ಪ್ರವಹಿಸಿದೆ.
ಅದರ ತೀರನಿವಾಸಿಯಾದ ಈ ವಾಣಿ ಹಾಡುವದು,
ಕ್ಷೇಮೇಂದ್ರ!
ನಿನ್ನ ನಾಮಾಂಕಿತ ನಾಮದ ಸನ್ಮಾನಕ್ಕಾಗಿ,
ಅಜ್ಜಿ ಅಮ್ಮಂದಿರ ಸಮಾಧಾನಕ್ಕಾಗಿ,
ನನ್ನ ಮನದ ಸುಮ್ಮಾನಕ್ಕಾಗಿ,
ಈ ಕಾವ್ಯ ತಂದೆ ಕೊಟ್ಟ ಮುದ್ದು.
*****
Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...