Home / ಕವನ / ಕವಿತೆ / ಬಡವರ ಕಾಮಧೇನು

ಬಡವರ ಕಾಮಧೇನು

ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಬಾಲ್ಯದಲಿ ಪಶುಗಳನು ಸಲಹುತ್ತ ಬೆಳೆದೆ
ಬಳಿಕೆಯಾಗಿಹ ಪ್ರಾಣಿಒಳಗಂಗಳರಿದೆ
ವನಮೃಗಖಗಂಗಳನು ನೋಡುತ್ತ ನಲಿದೆ
ಜನಪದಂಗಳನೆಲ್ಲ ಬಳಸುತ್ತ ತಿಳಿದೆ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತ್ತಿದೆ ಯಾಕಂದು ಕಾಣೆ
ಬೇಡಾದ ವಸ್ತುಗಳ ಮೆಲುತಿರುವ ಪ್ರಾಣಿ
ಬೇಕಾದ ಗೆಯ್ಮೆಗಳ ಗೆಯ್ಯುತಿಹ ತ್ರಾಣಿ
ಕಡಿದಾದ ಗುಡ್ಡದಲಿ ನಿಡಿದಾಗಿ ನಡೆವ
ಬಿರುಸಾದ ಮರಳಲ್ಲಿ ಸುಖವಾಗಿ ಸುಳಿವ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಇರುಕಾದ ಸರುವಿನೊಳು ಸರಸಾಗಿ ಸಾಗಿ
ಎರೆಯಂಗೆ ತೋಷವನು ಬೀರುತ್ತ ಸಾರಿ
ಪರಿಚರ್ಯೆಕೈಕೊಂಬ ಪರಿಯನ್ನು ಕಳೆದು
ನಿಷ್ಕಾಮ ಕರ್ಮವನು ಮನದಿಂದ ಮಾಳ್ಪ
ನಾ ಕ೦ದ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಹೊರೆಯನ್ನು ಹೇರಿರುವ ಪರಿಯನ್ನು ತಿಳಿದು
ಕೊರಗುತ್ತ ಕರಗದಲೆ ಮನವನ್ನು ಬಿಗಿದು
ಎರೆಯಂಗೆ ಎರೆಯಳಿಗೆ ಹರುಷವನು ತರುವ
ಕಷ್ಟದಿಂ ಕಾಯವನು ನೂಕುತ್ತ ನಡೆವ
ನಾ ಕಂಡ ಜೀವಿಯನ್ನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕಂದು ಕಾಣೆ
ಕಲ್ಲನ್ನು ಕಾಳನ್ನು ಕಟ್ಟಿಗೆಯ ಹೊರೆಯ
ಮಣ್ಣನ್ನು ಮುಂತಾಗಿ ಒಯ್ಯುತಿಹ ಪರಿಯ
ಕಾಸನ್ನು ಕಳೆಯದಲೆ ಸಾಕುತಿಹ ಬಗೆಯ
ಪಶುಜೀವ ಕೋಟಿಯಲಿ ಬಡಜನರ ಸಿರಿಯ
ನಾ ಕ೦ಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಗುಜರಾತ ನಾಡಿನಲಿ ಜನರಾಡಿಕೊಳುವ
“ರಾವಣನ ಗಡಿಯಾಳ” ಬಿರುದಾಗಿ ಮೆರೆವ
ಪ್ರತಿ ಮೂರು ತಾಸಿನಲಿ ಪರಮನನು ಸ್ಮರಿಸಿ
ಧರೆಗೊಂದು ಗಡಿಯಾಳ ತೆರನಾಗಿ ಮೆರೆವ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
ಸ್ವರವನ್ನು ಕರ್ಕಶದ ಕಣಿಯೆಂದು ಬಗೆವ
ಮರವೆಯನು ಬಡಪಾಯಿ ಮತಿಯಂದು ತಿಳಿವ
ಗುರುತರದ್ರೋಹವನ್ನೆಸಗುತ್ತ ನರರು
ಮನಬಂದ ತೆರದಲ್ಲಿ ದೂರುತ್ತಲಿರುವ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆ೦ದು ನುಡಿಯುತಿದೆ ಯಾಕೆಂದು ಕಾಣೆ
ಆರಯ್ಯೆ ಹಾಲುಂಡಪರಿಯಿಂದ ತಿಳಿದು
ಮೀರಿರ್ದ ಬಾಲಗ್ರಹಂಗಳನು ತರಿದು
ಸೇರಿರ್ದ ಕಾಲನುರು ಸಂಕಲೆಯ ಕಡಿದು
ಸೆಟೆದಿರ್ದ ಶಿಶುವನ್ನು ಸುಖವಾಗಿ ನಗೆಪ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆ೦ದು ಕಾಣೆ
ಕಿವಿನೆಟ್ಟಗಿಟ್ಟಿರುವ ಮುಖವನ್ನು ನೋಡಿ
ಬೆರಗಾಗಿ ಮನದಲ್ಲಿ ಮುದದಿಂದ ಕೂಡಿ
ಮೂಡಿರ್ದ ಬಾಳೆಗಳ ಗೊನೆಯಂತೆ ಕಾ೦ಬ
ತುಂಬಿರ್ದ ಸರಳತೆಯು ತುಳುಕುತ್ತಲಿರುವ
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆ೦ದು ಕಾಣೆ
೧೦
ಮಹಾತ್ಮಾ ಯೇಸುವನು ಹೊರೆಯಾಗಿಹೊತ್ತ
ಪಿರಿದಾದ ಸೈರಣೆಗೆ ನೆಲೆಯಾಗಿ ನಿಂತ
ಗಂಗಾತರಂಗಗಳ ತಟಗಳಲಿ ಮಿಂದು
ಕಂಗೊಳಿಪ ಹಿಮಗಿರಿಯ ದರಿಗಳಲಿ ನಿಂದು
ನಾ ಕಂಡ ಜೀವಿಯನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
೧೧
ತಿಪ್ಪೆಯುಪ್ಪರಿಗೆಗಳ ಹೊಲಬನ್ನು ತಿಳಿದು
ಬಡವಂಗೆ ನೆರೆಕಾಮಧೇನುವಾಗಿರುವ
ನಿಷ್ಕಾಮ ಕರ್ಮವನು ಕಲಿಸುತಿಹ ಋಷಿಯ
ಸತ್ಕಾರ್ಯ ಮಹಿಮೆಯನು ಸಾರುತಿಹ ಸಿರಿಯ
ನಾ ಕಂಡ ಜೀವಿಯನ್ನು ಭೂಖಂಡವೆಲ್ಲ
ನೂಕೆಂದು ನುಡಿಯುತಿದೆ ಯಾಕೆಂದು ಕಾಣೆ
*****
Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...