Home / ಕವನ / ಕವಿತೆ / ಖಂಡಿತ ಮಂದಿರದಡಿಯಿಂದ

ಖಂಡಿತ ಮಂದಿರದಡಿಯಿಂದ

ಎಂದೋ-ಯಾರೋ ಉರುಳಿಸಿದ
ಖಂಡಿತ ಮಂದಿರ, ಮಸೀದಿಗಳ
ಅಡಿಪಾಯದಡಿಯಲ್ಲಿ ನನ್ನನ್ನೇಕೆ ಸಿಕ್ಕಿಸುವಿರಿ
ಯಾರೋ ಉರುಳಿಸಿದ ಮಂದಿರಗಳ ಭಾರ
ನನ್ನ ಹೆಗಲಿಗೇಕೆ ಹೊರಿಸುವಿರಿ?
ಯಾರೋ ಮಾಡಿದ ತಪ್ಪಿಗೆ ನನಗೇಕೆ ಬರೆ?
ಛಿದ್ರಗೊಂಡ ಮಂದಿರದ ಕಲ್ಲುಗಳನ್ನೆತ್ತಿ
ನನ್ನ ಮೇಲೇಕೆ ಎಸೆಯುವಿರಿ ಹೇಳಿ?
ಹಾಡು ಹಗಲೇ ಮಸೀದಿಗಳನ್ನೇಕೆ ಉರುಳಿಸುವಿರಿ.
ಈ ಕ್ಷಣ ಹತ್ಯೆಯಾಗುತ್ತಿರುವ ಮನುಷ್ಯರ ಬಗ್ಗೆ
ತಮ್ಮದಲ್ಲದ ತಪ್ಪಿಗೆ ಬಲಿಯಾಗುತ್ತಿರುವವರ ಬಗ್ಗೆ.
ಒಮ್ಮೆ ಕಣ್ಣೀರಾಗಿ, ಮಗದೊಮ್ಮೆ ಕವಿತೆಯಾಗಿ
ಸಿಡಿಯುತ್ತಿರುವ ಸಿಡಿಮದ್ದಾಗಿ
ನನ್ನ ದೇಹದ ತುಂಬ ನೋವಿನ ಗಾಯಗಳ
ಹೆಕ್ಕಿ ಕೆದಕಿ ರಕ್ತಗೊಳಿಸುವಿರೇಕೆ?
ಕೋಮುವಾದಿಗಳ ಜಾಡು ಹಿಡಿದು ಪೀಡಿಸಿ,
ಈ ಮಣ್ಣಿನಲಿ ಒಂದಾದ ನನ್ನ ಪೂರ್ವಜರ
ಮೂಳೆಗಳು ಅಸ್ಥಿಪಂಜರಗಳಿವೆ ನೋಡಿ
ಮೂಳೆಗಳ ಹೇಗೆ ಬೇರ್ಪಡಿಸುವಿರಿ?
ಮಣ್ಣಲ್ಲಿ ಒಂದಾಗಿ ಗೊಬ್ಬರವಾದವರ
ಒಂದಾದ ಮನಸುಗಳ ಹೇಗೆ ಬೇರ್ಪಡಿಸುವಿರಿ?
ಯಾರದೋ ತಪ್ಪಿಗೆ ಯಾರಿಗೋ ಬರೆಯೇಕೆ
ಎಂದೋ ಯಾರೋ ಉರುಳಿಸಿದ ಮಂದಿರದ
ಕಲ್ಲುಗಳ ಭಾರ ನನಗೇಕೆ ಹೊರಿಸುವಿರಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...