Home / ಕವನ / ಕವಿತೆ / ದಾಮಿನಿ

ದಾಮಿನಿ

ಯಾವ ಹೆಸರಿನಿಂದ ಕರೆಯಲೇ ನಿನಗೆ
ದಾಮಿನಿ, ನಿರ್ಭಯಾ ಏನೋ ಮತ್ತೇನನ್ನೋ|
ಇಲ್ಲಿಯವರೆಗೂ ನಿನ್ನನ್ನು ನೋಡಿಯೇ ಇಲ್ಲ
ನಿನ್ನ ಹೆಸರು ನನಗೆ ಗೊತ್ತೇ ಇಲ್ಲ
ಆದರೂ ನಮ್ಮೆಲ್ಲರ ಆತ್ಮಗಳ ಜಾಲಾಡಿದೆಯಲ್ಲ|

ದುಃಖ ಆವರಿಸಿದೆ ದೇಶದ ಉದ್ದಗಲಕ್ಕೂ
ಪೀಡಿತಗಳ ನ್ಯಾಯಕ್ಕೆ ದಿಲ್ಲಿಯಿನ್ನೂ ಮಲಗಿಲ್ಲ
ಜಾರಿಯಿದೆ ನ್ಯಾಯದ ಹಕ್ಕಿನ ಹೋರಾಟವಿನ್ನೂ
ಗಡಿಗಳಲ್ಲೂ ಸಲ್ಲುತ್ತಿದೆ ಮೌನ ಶೃದ್ಧಾಂಜಲಿ
ಉರಿವ ಕೊಳ್ಳಿ ಹಿಡಿದು ಮನಕಲಕುವ ಪ್ರಾರ್ಥನೆ|

ನಿರಂತರ ಉರಿಯುತ್ತಿರುವ ಈ ಕೊಳ್ಳಿ ಮೇಲಾಣೆ
ಇಷ್ಟಿಷ್ಟೇ ನಿಂತು ಹೋದ ನಿನ್ನ ಉಸಿರಿನಾಣೆ
ಹೊತ್ತಿದ ಬತ್ತಿಗಳು ಉರಿಯಲೇಬೇಕು
ಹೋರಾಟಕೆ ಪ್ರತಿಫಲ ದೊರಕಲೇಬೇಕು
ಒಂದು ದಿನ… ಆ ಒಂದು ದಿನ
ಕಂಡೇ ಕಾಣುವೆವು ನಿನ್ನ ಕಣ್ಣಲ್ಲಿ ನಕ್ಷತ್ರ ಬೆಳಕ|

ದುಃಖದ ಸುನಾಮಿ ಅಲೆಗಳು ಅಪ್ಪಳಿಸುತ್ತಿವೆ
ನೀನಿರುವಲ್ಲಿಂದಲೇ ಒಮ್ಮೆ ಇಣಕಿ ನೋಡು ದಾಮಿನಿ
ಎಲ್ಲರ ಮನದಲಿ ನೀನು ಜೀವಂತವಾಗಿರುವೆ
ಮಾನಿನಯರ ಮಾನ ಕಾಯಲು ಕಾರಣವಾಗಿರುವೆ
ನಿನ್ನಾಣೆ ನಿನ್ನ ನಿಲ್ಲುತ್ತಿರುವ ಉಸಿರಿನಾಣೆ
ಹುಸಿಯಾಗದು ಲಕ್ಷಾಂತರ ಜನರ ಪ್ರಾರ್ಥನೆ.

ಹೋರಾಟದ ದೈತ್ಯ ಅಲೆಗಳ ಮುಂದೆ
ಯಾವ ಶಕ್ತಿಯೂ ನಿಲ್ಲಲಾರದು ನೋಡು
ಹಕ್ಕು ಪಡೆದೇ ತೀರುವ ಛಲವಿದೆ
ಉರಿವ ಕೊಳ್ಳಿ ಹಿಡಿದ ಹೊಸ ವರ್ಷದ ಬೆಳಗು
ಪೀಡಿತ ಹೆಣ್ಣುಗಳಿಗೆ ಸಮರ್ಪಿತ ನೋಡು

ಲೋಕವೇ ಏನಾಗಿದೆ ನಿನ್ನ ಕರುಳಿಗೆ
ದಾಮಿನಿಯ ಉಸಿರು ವ್ಯರ್ಥವಾಗಬೇಕೆ?
ಅವಳು ಬದುಕಿದ್ದಾಳೆ ನನ್ನಲಿ ನಿನ್ನಲಿ ಎಲ್ಲರಲಿ
ಧೈರ್ಯ ಸಾಹಸದ ಕುರುಹಾಗಿ,
ಜೀವನೋತ್ಸಾಹದ ಚಿಲುಮೆಯಾಗಿ
ಬರುವ ನಾಳೆಯ ಭರವಸೆಯ ಬೆಳಕಾಗಿ|

ಹೀಗೆಯೇ ಬಿಡಲಾರೆವು ಆ ಬಲತ್ಕಾರಿಗಳನ್ನು
ಎದೆ ಮೆಟ್ಟಿ ನ್ಯಾಯ ಕೇಳುವ ಬಲವಿದೆ.
ಹಕ್ಕು ಪಡೆದೇ ತೀರುವ ಛಲವಿದೆ.
ಗಲ್ಲು ಶಿಕ್ಷೆ ನೀಡಿಯೇ ತೀರುತ್ತೇವೆ
ಬಲತ್ಕರಿಸಿ, ಸಾಯಿಸಿದ ಎಲ್ಲ ಸೀತೆಯರ ಲೆಕ್ಕ
ಚುಕ್ತಾ ಮಾಡುತ್ತೇವೆ ಇಲ್ಲಿಯೇ ಈ ಭೂಮಿ ಮೇಲೆಯೆ|
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...