Home / ಕವನ / ಕವಿತೆ / ವಸುವೆಂಬ ಬೆಳದಿಂಗಳ ಬಾಲೆ

ವಸುವೆಂಬ ಬೆಳದಿಂಗಳ ಬಾಲೆ

ಕಣ್ಣೆದುರೇ ನಡೆವ ಎಷ್ಟೊಂದು ಘಟನಗೆಗಳಿಗೆ
ತಲಸ್ಪರ್ಶಿ ಸ್ಪರ್ಶ, ನೋಟ, ಸಂಶೋಧಕಳಾಗುವವಳೇ
ಹೊಸದನ್ನು ಹುಡುಕಿ ಹೆಕ್ಕಿ ಉಣಬಡಿಸುವವಳೇ
ಮೃದು ಸೌಮ್ಯ ಮಾತಿನ ಮನಸು ಗೆದ್ದವಳೇ
ಇಂದೇಕೆ ಮೌನವಾಗಿ ಮಾತನಾಡದೇ ಮಲಗಿರುವೆ.

ನಿಂತ ನೀರಾಗದೇ ಸದಾ ಹರಿವ ಹೊಳೆನೀರೆ
ಎಡಪಂಥೀಯರ ನಡುವಿನ ಜನಪರದ ಮನಸೇ
ಸ್ತ್ರೀವಾದಿ, ಮಾನವೀಯ ನೆಲೆಯ ಮಾತೇ
ಕಳ್ಳುಬಳ್ಳಿಯ ಸಂಬಂಧಗಳ ದೂರ ಸರಿಸಿ
ಬಾರದ ದಾರಿಗೆ ಹೀಗೇಕೆ ಎದ್ದು ನಡೆದೆ ವಸು?

ಕನ್ನಡ ಸಾಹಿತ್ಯ ಚರಿತ್ರೆಗೆ ಹೊಸ ಭಾಷ್ಯ ಬರೆಯಲು
ನನ್ನೊಂದಿಗೆ ನಿನ್ನ ಒಪ್ಪಂದವಾಗಿತ್ತಲ್ಲವೆ?
ನೀನು ಕೇಳಿದ ಲೇಖನ ನಾನಿನ್ನೂ ಮುಗಿಸಿಲ್ಲ
ಅರ್ಧಕ್ಕೇ ನಿಂತ ಲೇಖನ ಪೂರ್ಣವಾಗುವ ಮುನ್ನ
ಎಲ್ಲರನ್ನಗಲಿ ಹೋಗುವುದು ಸರಿಯೇ ಹೇಳು ವಸು.

ಬೇಡ ಮಾರಾಯ್ತಿ ಹೀಗೆ ಮಾಡಬೇಡ
ನಿನ್ನ ಅಸಂಖ್ಯಾತ ಗೆಳತಿ, ವಿದ್ಯಾರ್ಥಿನಿಯರಿದ್ದಾರೆ
ನಿನ್ನ ಎಷ್ಟೊಂದು ಯೋಜನೆಗಳು ಅಪೂರ್ಣವಾಗಿದೆ
ಚಲನಶೀಲ ಗತಿಯೇ ಜೀವನೋತ್ಸಾಹದ ಚಿಲುಮೆಯೇ
ಮನೆಯಲ್ಲಿ ಮಗಳು ಕಾಯುತ್ತಿದ್ದಾಳೆ ಬೇಗ ಬಾ ವಸು.

ಅರ್ಧಕ್ಕೆ ನಿಂತ ನಿನ್ನ ಶಸ್ತ್ರ ಚಿತ್ರ ಮುಗಿಸಿ
ಪೂರ್ಣಗೊಂಡು ತೆರೆಕಾಣುವ ಮುನ್ನವೇ
ಅವನಿಗೆ ವಿದಾಯ ಹೇಳುವ ಮೊದಲೇ
ನಿನ್ನ ನೂರಾರು ಕನಸುಗಳ ಮನಸಿನಲ್ಲೇ ಮುಚ್ಚಿಟ್ಟು
ಹೀಗೆ ಮರೆಯಾಗುವುದು ನ್ಯಾಯವೇ ಹೇಳು ವಸು?
*****
(ಅವನಿ ಎಂಬುದು ಡಾ.ವಸು ಅವರ ಮಗಳ ಹೆಸರು)

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...