Home / ಕವನ / ಅನುವಾದ / ಶ್ರೀಹರೀ ಶ್ರೀಹರೀ ಶ್ರೀಹರೀ

ಶ್ರೀಹರೀ ಶ್ರೀಹರೀ ಶ್ರೀಹರೀ

ಮೂಲ: ಅರವಿಂದ ಗುಹಾ

ಹಿಂದೊಮ್ಮೆ ಒಬ್ಬ ಬೆಲೆವೆಣ್ಣನ್ನು ಕೂಡಿದೆ
ಎರಡೂವರೆ ರೂಪಾಯಿ ಕೊಟ್ಟು,
ಕತ್ತಲ ಓಣಿಯಲ್ಲಿ ಪಡೆದೆ, ಲೆಕ್ಕಾಚಾರದ ಪ್ರೀತಿ
ಕೊಟ್ಟ ಹಣಕ್ಕೆ ತಕ್ಕಷ್ಟು;
ನೆನಪಿಸಿಕೊಳ್ಳಲು ಅವಳ ಎಷ್ಟೋ ಯತ್ನಿಸುತ್ತೇನೆ
ಸ್ಮೃತಿಯ ತಳದಾಳಕ್ಕೇ ಜಾರಿ,
ಏನು ಮಾಡಿದರು ಸಹ ನೆನಪಾಗುತ್ತಿಲ್ಲವೇ
ಶ್ರೀಹರೀ ಶ್ರೀಹರೀ ಶ್ರೀಹರೀ!

ಅವಳ ಹೆಸರೆಂಥದೋ ನೆನಪಾಗುತ್ತಿಲ್ಲ ಈಗ
ಘಟನೆ ಬಲು ಹಿಂದೆ ನಡೆದದ್ದು,
ಏನವಳ ಹೆಸರು? ಮಾಲತಿಯೋ, ತರಂಗಿಣಿಯೊ
ರಾಧಾಮಣಿಯೊ, ನೆನಪು ಮಬ್ಬು;
ಇರಲಿ ಬಿಡಿ ಅದನ್ನೀಗ, ಒಂದು ಮಾತಂತು ನಿಜ
ಅವಳ ಜಡೆ ಬೆನ್ನಲ್ಲಿ ಜಾರಿ,
ಕಾಡಿಗೆ ಹೊಳಪಿನ ನೋಟ ಎದೆ ಸೀಳುವಂತಿತ್ತು
ಶ್ರೀಹರೀ ಶ್ರೀಹರೀ ಶ್ರೀಹರೀ!

ಎಷ್ಟನೆಯ ಸ್ವರ್ಗಕ್ಕೋ ರವಾನೆಯಾದಂತಿದ್ದೆ
ರತಿದೇವಿ ರೆಕ್ಕೆಯನ್ನೇರಿ,
ರೆಕ್ಕೆಯ ಸ್ಪರ್ಶವಷ್ಟೆ ನೆನಪಿನಲ್ಲುಳಿದಿದೆ
ಉಳಿದ ವಿವರಗಳೆಲ್ಲ ತೀರಿ;
ವಿಗ್ರಹದ ಮೂಗು ತುಟಿ ಕೈಕಾಲು ಕೆತ್ತನೆ
ಹೂತುಹೋಗಿದೆ ಮರವೆಯಲ್ಲಿ,
ಕಡೆದಿದ್ದ ಕಲ್ಲಷ್ಟೆ ನೆನಪಲ್ಲಿ ಉಳಿದಿದೆ
ಶ್ರೀಹರೀ ಶ್ರೀಹರೀ ಶ್ರೀಹರಿ!

ಕುರುಡನಿಗೆ ಕಂಡೀತು ಏನು? ಆದರೆ ನೋಡಿ,
ಕತ್ತಲೆಯನ್ನೆ ಅವನು ಹಾಡಬಹುದು,
ಕತ್ತಲೆಯಲ್ಲಿ ನಾನು ಮಟ್ಟೊಂದ ರಚಿಸಿದರೆ
ಹಾಡಲು ಅದಕ್ಕೆ ಒಂದು ಗೀತೆ ಬೇಕು;
ಎರಡೂವರೆ ರೂಪಾಯಿ ಕೊಂಡ ಪ್ರೀತಿಯು ಹೀಗೆ
ಹಾಡೊಂದು ಹುಟ್ಟಲು ಆಯ್ತು ದಾರಿ,
ಆಕಾಶ ಪುಟ್ಟ ಕೊಳದಲ್ಲಿ ಪ್ರತಿಬಿಂಬಿಸಿತು
ಶ್ರೀಹರೀ ಶ್ರೀಹರೀ ಶ್ರೀಹರೀ!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...