Home / ಕಥೆ / ಜನಪದ / ಗರತಿ ಸಂಗವ್ವ

ಗರತಿ ಸಂಗವ್ವ

ಎಡಗೈಯಲ್ಲಿ ಸಿಂಬೆ, ಬಲಗೈಯಲ್ಲಿ ಕೊಡ ಹಿಡಕೊಂಡು ಸಂಗವ್ವನು ನೀರು ತರಲು ಹೊಳೆಗೆ ಹೊರಟಿದ್ದಾಳೆ. ಆ ದಾರಿಯು ಅರಮನೆಯ ಮುಂದೆ ಹಾದು ಹೋಗುವದು. ಕಿತ್ತೂರದೊರೆಯು ಅರಮನೆಯಲ್ಲಿ ಕುಳಿತಲ್ಲಿಂದಲೇ ಸಂಗಮ್ಮನನ್ನು ಕಂಡು ಎದ್ದು ಬಂದು ಕೇಳಿದನು –
“ಹತ್ತೂರು ಕೊಡುತ್ತೇನೆ, ಮುಖತೋರಿಸು.”

“ಹತ್ತೂರು ಕೊಟ್ಟರೂ ನನ್ನ ನತ್ತಿನ ಬೆಲೆಯಾಗುವುದಿಲ್ಲ.  ಅತ್ತೆಯ ಹೊಟ್ಟೆಯಲ್ಲಿ ಹುಟ್ಟಿದವನು ಪ್ರತ್ಯಕ್ಷ ಅರ್ಜುನನೇ ಆಗಿದ್ದಾನೆ. ಆತನ ಕಾಲಕೆರವಿನ ಬೆಲೆ ನಿನಗಿಲ್ಲ” ಎಂದು ಖಂಡತುಂಡವಾಗಿ ನುಡಿದಳು ಸಂಗಮ್ಮ.  ಆದರೇನು, ಹಸಿದ ಹುಲಿಯನ್ನು ಕೆಣಕಿದೆನಲ್ಲ ಎಂದು ಎದೆಗುದಿ ಉಂಟಾಗದೆ ಇರಲಿಲ್ಲ ಆಕೆಗೆ.

ಹೊಳೆಗೆ ಹೇಗೆ ಹೋದಳೋ ನೀರು ಹೇಗೆ ತುಂಬಿದಳೋ ಆಕೆಗೆ ತಿಳಿಯಲಿಲ್ಲ. ತುಂಬಿದ ಕೊಡವನ್ನು ತಲೆಯಮೇಲೆ ಹೊತ್ತುದೇ ತಡ, ಗಾಳಿವೇಗದಿಂದ ಬಂದು ಮನೆಯನ್ನು ಸೇರಿದಳು. ಹೊಟ್ಟೆಯಲ್ಲಿ ಸಾಸಿವೆಯೆಣ್ಣೆ ಕಲೆಸುತ್ತಿತ್ತು.

ಮನೆಗೆ ಬಂದು ನೀರುಕೊಡವನ್ನು ಇಳುಹಿದವಳೇ ತಲೆಕಟ್ಟಿಕೊಂಡು ಸಂಗವ್ವ ಮಲಗಿಯೇಬಿಟ್ಟಳು.

ಕೆಲಸಕ್ಕೆ ಹೋದ ಮಾವಯ್ಯನು ಮನೆಗೆ ಬಂದು, ಸಂಗವ್ವ ಮಲಗಿದ್ದನ್ನು ಕಂಡನು. ತಲೆದಿಂಬಿನ ಬಳಿ ನಿಂತುಕೊಂಡು – “ಯಾಕೆ ಸಂಗಮ್ಮ ಮಲಗಿರುವೆಯಲ್ಲ” ಎಂದನು.

“ಕೈನೋವು, ಕಾಲುನೋವು. ವಿಚಿತ್ರವಾದ ಹಲವು ನೋವು ಮಾವಯ್ಯ.  ಸಾಯುತ್ತೇನೆ, ನೋವು ತಾಳಲಾಸಲ್ಲ – ತವರವರಿಗೆ ಹೇಳಿಕಳಿಸಿರಿ” ವಿನಯದಿಂದ ಸಂಗವ್ವ ನುಡಿದಳು.

ಕೈಹಿಡಿದ ಪತಿದೇವರು ಹೊರಗಿನಿಂದ ಬಂದು ಮಂಚದ ಬಳಿ ನಿಂತು ಕೇಳುತ್ತಾನೆ – “ಯಾಕೆ, ಮಲಗಿಕೊಂಡೆ ಕೆಳದಿ ?”

ಏನು ಹೇಳಲಿ, ಸಂದುಸಂದಿನ ನೋವು. ಸೂಜಿಯೂರುವಸ್ಟು ಸಹ ಸ್ಥಳ ನೋವಿಲ್ಲದಿಲ್ಲ. ಸಾಯುತ್ತೇನೆ ನನ್ನ ದೊರೆಯೇ ಹೆಚ್ಚಿನ ನೋವು !

ಹಾದಿಬೀದಿ ಉಡುಗಿಸಿ, ಹಾಲಿನ ಚಳಿಕೊಡಿರಿ. ಹಾದಿಯಲ್ಲಿ ನಿಂತವರೆಲ್ಲ ಬದಿಗಾಗಿರಿ. ಸಂಗಮ್ಮನ ತಾಯಿ ಅಳುತ್ತ ಬರುತ್ತಿದ್ದಾಳೆ.

ತಿಪ್ಪೆಯನ್ನು ಉಡುಗಿಸಿರಿ, ತುಪ್ಪದ ಚಳಿಕೊಡಿರಿ. ತಿಪ್ಪೆಯೊಳಗಿನ ಮಂದಿಯೆಲ್ಲ ಬದಿಗಾಗಿರಿ. ಸಂಗಮ್ಮನ ತಂದೆ ಅಳುತ್ತ ಬರುತ್ತಿದ್ದಾನೆ.

ಸಂಜ್ಞೆಯಿಂದ ತಾಯಿತಂದೆಗಳನ್ನು ಹತ್ತಿರಕ್ಕೆ ಕರೆದು ಕಿವಿಯಲ್ಲಿ ಹೇಳಿದಳು – ತಾನು ಹೇಳಬೇಕಾದುದನ್ನು. ಆ ಜೀವಬಿಟ್ಟು ಮೃತ್ಯುವನ್ನು ಗೆದ್ದಳು. ಮುಗಿಲ ದಾರಿಯಲ್ಲಿ ನಿಂತು ಕಿತ್ತೂರದೊರೆಯನ್ನು ಈಡಾಡಿದಳು.

ತಲೆಯಲ್ಲಿ ಚಂಡುಹೂವಿನ ದಂಡೆಯಿಂದ ಶೋಭಿಸುತ್ತಿರುವ ಸಂಗಮ್ಮನನ್ನು ಬಾಳೆಯ ಬನದಲ್ಲಿ ಬಯತಿರಿಸಿದರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್