Home / ಕಥೆ / ಜನಪದ / ಗರತಿ ಸಂಗವ್ವ

ಗರತಿ ಸಂಗವ್ವ

ಎಡಗೈಯಲ್ಲಿ ಸಿಂಬೆ, ಬಲಗೈಯಲ್ಲಿ ಕೊಡ ಹಿಡಕೊಂಡು ಸಂಗವ್ವನು ನೀರು ತರಲು ಹೊಳೆಗೆ ಹೊರಟಿದ್ದಾಳೆ. ಆ ದಾರಿಯು ಅರಮನೆಯ ಮುಂದೆ ಹಾದು ಹೋಗುವದು. ಕಿತ್ತೂರದೊರೆಯು ಅರಮನೆಯಲ್ಲಿ ಕುಳಿತಲ್ಲಿಂದಲೇ ಸಂಗಮ್ಮನನ್ನು ಕಂಡು ಎದ್ದು ಬಂದು ಕೇಳಿದನು –
“ಹತ್ತೂರು ಕೊಡುತ್ತೇನೆ, ಮುಖತೋರಿಸು.”

“ಹತ್ತೂರು ಕೊಟ್ಟರೂ ನನ್ನ ನತ್ತಿನ ಬೆಲೆಯಾಗುವುದಿಲ್ಲ.  ಅತ್ತೆಯ ಹೊಟ್ಟೆಯಲ್ಲಿ ಹುಟ್ಟಿದವನು ಪ್ರತ್ಯಕ್ಷ ಅರ್ಜುನನೇ ಆಗಿದ್ದಾನೆ. ಆತನ ಕಾಲಕೆರವಿನ ಬೆಲೆ ನಿನಗಿಲ್ಲ” ಎಂದು ಖಂಡತುಂಡವಾಗಿ ನುಡಿದಳು ಸಂಗಮ್ಮ.  ಆದರೇನು, ಹಸಿದ ಹುಲಿಯನ್ನು ಕೆಣಕಿದೆನಲ್ಲ ಎಂದು ಎದೆಗುದಿ ಉಂಟಾಗದೆ ಇರಲಿಲ್ಲ ಆಕೆಗೆ.

ಹೊಳೆಗೆ ಹೇಗೆ ಹೋದಳೋ ನೀರು ಹೇಗೆ ತುಂಬಿದಳೋ ಆಕೆಗೆ ತಿಳಿಯಲಿಲ್ಲ. ತುಂಬಿದ ಕೊಡವನ್ನು ತಲೆಯಮೇಲೆ ಹೊತ್ತುದೇ ತಡ, ಗಾಳಿವೇಗದಿಂದ ಬಂದು ಮನೆಯನ್ನು ಸೇರಿದಳು. ಹೊಟ್ಟೆಯಲ್ಲಿ ಸಾಸಿವೆಯೆಣ್ಣೆ ಕಲೆಸುತ್ತಿತ್ತು.

ಮನೆಗೆ ಬಂದು ನೀರುಕೊಡವನ್ನು ಇಳುಹಿದವಳೇ ತಲೆಕಟ್ಟಿಕೊಂಡು ಸಂಗವ್ವ ಮಲಗಿಯೇಬಿಟ್ಟಳು.

ಕೆಲಸಕ್ಕೆ ಹೋದ ಮಾವಯ್ಯನು ಮನೆಗೆ ಬಂದು, ಸಂಗವ್ವ ಮಲಗಿದ್ದನ್ನು ಕಂಡನು. ತಲೆದಿಂಬಿನ ಬಳಿ ನಿಂತುಕೊಂಡು – “ಯಾಕೆ ಸಂಗಮ್ಮ ಮಲಗಿರುವೆಯಲ್ಲ” ಎಂದನು.

“ಕೈನೋವು, ಕಾಲುನೋವು. ವಿಚಿತ್ರವಾದ ಹಲವು ನೋವು ಮಾವಯ್ಯ.  ಸಾಯುತ್ತೇನೆ, ನೋವು ತಾಳಲಾಸಲ್ಲ – ತವರವರಿಗೆ ಹೇಳಿಕಳಿಸಿರಿ” ವಿನಯದಿಂದ ಸಂಗವ್ವ ನುಡಿದಳು.

ಕೈಹಿಡಿದ ಪತಿದೇವರು ಹೊರಗಿನಿಂದ ಬಂದು ಮಂಚದ ಬಳಿ ನಿಂತು ಕೇಳುತ್ತಾನೆ – “ಯಾಕೆ, ಮಲಗಿಕೊಂಡೆ ಕೆಳದಿ ?”

ಏನು ಹೇಳಲಿ, ಸಂದುಸಂದಿನ ನೋವು. ಸೂಜಿಯೂರುವಸ್ಟು ಸಹ ಸ್ಥಳ ನೋವಿಲ್ಲದಿಲ್ಲ. ಸಾಯುತ್ತೇನೆ ನನ್ನ ದೊರೆಯೇ ಹೆಚ್ಚಿನ ನೋವು !

ಹಾದಿಬೀದಿ ಉಡುಗಿಸಿ, ಹಾಲಿನ ಚಳಿಕೊಡಿರಿ. ಹಾದಿಯಲ್ಲಿ ನಿಂತವರೆಲ್ಲ ಬದಿಗಾಗಿರಿ. ಸಂಗಮ್ಮನ ತಾಯಿ ಅಳುತ್ತ ಬರುತ್ತಿದ್ದಾಳೆ.

ತಿಪ್ಪೆಯನ್ನು ಉಡುಗಿಸಿರಿ, ತುಪ್ಪದ ಚಳಿಕೊಡಿರಿ. ತಿಪ್ಪೆಯೊಳಗಿನ ಮಂದಿಯೆಲ್ಲ ಬದಿಗಾಗಿರಿ. ಸಂಗಮ್ಮನ ತಂದೆ ಅಳುತ್ತ ಬರುತ್ತಿದ್ದಾನೆ.

ಸಂಜ್ಞೆಯಿಂದ ತಾಯಿತಂದೆಗಳನ್ನು ಹತ್ತಿರಕ್ಕೆ ಕರೆದು ಕಿವಿಯಲ್ಲಿ ಹೇಳಿದಳು – ತಾನು ಹೇಳಬೇಕಾದುದನ್ನು. ಆ ಜೀವಬಿಟ್ಟು ಮೃತ್ಯುವನ್ನು ಗೆದ್ದಳು. ಮುಗಿಲ ದಾರಿಯಲ್ಲಿ ನಿಂತು ಕಿತ್ತೂರದೊರೆಯನ್ನು ಈಡಾಡಿದಳು.

ತಲೆಯಲ್ಲಿ ಚಂಡುಹೂವಿನ ದಂಡೆಯಿಂದ ಶೋಭಿಸುತ್ತಿರುವ ಸಂಗಮ್ಮನನ್ನು ಬಾಳೆಯ ಬನದಲ್ಲಿ ಬಯತಿರಿಸಿದರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...