Home / ಕಥೆ / ಜನಪದ / ಗರತಿ ಸಂಗವ್ವ

ಗರತಿ ಸಂಗವ್ವ

ಎಡಗೈಯಲ್ಲಿ ಸಿಂಬೆ, ಬಲಗೈಯಲ್ಲಿ ಕೊಡ ಹಿಡಕೊಂಡು ಸಂಗವ್ವನು ನೀರು ತರಲು ಹೊಳೆಗೆ ಹೊರಟಿದ್ದಾಳೆ. ಆ ದಾರಿಯು ಅರಮನೆಯ ಮುಂದೆ ಹಾದು ಹೋಗುವದು. ಕಿತ್ತೂರದೊರೆಯು ಅರಮನೆಯಲ್ಲಿ ಕುಳಿತಲ್ಲಿಂದಲೇ ಸಂಗಮ್ಮನನ್ನು ಕಂಡು ಎದ್ದು ಬಂದು ಕೇಳಿದನು –
“ಹತ್ತೂರು ಕೊಡುತ್ತೇನೆ, ಮುಖತೋರಿಸು.”

“ಹತ್ತೂರು ಕೊಟ್ಟರೂ ನನ್ನ ನತ್ತಿನ ಬೆಲೆಯಾಗುವುದಿಲ್ಲ.  ಅತ್ತೆಯ ಹೊಟ್ಟೆಯಲ್ಲಿ ಹುಟ್ಟಿದವನು ಪ್ರತ್ಯಕ್ಷ ಅರ್ಜುನನೇ ಆಗಿದ್ದಾನೆ. ಆತನ ಕಾಲಕೆರವಿನ ಬೆಲೆ ನಿನಗಿಲ್ಲ” ಎಂದು ಖಂಡತುಂಡವಾಗಿ ನುಡಿದಳು ಸಂಗಮ್ಮ.  ಆದರೇನು, ಹಸಿದ ಹುಲಿಯನ್ನು ಕೆಣಕಿದೆನಲ್ಲ ಎಂದು ಎದೆಗುದಿ ಉಂಟಾಗದೆ ಇರಲಿಲ್ಲ ಆಕೆಗೆ.

ಹೊಳೆಗೆ ಹೇಗೆ ಹೋದಳೋ ನೀರು ಹೇಗೆ ತುಂಬಿದಳೋ ಆಕೆಗೆ ತಿಳಿಯಲಿಲ್ಲ. ತುಂಬಿದ ಕೊಡವನ್ನು ತಲೆಯಮೇಲೆ ಹೊತ್ತುದೇ ತಡ, ಗಾಳಿವೇಗದಿಂದ ಬಂದು ಮನೆಯನ್ನು ಸೇರಿದಳು. ಹೊಟ್ಟೆಯಲ್ಲಿ ಸಾಸಿವೆಯೆಣ್ಣೆ ಕಲೆಸುತ್ತಿತ್ತು.

ಮನೆಗೆ ಬಂದು ನೀರುಕೊಡವನ್ನು ಇಳುಹಿದವಳೇ ತಲೆಕಟ್ಟಿಕೊಂಡು ಸಂಗವ್ವ ಮಲಗಿಯೇಬಿಟ್ಟಳು.

ಕೆಲಸಕ್ಕೆ ಹೋದ ಮಾವಯ್ಯನು ಮನೆಗೆ ಬಂದು, ಸಂಗವ್ವ ಮಲಗಿದ್ದನ್ನು ಕಂಡನು. ತಲೆದಿಂಬಿನ ಬಳಿ ನಿಂತುಕೊಂಡು – “ಯಾಕೆ ಸಂಗಮ್ಮ ಮಲಗಿರುವೆಯಲ್ಲ” ಎಂದನು.

“ಕೈನೋವು, ಕಾಲುನೋವು. ವಿಚಿತ್ರವಾದ ಹಲವು ನೋವು ಮಾವಯ್ಯ.  ಸಾಯುತ್ತೇನೆ, ನೋವು ತಾಳಲಾಸಲ್ಲ – ತವರವರಿಗೆ ಹೇಳಿಕಳಿಸಿರಿ” ವಿನಯದಿಂದ ಸಂಗವ್ವ ನುಡಿದಳು.

ಕೈಹಿಡಿದ ಪತಿದೇವರು ಹೊರಗಿನಿಂದ ಬಂದು ಮಂಚದ ಬಳಿ ನಿಂತು ಕೇಳುತ್ತಾನೆ – “ಯಾಕೆ, ಮಲಗಿಕೊಂಡೆ ಕೆಳದಿ ?”

ಏನು ಹೇಳಲಿ, ಸಂದುಸಂದಿನ ನೋವು. ಸೂಜಿಯೂರುವಸ್ಟು ಸಹ ಸ್ಥಳ ನೋವಿಲ್ಲದಿಲ್ಲ. ಸಾಯುತ್ತೇನೆ ನನ್ನ ದೊರೆಯೇ ಹೆಚ್ಚಿನ ನೋವು !

ಹಾದಿಬೀದಿ ಉಡುಗಿಸಿ, ಹಾಲಿನ ಚಳಿಕೊಡಿರಿ. ಹಾದಿಯಲ್ಲಿ ನಿಂತವರೆಲ್ಲ ಬದಿಗಾಗಿರಿ. ಸಂಗಮ್ಮನ ತಾಯಿ ಅಳುತ್ತ ಬರುತ್ತಿದ್ದಾಳೆ.

ತಿಪ್ಪೆಯನ್ನು ಉಡುಗಿಸಿರಿ, ತುಪ್ಪದ ಚಳಿಕೊಡಿರಿ. ತಿಪ್ಪೆಯೊಳಗಿನ ಮಂದಿಯೆಲ್ಲ ಬದಿಗಾಗಿರಿ. ಸಂಗಮ್ಮನ ತಂದೆ ಅಳುತ್ತ ಬರುತ್ತಿದ್ದಾನೆ.

ಸಂಜ್ಞೆಯಿಂದ ತಾಯಿತಂದೆಗಳನ್ನು ಹತ್ತಿರಕ್ಕೆ ಕರೆದು ಕಿವಿಯಲ್ಲಿ ಹೇಳಿದಳು – ತಾನು ಹೇಳಬೇಕಾದುದನ್ನು. ಆ ಜೀವಬಿಟ್ಟು ಮೃತ್ಯುವನ್ನು ಗೆದ್ದಳು. ಮುಗಿಲ ದಾರಿಯಲ್ಲಿ ನಿಂತು ಕಿತ್ತೂರದೊರೆಯನ್ನು ಈಡಾಡಿದಳು.

ತಲೆಯಲ್ಲಿ ಚಂಡುಹೂವಿನ ದಂಡೆಯಿಂದ ಶೋಭಿಸುತ್ತಿರುವ ಸಂಗಮ್ಮನನ್ನು ಬಾಳೆಯ ಬನದಲ್ಲಿ ಬಯತಿರಿಸಿದರು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...