Home / ಕವನ / ಕವಿತೆ / ಓಂ! ನಮೋ!

ಓಂ! ನಮೋ!

ನಿನ್ನ ಮಗಳಾದ ಲಕ್ಷ್ಮಿಯಂತೆ ಸೌಂದರ್ಯದ ತವರಲ್ಲ ನಾನು
ಓ! ಸಮುದ್ರ!
ಆದರೆ ಮಗುವಿನಂತೆ ನಿನ್ನನು ಪ್ರೀತಿಸಿದೆ! ಕರುಣಿಸು ತಂದೆ!
ನಾರಾಯಣನಂತೆ ಲಕ್ಷ್ಮೀಲೋಲನಲ್ಲ, ಶೇಷಶಾಯಿಯಲ್ಲ ಓ! ಸಮುದ್ರ!
ಅವನಂತೆ ಪಾರಾಯಣ ಮಾಡಿದೆ ನಿನ್ನ! ಉರವಣಿಸೆನ್ನ ಮನವ, ತಂದೆ!
ಚಂದ್ರನಂತೆ ನಿನ್ನ ಹೈದಯವನು ಉಕ್ಕೇರಿಸಿದವನಲ್ಲ, ಓ! ಸಮುದ್ರ!
ಆದರೆ ನಿನ್ನ ಮಹಿಮೆಯ ನೋಡಿ ಉಕ್ಕೇರಿದವನು, ತಂದೆ!
ನೀಲಕಂಠನಂತೆ,-ನಿನ್ನನುರಿಸಿದ ವಿಷವ ನುಂಗಿಲ್ಲ, ಓ! ಸಮುದ್ರ!
ಆದರೆ ರಾಕ್ಷಸರಂತೆ ಅಮೃತವನೊಂದೆ ಬಯಸಿದವನಲ್ಲ, ಕರುಣಿಸು ತಂದೆ!
ದೇವನಂತೆ ಮತ್ಸ್ಯಕೂರ್ಮವಾಗಿ ನಿನ್ನ ತೊಡೆಯ ಮೇಲಾಡಿಲ್ಲ,
ಓ! ಸಮುದ್ರ!
ಆದರೆ ಕೂರ್ಮ-ಮತ್ಸ್ಯಗಳಲ್ಲಿ ಸಹ ದೇವರನ್ನು ಕಂಡಿರುವೆನು, ತಂದೆ!
ದೇವತೆಗಳಂತೆ ನಿನ್ನಾಳವನು ಮಂಥಿಸಿ ತಿಳಿದಿಲ್ಲ, ಓ! ಸಮುದ್ರ!
ಆದರೆ ಚಿಂತಿಸಲು ಅದು ಕಣ್ಣೆದುರಿಗೆ ತಾನಾಗಿ ಹೊಳೆದಿಹುದು, ತಂದೆ!
ಶೆಲ್ಲಿಯಂತೆ ಮರಣದ ತೆರೆಯೆತ್ತಿ, ನಿನ್ನನ್ನು ನೋಡಿದವನಲ್ಲ
ಓ! ಸಮುದ್ರ!
ಆದರೆ ನಿನ್ನ ತೆರೆತೆರೆಯಲ್ಲಿ ಹುಟ್ಟುಸಾವಿನ ಗುಟ್ಟನು, ಕಾವ್ಯದ
ಶೆಲೆಯನು ಕಂಡೆನು, ತಂದೆ!
ಹಿಂದಿನ ಕಾವ್ಯದಲ್ಲಿಯಂತೆ ನಿನ್ನ ರೂಪವಿಲ್ಲಿ ಥಳಥಳಿಸಿಲ್ಲ, ಓ! ಸಮುದ್ರ!
ಆದರೆ ನಿನ್ನನ್ನು ನೋಡದೆ ಬಣ್ಣಿಸಿ ನಾನು ಹಳಹಳಿಸಿಲ್ಲ, ತಂದೆ!
ನಿನ್ನ ಸಾವಿರ ಭಂಗಿಗಳನ್ನು ಕೀರ್ತಿಸಲು ಸ್ವರವಿಲ್ಲ, ನನ್ನ ಪುಂಗಿಗೆ.
ನಿನ್ನ ಬಣ್ಣ-ಬಣ್ಣಗಳ ಬಣ್ಣಿಸುವ ಕುಸುರಿಲ್ಲ ನನ್ನ ಕಲೆಗೆ.
ಒ೦ದೇ ಒಂದು ಮಾತನು ನೂರೊಂದು ಸಲ ಸಾರುವೆನು,-
ನಿನ್ನ ನೋಡಿ ನನ್ನ ಜೀವನಕೆ ಮ೦ಗಳವಾಯ್ತು, ಮ೦ಗಳವಾಯ್ತು,
ಮಹಾಮಂಗಳವಾಯ್ತು!
ಓಂ! ನಮೋ! ಸಮುದ್ರಪುರುಷಾಯ!
*****
Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...