Home / ಕವನ / ಕವಿತೆ / ಮೇಘಮಯೂರ

ಮೇಘಮಯೂರ

ಕುಣಿಯ ತೊಡಗಿತು ಮೇಘಮಯೂರ
ಭವ್ಯಭೀಕರಾ ಬೃಹದಾಕಾರ
ರುದ್ರವಾದರೂ ಶುಭಶ್ರೀಕಾರ
ಕುಣಿಯ ತೊಡಗಿತು ಮೇಘಮಯೂರ |

ಗಗನರಂಗವನು ತುಂಬಿ ಬೆಳೆಯಿತು
ಚಿಕ್ಕೆಗಣ್ಣಿನಾ ಪಿಚ್ಛ ಹರಡಿತು
ಸಿಡಿಲು ಮಾಲೆಯಲಿ ಮುಡಿಯ ಕಟ್ಟಿತು
ಥಕಥೋಂ ಥಕಥೈ ಕಾಲು ಹಾಕಿತು |

ಹೆಜ್ಜೆ ಹೆಜ್ಜೆಯಲಿ ಗೆಜ್ಜೆ ನುಡಿಯಿತು
ಮೃದಂಗ ಬಾನೊಳು ಗುಡುಗು ಮೊಳಗಿತು
ಪದ ಘಟ್ಟನೆಯಲಿ ಭುವನ ನಡುಗಿತು
ಕುಣಿದ ಭಾವದಲಿ ಮಿಂಚು ಮೆರೆಯಿತು |

ಬುವಿಯ ದೇಗುಲದ ಬಾಗಿಲೆದುರಿನಲಿ
ಚಿಕ್ಕೆ ಚಿಗಿತ ಅಂಗಳದ ರಂಗದಲಿ
ದೇವದಾಸಿ ಕುಣಿದಂತೆ ಕುಣಿಯಿತು
ದೇವಲೋಕವೇ ನಿಂತು ನೋಡಿತು |

ಹಾಲು ಜೇನು ಜಲಕುಂಭವೆತ್ತಿತು
ನೀಲಕಂಠನಭಿಷೇಕ ನಡೆಯಿತು
ಜಗ ಮೂಕವಾಗಿ ತಲೆವಾಗಿ ನಿಂತಿತು
ಇಂದ್ರಲೋಕವತಿ ಚಿಕಿತವಾಯಿತು |

ಮುರಿಯ ಬಂದಿತೆನುವಂತೆ ಕುಣಿಯಿತು
ಪ್ರಮತ್ತ ಪ್ರಳಯಾವೇಶ ಬೆಳೆಯಿತು
ಸುಪ್ತ ಸಮೀರಣ ರೊಚ್ಚಿಗೆದ್ದಿತು
ಸಪ್ತ ಸಮುದ್ರದಿ ಹುಚ್ಚು ಕುಣಿಯಿತು |

ಬೆಂದ ನೆಲವು ಎದೆ ತೆರೆದು ಬೇಡಿತು
ಕಮರಿ ಹೋದ ಕಾಡೆಲ್ಲ ಕೆದರಿತು
ಕಣ್ಣು ಹಿಗ್ಗಿಸುತ ಗುಡ್ಡ ನೋಡಿತು
ವಿಶ್ವವೆಲ್ಲ ಹಾತೊರೆದು ನಿಂತಿತು |

ಮರಣ ಬಂದರೂ ಹರಣ ಸೊಕ್ಕಿತು
ಚರಣ ಚರಣದಲಿ ಜೀವ ಚಿಗುರಿತು
ಹಚ್ಚ ಹಸಿರು ಹುಚ್ಚೆದ್ದು ಚಿಮ್ಮಿತು
ಬಣ್ಣ ಬಣ್ಣಗಳ ಬಾಳು ಬೆಳೆಯಿತು |

ಮಣ್ಣನೆತ್ತಿ ಅರಮನೆಯ ಕಟ್ಟಿತು
ಇಂದ್ರ ಚಾಪಗಳ ಚೆಲುವ ತೋರಿತು
ಬೆಂದ ಬಾಳಿನಲಿ ತಂಪನೆರೆಯಿತು
ಬಂದುದೆಲ್ಲ ಬಹು ಚಂದವಾಯಿತು |

ತೊಳೆದು ಹೋಯಿತೆಲೆ ಜಗದ ಮೈಲಿಗೆ
ಇಟ್ಟಿತೆಲ್ಲೆಡೆಗೆ ಧೂಪ ದೀವಿಗೆ
ಮನದಿ ಅರಳಿಸಿತು ಜಾಜಿ ಮಲ್ಲಿಗೆ
ಭಾವ ಭಕುತಿಯಲಿ ದೇವ ಪೂಜೆಗೆ |

ಕುಣಿಯ ತೊಡಗಿತು ಮೇಘಮಯೂರ
ಭವ್ಯ ಭೀಕರ ಬೃಹದಾಕಾರ
ರುದ್ರವಾದರೂ ಶುಭ ಶ್ರೀಕಾರ
ಕುಣಿಯತೊಡಗಿತು ಮೇಘಮಯೂರ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...