Home / ಕವನ / ಕವಿತೆ / ವಸಂತ ಲಕ್ಷ್ಮಿ

ವಸಂತ ಲಕ್ಷ್ಮಿ

ಇಳೆಗೆ ಬಂದಳದೋ ಲಕ್ಷ್ಮಿ
ಮಧುಮಾಸದ ಅಮೃತ ರಶ್ಮಿ!

ಮಿಂದು ಬಂತು ನೆಲಜಲ
ಸ್ವಾಗತಿಸಿತು ಭೂತಲ
ದಿಸೆ ದಿಸೆಯೂ ಹೊಳೆವ ಹವಳ
ಸ್ವಸ್ತಿ ಲಿಖಿತ ಹೊಸ್ತಿಲ!

ಗಗನ ಕರದ ನೀಲಕಮಲ
ಅರ್ಘ್ಯವೀಯೆ ಕಿರಣ ಸುಜಲ
ಕೈ ಮುಗಿಯಿತು ಜೀವಕುಲ
ಭಾವ ಪಕ್ವ ಫಲವಲ!

ಪುರೂರವನ ಎದುರು ನಿಂತ
ಇವಳಪ್ಸರೆ ಊರ್ವಶಿ!
ಬಾನ್ನೆಲದಲಿ ಬೆಳದನಂತ
ಮತ್ತಧವಳ ಸುಖಶಶಿ!

ಜನ ಬನಗಳ ಅಂತರಂಗ
ಮಥಿಸಿ ಬಂತು ಹೃತ್ತರಂಗ
ವಿಶ್ವವಾಯ್ತು ನೃತ್ಯರಂಗ
ಈ ವಸಂತ ಲಕ್ಷ್ಮಿಗೆ!

ಹಸುರಿನ ಕೊನೆ ಕೆಂಪೊಡೆಯಿತು
ಎಡೆಯೆಡೆಯಲಿ ಕಂಪಡರಿತು
ಹಸಿದೆದೆಯಲಿ ಕಂಡರಸಿತು
ಕನಸಿನ ಕಮನೀಯತೆ!

ಸುಳಿದಾಡಿತು ಗಂಧಪವನ
ಸ್ಫೂರ್ತಿಸಿರಲು ಪ್ರೇಮ ಕವನ
ತುಂಬಿತುಟಿಯು ನುಡಿಸಿಯದನ
ಬನ ಬನವನು ಕುಣಿಸಿತು!

ಅದೊ ಕೋಕಿಲ ಮತ್ತಗೀತ
ವನಮೋದದಿ ರೋಮಾಂಚಿತ
ಹೆಣ್ಣುಗಂಡು ಕಾಮವ್ಯಥಿತ
ಸುಖ ಝೇಂಕೃತ ಭಾವವು!

ವೈರಾಗ್ಯದ ಬಗೆ ಚೆದರಿತು
ಅನುರಾಗದ ತಪ ಕೊನರಿತು
ನಂಜುಂಡನ ತುಟಿ ಅದುರಿತು
ಅಶುಭದ ವಿಷ ನೆಕ್ಕಿತು!

ಯುಗ ಯುಗಗಳ ಸೃಜನಗೀತ
ಹೊಮ್ಮಿ ಬರಲು, ವಿಶ್ವ ಪ್ರೀತ
ಈ ಲೋಕವು ಪುಣ್ಯ ತೀರ್ಥ
ಹೃನ್ನದಿಗಳು ಬೆರೆಯಲು!

ಸಂಸಾರದ ಕಟು ಬಂಧನ-
ವಾಯ್ತು ಇಂದು ನವನಂದನ
ಎದೆಯೆದೆಯಲಿ ಮಧು ನರ್ತನ
ನಗೆ ಕೊನರಿತಕಾರಣ!

ಬಾರೆ ಬಾರೆ ಭಾಗ್ಯಲಕ್ಷ್ಮಿ
ನಾಕ ತೊರೆದ ಪುಣ್ಯರಶ್ಮಿ
ಜಗ ಕೋರಿದೆ ಸುಸ್ವಾಗತ
ಬಾರೊಲವಿನ ಅಭ್ಯಾಗತ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...