Home / ಕವನ / ಕವಿತೆ / ವಸಂತ ಲಕ್ಷ್ಮಿ

ವಸಂತ ಲಕ್ಷ್ಮಿ

ಇಳೆಗೆ ಬಂದಳದೋ ಲಕ್ಷ್ಮಿ
ಮಧುಮಾಸದ ಅಮೃತ ರಶ್ಮಿ!

ಮಿಂದು ಬಂತು ನೆಲಜಲ
ಸ್ವಾಗತಿಸಿತು ಭೂತಲ
ದಿಸೆ ದಿಸೆಯೂ ಹೊಳೆವ ಹವಳ
ಸ್ವಸ್ತಿ ಲಿಖಿತ ಹೊಸ್ತಿಲ!

ಗಗನ ಕರದ ನೀಲಕಮಲ
ಅರ್ಘ್ಯವೀಯೆ ಕಿರಣ ಸುಜಲ
ಕೈ ಮುಗಿಯಿತು ಜೀವಕುಲ
ಭಾವ ಪಕ್ವ ಫಲವಲ!

ಪುರೂರವನ ಎದುರು ನಿಂತ
ಇವಳಪ್ಸರೆ ಊರ್ವಶಿ!
ಬಾನ್ನೆಲದಲಿ ಬೆಳದನಂತ
ಮತ್ತಧವಳ ಸುಖಶಶಿ!

ಜನ ಬನಗಳ ಅಂತರಂಗ
ಮಥಿಸಿ ಬಂತು ಹೃತ್ತರಂಗ
ವಿಶ್ವವಾಯ್ತು ನೃತ್ಯರಂಗ
ಈ ವಸಂತ ಲಕ್ಷ್ಮಿಗೆ!

ಹಸುರಿನ ಕೊನೆ ಕೆಂಪೊಡೆಯಿತು
ಎಡೆಯೆಡೆಯಲಿ ಕಂಪಡರಿತು
ಹಸಿದೆದೆಯಲಿ ಕಂಡರಸಿತು
ಕನಸಿನ ಕಮನೀಯತೆ!

ಸುಳಿದಾಡಿತು ಗಂಧಪವನ
ಸ್ಫೂರ್ತಿಸಿರಲು ಪ್ರೇಮ ಕವನ
ತುಂಬಿತುಟಿಯು ನುಡಿಸಿಯದನ
ಬನ ಬನವನು ಕುಣಿಸಿತು!

ಅದೊ ಕೋಕಿಲ ಮತ್ತಗೀತ
ವನಮೋದದಿ ರೋಮಾಂಚಿತ
ಹೆಣ್ಣುಗಂಡು ಕಾಮವ್ಯಥಿತ
ಸುಖ ಝೇಂಕೃತ ಭಾವವು!

ವೈರಾಗ್ಯದ ಬಗೆ ಚೆದರಿತು
ಅನುರಾಗದ ತಪ ಕೊನರಿತು
ನಂಜುಂಡನ ತುಟಿ ಅದುರಿತು
ಅಶುಭದ ವಿಷ ನೆಕ್ಕಿತು!

ಯುಗ ಯುಗಗಳ ಸೃಜನಗೀತ
ಹೊಮ್ಮಿ ಬರಲು, ವಿಶ್ವ ಪ್ರೀತ
ಈ ಲೋಕವು ಪುಣ್ಯ ತೀರ್ಥ
ಹೃನ್ನದಿಗಳು ಬೆರೆಯಲು!

ಸಂಸಾರದ ಕಟು ಬಂಧನ-
ವಾಯ್ತು ಇಂದು ನವನಂದನ
ಎದೆಯೆದೆಯಲಿ ಮಧು ನರ್ತನ
ನಗೆ ಕೊನರಿತಕಾರಣ!

ಬಾರೆ ಬಾರೆ ಭಾಗ್ಯಲಕ್ಷ್ಮಿ
ನಾಕ ತೊರೆದ ಪುಣ್ಯರಶ್ಮಿ
ಜಗ ಕೋರಿದೆ ಸುಸ್ವಾಗತ
ಬಾರೊಲವಿನ ಅಭ್ಯಾಗತ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...