Home / ಕವನ / ಕವಿತೆ / ಕವನ ಕಂಬನಿ!

ಕವನ ಕಂಬನಿ!

ರಘುಪತಿ ರಾಘವ ರಾಜಾರಾಮ
ಮಹಾಜೀವನಕೆ
ಇಂದು ಬರೆದೆಯಾ
ದೇವನೆ, ಪೂರ್ಣವಿರಾಮ!
ರಘುಪತಿ ರಾಘವ ರಾಜಾರಾಮ!

ಪತಿತ ಪಾವನ!
ಪಟೇಲ ಜೀವನ
ವಾಯಿತು ದೇವನ-
ಮುರಲೀವಾದನ
ಸ್ವಾತಂತ್ರ್ಯದ ಆ ವೀರೋದಾಮನ
ಬೆಳೆಯಿತು ತಾನ ವಿತಾನ
ದೇವಾ, ಸಖ್ಯ ಸೌಖ್ಯ, ಸಂಧ
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ
ವಿಧಿಯ ಘಟನೆಯಲಿ
ಘೋರ ಮರಣದಲಿ
ಪಡೆದಿತು ಗಾನವಿರಾಮ
ಸುಂದರ ಮಾಧವ ಮೇಘಶ್ಯಾಮ


ಜರೆಯನು ಜರೆದನು
ಅವನೇ ನಿರ್ಜರ
ದುಡಿಮೆಗೆ ಎಂದಿಗು
ಇಲ್ಲ ಅಂತರ
ಮಿಂಚು ತೂರಿತೆನೆ
ಹರಿದು ನಿರ್ಝರ
ದೇಹದಿ ಉಕ್ಕಿತು
ಪ್ರಾಣಸಾಗರ
ನಾಡಿನ ಪುಣ್ಯದ
ಉದಿತ ಭಾಸ್ಕರ
ಅದೋ ನಮ್ಮ ಸರದಾರ
ಅವನ ದರ್ಶನ
ಉತ್ಸಾಹದ ಸಂಚಾರ
ರಘುಪತಿ ರಾಘವ ರಾಜಾರಾಮ
ಭಾರತ ಪಂಚ ಪ್ರಾಣ
ಬತ್ತಿತು
ಅಯ್ಯೋ ಮೇಫಶ್ಯಾಮ!


ಆತ್ಮ ಕವಚವದು
ವಜ್ರ ಕೇವಲ
ಒಳಗೆ ಬೆಳೆಯಿತೈ
ಕಮಲ ಕೋಮಲ
ಭಾರತ ಭಾಗ್ಯದ
ಗಂಧ ಪರಿಮಳ
ಹರಿಯಿತು ಸಾಗರ ಪಾರ
ದೇವಾ,
ಏನು ಮಹಾ ಸರದಾರ!
ಕೇಳು ದೇವನೆ
ದೇಶ ಕೂಗುತಿದೆ
ಅಣ್ಣನ ವಾರಂವಾರ
ರಘುಪತಿ ರಾಘವ ರಾಜಾರಾಮ


ಯುದ್ಧ ಭೂಮಿಯಲಿ
ಸ್ಫುರಣ ಕಾರಣ
ಕಾಡ ಸವರಿದನು
ವೈರಿ ಮರ್‍ದನ
ನಾಡ ಕಟ್ಟಿದನು
ಭೀಮ ಯೋಧನ
ಸ್ವಾತಂತ್ರ್ಯದ ಸಂಗ್ರಾಮ
ಗೆದ್ದನು,
ಅವನಿಗೆ ಪ್ರೇಮ ಪ್ರಣಾಮ
ರಘುಪತಿ ರಾಘವ ರಾಜಾರಾಮ!


ದೇಹ ಮುರಿದರೂ
ಸಾವು ಬಾರದು
ಅಮೃತ ಪುತ್ರನಾ
ಸತ್ವ ಸರಿಯದು
ಅವನ ಧೈರ್ಯದಾ
ಕವಚ ನಾಡಿಗೆ
ಅವನ ಉಕ್ಕಿನಾ
ಹುರಿಯು ಮನಸಿಗೆ
ಅವನ ಪುಣ್ಯದಾ
ರಕ್ಷೆ ಬೆನ್ನಿಗೆ
ಅವನ ಕನಸಿನಾ-
ಮಾಲೆ ಕೊರಳಿಗೆ
ಅವನ ಧ್ಯೇಯದಾ
ಮೂರ್ತಿ ಕಣ್ಣಿಗೆ
ಇರಲು ಎಲ್ಲಿಯಾ
ಸಾವು ಅವನಿಗೆ


ದುಃಖ ಸಂವೃತ
ತಾಳು ಭಾರತ
ಮೋಹ ವಿಸ್ಮೃತ
ಏಳು ಭಾರತ
ಪ್ರಗತಿ ಸುವ್ರತ
ಬಾಳು ಅಮೃತ!
ರಘುಪತಿ ರಾಘವ ರಾಜಾರಾಮ
ಪತಿತ ಪಾವನ ಸೀತಾರಾಮ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...