Home / ಕವನ / ಕವಿತೆ / ಸೋತವನ ಹಾಡು

ಸೋತವನ ಹಾಡು

ಕಟ್ಟಿರಲು ಮಾನವನ ಹಣೆಗೆ ಮುಳ್ಳಿನ ಮುಕುಟ
ತಣಿವ ತಂಪನು ಮನದಿ ತಳೆಯಬಹುದೆ?
ಕಲಮಲನೆ ಸಿಡಿದುರಿದು ಬೆಂಕಿಬಳ್ಳಿಯು ಹರಡೆ
ಒಡಲಲ್ಲಿ ಶಾಂತಿಯದು ಆರಳಬಹುದೆ?
ಆಳಿದಿರುವ ‘ನಿನ್ನೆ’ ಗಳ ಹೆಣಗಳನು ಹೊತ್ತಿಹೆವು
‘ಇಂದು’ಗಳಿಗಾಳಾಗಿ ದುಡಿಯುತಿಹೆವು
ಮುಂದಿರುವ ‘ನಾಳೆ’ಗಳ ನೆಳಲಲ್ಲಿ ಚಿಂತೆಗಳ
ಚಿಗುರಿಸುತ ಎದೆಗುದಿಯ ಬೆಳೆಸುತಿಹೆವು.

ಸಾಕಾಯ್ತು ಬಾಳುವೆಯ ಕುರುಡು ಕಾಮನೆಯಾಟ
ಅನ್ಯಾಯ ಮೋಸಗಳ ಮೋಹದಾಟ
ನುಗ್ಗಿ ಬಹ ತೆರೆಗಳೇರಾಟ ಕಾಟದಿ ನನ್ನ
ಅಂಗಾಂಗವಾಯಾಸ ವಿದ್ಧವಕಟ
ಬೇಡಿದೆನೆ ಬಾನಿನಲಿ ಬೆಳೆವ ಅಮೃತದ ಹನಿಯ
ದೇವತೆಯ ವೈಭವವ ಕಾಮಿಸಿದೆನೆ ?
ಹುಲುಮನುಜನೆದೆಯೊಳಿಹ ಕಿರಿಯಾಸೆಗೂ ದೈವ
ಮುಚ್ಚಿರುವ ಬಾಗಿಲವ ತೆರೆಯಿತೇನೆ?

ಕೆರಳಿರುವ ಬಾಳ್ಗಡಲ ತೊರೆದು ಬಾ ನೀರೆಯೆ
ಏರಿಳಿತವಿಬ್ಲದೀಯುಸುಕಿನಲ್ಲಿ
ಧೆರ್ಮಬಂಧನ ಜರೆದು ಕರ್ಮಕ್ರಂದನ ತೊರೆದು
ಕೊರಳ ಕೊಯ್ಯುವ ಬಾಳನೊಗವ ಹರಿದು
ಸಿಕತಸೀಮೆಯ ಸೌಮ್ಯ ಶಾಂತಿಯಲಿ ಇಲ್ಲಿ ಬಾ
ಆಯಾಸವಾರಿಸುವ ವಿಶ್ರಾಂತಿಗೆ
ಕನಸಿನಾರಾಮದಲಿ ಕೊನರಬಹುದೆಲೆ ತಣಿವು
ಮರೆಯಬಹುದೆಲೆ ಮಲೆತ ವ್ಯಥೆಯಮೊನೆಯು

ಕಡಲತ್ತ ತನ್ನೆದೆಯ ಕದಡಿಸಿದ ಚಂದಿರನ
ಮಕ್ಕಲಿಕೆ ನಾಲಗೆಯ ಚಾಚುತಿರಲಿ
ಕಾಲ್ಕೆಳಗೆ ಸುಳಿಯುತಿಹ ಶೇಷನನು ಕುಕ್ಕಲಿಕೆ
ಪಾತಾಳವನು ಅಗಿದು ಮೊರೆಯುತಿರಲಿ
ಇಲ್ಲಿ ಕಾಣುವುದೇನು?- ನೀರ್‌ನೊರೆಯ ಬಿಳಿಗೆರೆಯೆ
ಕಡಲ ಮೊಳಗೂ ಕೂಡ ಕಿವಿಯ ಪುಗದು.
ಇಲ್ಲಿ ಗಾಳಿಯು ಕೂಡ ದಣಿದು ಗರಿಗಳ ಮುಗಿದು
ಹೂವಿನುಯ್ಯಲೆಯಲ್ಲಿ ಮಲಗಿರುವುದು.

ರಿಕ್ತವಹ ಸಂತಾಪ ಪರಿತಾಪಗಳ ತೊರೆದು
ಸೌಮ್ಯಸುಪ್ತಿಯಲೆದೆಯು ಮಿಡಿಯುತಿರಲಿ
ಇಲ್ಲಿರುವ ಗಿರಿಗಳಲಿ, ಹರಿಯುತಿಹ ಹೊಳೆಗಳಲಿ
ಹಸಿರಿನಲಿ ಬಿತ್ತರದ ಉಸುಕಿನಲ್ಲಿ
ಅಕ್ಷಯ್ಯ ಶಾಂತಿಯದು ನೆಲೆಸಿರಲು ನಾವೇಕೆ
ವ್ಯರ್ಥವಾದೆಣಿಕೆಯಲ್ಲಿ ನವೆಯಬೇಕು?
ಕನಸಿನಲಿ ಕಣ್ತೆರೆದು ನಸುಕಿನಲಿ ನಸುಬೆಳೆದು
ಅರಳಿಯಳಿವಲರಿನಾ ಬಾಳೆ ಸಾಕು!

ಮುಳುಗಲಿಹ ನೇಸರನು, ಮೂಡಲಿಹ ಚಂದಿರನು
ಮೆರೆಯುತಿಹರಾಗಸದ ಅಂಚುಗಳಲಿ
ಕ್ಷಣಕಾಲ ಮರೆತಿಹರು ರೇಗಿಸುವ ಕದನವನು
ಶಾಂತಿಯಾ ಕಾಂತಿಯನೆ ಕರೆಯುತಿಹರು,
ಗೆಳತಿ, ವೀಣೆಯಮೇಲೆ ತಂತಿ ನೋಯದೊಲಿನ್ನು
ಮೆಲ್ಪೆಲರಿಗೂ ಮಿದುವು ಬೆರಳಾಡಲಿ
ಗಾಳಿಗೂ ತಿಳಿಯದೊಲು ಮೌನವೂ ಮುರಿಯದೊಲು
ಗೀತಗಳು ಕಿವಿಯಲ್ಲಿ ಮೆಲ್ಲುಲಿಯಲಿ!

ಹುಸಿಯಾಸೆಗಳ ಪಾಶ, ಕೃತಿ ವಿರಸದಾಯಾಸ
ಮಾಯವಾಗುವುವೆಲ್ಲ ಸುಪ್ತಿಯಲ್ಲಿ
ಮಲೆತು ಮುರಿಯುವುದೇನು? ಅಲೆದು ಅರಸುವುದೇನು?
ಬಾಳೆಲ್ಲ ಸುಖಪಡೆಯೆ ವಿರತಿಯಲ್ಲಿ
ಸುಪ್ತಿಯೇ ಜೀವನದ ಸುಖ ಪೂರ್ಣ ಭುಕ್ತಿ
ಭಾವಗಳ ರಾಗಗಳ ಕೊನೆಯ ತೃಪ್ತಿ
ಪ್ರಕ್ಷುಬ್ಧ ಜಲಧಿಯಾ ಜಲವೆ ಶಿಲೆಯಾಗಿರುವ
ಹಮವತಿಯ ಸಿದ್ಧಿಯೂ ದೀರ್ಫ ಸುಪ್ತಿ.

ಸುಪ್ತಿ ಶುಕ್ತಿಯ ಸೇರೆ ಮನವು ಮೌಕ್ತಿಕವಾಗಿ
ಪಡೆಯಬಹುದೆಲೆ, ನಲ್ಲೆ, ನಿತ್ಯ ಮುಕ್ತಿ!
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...