Home / ಕವನ / ಕವಿತೆ / ಪ್ರಣಯಗುರು

ಪ್ರಣಯಗುರು

ಗೋಳನಂಜಿನ ಗಾಳಿ ಬೀಸೆ, ಬಾಳಿನಬಳ್ಳಿ,
ಮುರುಟಿರಲು ಗಾಸಿಗೊಂಡು
ಶಾಪದೊಲು ಚಂಡಾಶು ಶಾಂತಿಯನ್ನೇ ತಳ್ಳಿ
ತಾಂಡವವ ನಾಡಿತಂದು
ಆಸೆಗಳು ಕನಸುಗಳು ಮನದೆಲ್ಲ ಉಸಿರುಗಳು
ಹಳೆತು ಕೊಳೆ ಕಹಿಯಾದವು
ಬಾಳ ಬೆಳೆಸಲು ಬಗೆದ ಭಾವಗಳು ರಾಗಗಳು
ಇರಿವ ಕೂರಲಗಾದವು.

ನನ್ನ ತಾಯ್ನೆಲೆಯಾದ ನೆಲವು ಕಲ್ಲಾಗಿತ್ತು
ಕಸವೆ ನನಗಾಯಿತನ್ನ
ಕೂಸು ಬಾಯ್ದೆರೆದಾಗ ತಾಯ ಮೊಲೆ ಮುಚ್ಚಿತ್ತು
ಅದಕಿಹುದೆ ಮಿಗಿಲು ಬನ್ನ
ಬೇರಿಳಿಸಿ ಆರಸಿದರು ನೀರ ಸುಳಿವೇ ಇಲ್ಲ.
ಕಂಬನಿಯೊಳಾಂತೆ ತಣಿವು
ನಭಕೆತ್ತಿ ಕೈಚಾಚಿ ಕರುಣೆ ಕೇಳಿದರಿಲ್ಲ
ಇನಿಸಾದರಲ್ಲಿ ಒಲವು.

ಎಲೆಯೆಲ್ಲ ಉದುರಿದವು ನಲಿವೆಲ್ಲ ಚದರಿದವು
ನಿಂತೆ ನಾ ಕೊರಡಿನಂತೆ
ಸ್ಮೃತಿಯ ವಿಕೃತ ಛಾಯೆಗಳು ಸುತ್ತಿಕೊಂಡವು
ನನ್ನನ್ನು ಗೋರಿಯಂತೆ
ಇರುಳ ಕರಿಯೆದೆ ಯರಳಿ ಇನಬಿಂಬ ಬೆಳಗಿದೊಲು
ನನ್ನ ಬಾಳ್‌ ಬಾನಿನಲ್ಲಿ
ಇನಿಯಳೇ ನಿನ್ನೊಲವು ಮೂಡೆ ತೊಳಗಿತು ಮನವು
ಹೂಬಿಸಿಲ ಜೇನಿನಲ್ಲಿ

ನನ್ನೆದೆಯ ಹೊದರಲ್ಲಿ ಹರುಷ ಹಕ್ಕಿಯ ಹಿಂಡು
ಹೊಮ್ಮಿಸಿತು ಹಾಡು ಹೊಳೆಯ
ಮಧುಮಾಸ ಮುದಮಾಸ ಬಂದಿರುವ ತೆರದಲ್ಲಿ
ಚಿಮ್ಮಿಸಿತು ಹಸಿರ ಬೆಳೆಯ
ಪುಣ್ಯಪಾವನ ಗಂಗೆ ಶುದ್ಧ ಪ್ರೀತಿ ತರಂಗೆ
ಹರಿದೆ ನೀ ಮಸಣದಲ್ಲಿ
ಕಸವ ರಸವಾಗಿಸಿದೆ ವಿಷವ ಸೊದೆಯಾಗಿಸಿದೆ
ಸೇರಿ ಈ ಹೃದಯದಲ್ಲಿ

ಪತಿತಪಾವನ ಮೂರ್ತಿ ನನ್ನ ಜೀವನ ಸ್ಫೂರ್ತಿ
ಪ್ರೀತಿಯೇ ಸತ್ಯ ನಿಜವು.
ಪ್ರೀತಿಯೊಂದೇ ತಥ್ಯ ಉಳಿದುದೆಲ್ಲಾ ಮಿಥ್ಯ
ಅದರ ರೀತಿಯೆ ನೀತಿಯು
ಎಂದು ಕಲಿಸಿದ ಗುರುವೆ ನನ್ನ ಬಾಳಿನ ಗುರಿಯೆ
ನಮಿಸುವೆನು ನಾನು ನಿನಗೆ
ಪರದ ಪರತತ್ವವನು ಇಹದ ಸುಖ ಸತ್ತವನು
ನೀಡಿರಲು ನೀನು ನನಗೆ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...