Home / ಕವನ / ಕವಿತೆ / ಪ್ರಣಯಗುರು

ಪ್ರಣಯಗುರು

ಗೋಳನಂಜಿನ ಗಾಳಿ ಬೀಸೆ, ಬಾಳಿನಬಳ್ಳಿ,
ಮುರುಟಿರಲು ಗಾಸಿಗೊಂಡು
ಶಾಪದೊಲು ಚಂಡಾಶು ಶಾಂತಿಯನ್ನೇ ತಳ್ಳಿ
ತಾಂಡವವ ನಾಡಿತಂದು
ಆಸೆಗಳು ಕನಸುಗಳು ಮನದೆಲ್ಲ ಉಸಿರುಗಳು
ಹಳೆತು ಕೊಳೆ ಕಹಿಯಾದವು
ಬಾಳ ಬೆಳೆಸಲು ಬಗೆದ ಭಾವಗಳು ರಾಗಗಳು
ಇರಿವ ಕೂರಲಗಾದವು.

ನನ್ನ ತಾಯ್ನೆಲೆಯಾದ ನೆಲವು ಕಲ್ಲಾಗಿತ್ತು
ಕಸವೆ ನನಗಾಯಿತನ್ನ
ಕೂಸು ಬಾಯ್ದೆರೆದಾಗ ತಾಯ ಮೊಲೆ ಮುಚ್ಚಿತ್ತು
ಅದಕಿಹುದೆ ಮಿಗಿಲು ಬನ್ನ
ಬೇರಿಳಿಸಿ ಆರಸಿದರು ನೀರ ಸುಳಿವೇ ಇಲ್ಲ.
ಕಂಬನಿಯೊಳಾಂತೆ ತಣಿವು
ನಭಕೆತ್ತಿ ಕೈಚಾಚಿ ಕರುಣೆ ಕೇಳಿದರಿಲ್ಲ
ಇನಿಸಾದರಲ್ಲಿ ಒಲವು.

ಎಲೆಯೆಲ್ಲ ಉದುರಿದವು ನಲಿವೆಲ್ಲ ಚದರಿದವು
ನಿಂತೆ ನಾ ಕೊರಡಿನಂತೆ
ಸ್ಮೃತಿಯ ವಿಕೃತ ಛಾಯೆಗಳು ಸುತ್ತಿಕೊಂಡವು
ನನ್ನನ್ನು ಗೋರಿಯಂತೆ
ಇರುಳ ಕರಿಯೆದೆ ಯರಳಿ ಇನಬಿಂಬ ಬೆಳಗಿದೊಲು
ನನ್ನ ಬಾಳ್‌ ಬಾನಿನಲ್ಲಿ
ಇನಿಯಳೇ ನಿನ್ನೊಲವು ಮೂಡೆ ತೊಳಗಿತು ಮನವು
ಹೂಬಿಸಿಲ ಜೇನಿನಲ್ಲಿ

ನನ್ನೆದೆಯ ಹೊದರಲ್ಲಿ ಹರುಷ ಹಕ್ಕಿಯ ಹಿಂಡು
ಹೊಮ್ಮಿಸಿತು ಹಾಡು ಹೊಳೆಯ
ಮಧುಮಾಸ ಮುದಮಾಸ ಬಂದಿರುವ ತೆರದಲ್ಲಿ
ಚಿಮ್ಮಿಸಿತು ಹಸಿರ ಬೆಳೆಯ
ಪುಣ್ಯಪಾವನ ಗಂಗೆ ಶುದ್ಧ ಪ್ರೀತಿ ತರಂಗೆ
ಹರಿದೆ ನೀ ಮಸಣದಲ್ಲಿ
ಕಸವ ರಸವಾಗಿಸಿದೆ ವಿಷವ ಸೊದೆಯಾಗಿಸಿದೆ
ಸೇರಿ ಈ ಹೃದಯದಲ್ಲಿ

ಪತಿತಪಾವನ ಮೂರ್ತಿ ನನ್ನ ಜೀವನ ಸ್ಫೂರ್ತಿ
ಪ್ರೀತಿಯೇ ಸತ್ಯ ನಿಜವು.
ಪ್ರೀತಿಯೊಂದೇ ತಥ್ಯ ಉಳಿದುದೆಲ್ಲಾ ಮಿಥ್ಯ
ಅದರ ರೀತಿಯೆ ನೀತಿಯು
ಎಂದು ಕಲಿಸಿದ ಗುರುವೆ ನನ್ನ ಬಾಳಿನ ಗುರಿಯೆ
ನಮಿಸುವೆನು ನಾನು ನಿನಗೆ
ಪರದ ಪರತತ್ವವನು ಇಹದ ಸುಖ ಸತ್ತವನು
ನೀಡಿರಲು ನೀನು ನನಗೆ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...