Home / ಕವನ / ಕವಿತೆ / ಸಂಜೆಗೆ

ಸಂಜೆಗೆ

(ಒಂದು ಪ್ರಗಾಥ)

ಹೃದಯ ಕಂಪಿಸುತಿಹುದು ಆನಂದ ದೂರ್ಮಿಯಲಿ
ತುಂಬಿ ಮೈಮನವನ್ನು ಬಂಧಿಸಿಹುದು
ಇಹುದೆ ಇಂತಹ ಚೆಲುವು ಲೋಕದಲಿ ನಾಕದಲಿ
ನಿನ್ನವೊಲು, ಶ್ಯಾಮಲೆಯೆ, ಮಾಗಿದೊಲವು
ಹರಣಗಳ ನಯನದಲಿ ಅರಳಿಸುತ ನೋಡುವೆನು.
ಕಡಲನ್ನೆ ಕುಡಿಯುವೊಲು ದಿಟ್ಟಿಸುವೆನು.

ಹಗಲಿರುಳು ತೆರೆ ಸರಿಸಿ ಬಂದೆ ಮಂಥರೆ, ಮಧುರೆ
ನಿಮಿಷಾರ್ಧವೇ ನಿಂತು ನಡುವೆ ಮರೆಗೆ
ಆದರೆಲ್ಲೆಡೆ ನೀನು ಮಂತ್ರ ಮೌಕ್ತಿಕ ಜಲವ
ತೂರುತಿರೆ ದೇಶ ದಿಶೆ ಹೂ ಹಾಸಿಗೆ.
ಜರೆಯ ಮರೆಯಿತು ಗಿರಿಯು ಹೆರೆಯತಳೆದಿತು ತಿರೆಯು
ನನ್ನ ಕರಳೂ ಅರಳ ಗಮಗಮಿಸಿತು.

ಸ್ವರ್ಗಲೋಕದ ಮಾರ್ಗ ದುರ್ಗಮವೆ ಈ ಕ್ಷಣದಿ
ನಾಕವೇ ನಗುತಿರಲು ನಿನ್ನುಡಿಯಲಿ
ಚೆಲುವಿನಾ ಬಲೆಯಾಗಿ ಒಲವಿನಾ ಸೆಲೆಯಾಗಿ
ಮುಣ್ಣಿಗೂ ಬಣ್ಣನೆಯ ಲೀಲೆ ದೋರೆ
ನೆಲದಿ ನೆಲೆಯಾಗಿರುವ ನನ್ನ ನನ್ನಿಗಳೆಲ್ಲ
ನಿನ್ನ ತೇಜೋರಥದಿ ಸಾಗುತಿಹವು.

ಬಲ್ಲೆಯಾ ನನ್ನೆದೆಯ ಏಕತಾರಿಯ ಮೇಲೆ
ಅಸೆಮಿಡಿಯುವ ಭಗ್ನಗೀತಗಳನು
ಮನದ ಮಂಗಲವನ್ನು ಮೃತಿಗೊಳಿಸಿ ಜೀವನದ
ಹಸಿವೆಯನೆ ಬತ್ತಿಸುವ ರಾಗಗಳನು.
ಚೆಲುವಾಗಿ ಚಣವರಳಿ ಅಳಿದ ನನ್ನೊಲವಿನಲಿ
ನೆನಹು ನೋವಿಗೆ ನೀರನುಣಿಸುತಿಹುದು.

ಬಾನ್ನೆಲದ ಬೇಟಕ್ಕೆ ಬೆಳೆದ ಸಂಧ್ಯಾ ಕುವರಿ
ದಿನದಗ್ನಿತಪ ಹೂತ ಪುಣ್ಯ ನೀನು
ನೋವು ನನೆಕೊನೆಯೇರಿ ನಲಿವಾಯಿತೆನ್ನುವೊಲು
ಬಾಂಬಸಿರ ಕಿಚ್ಚಿ ನಿಂದೆದ್ದೆ ನೀನು.
ಪಡುವಣದ ಮಡುವಿನಲಿ ನೂರೆಸಳನೈದಿಲೆಯು
ಅರಳಿದೊಲು ಹರಿಸಿರುವೆ ಕಾಂತಿಯನ್ನು

ಸಾಂಧ್ಯ ಸುಂದರಿ ನಿನ್ನ ಸೊಬಗಿನಾರಾಧನೆಗೆ
ನನ್ನ ಮನವೇ ಬಾಗಿ ನಿಂತಿರುವುದು
ಕೋಟಲೆಯ ಕದಡನ್ನು ತಿಳಿದು ಪಾವನವಾಗಿ
ಆತುರದಿ ಕಲ್ಯಾಣ ಬಯಸುತಿಹುದು.
ಸೋತೆದೆಯ ಸರಸಿಯಲಿ ಅರಳಿರುವುದರವಿಂದ
ಶಾಂತಿಯಲಿ ತೋಷವನು ತಳೆದಿರುವುದು.

ಮರೆಯಾದೆಯಾ ದೇವಿ! ಮನವು ಮುಕುಲಿತವಾಯ್ತು
ತಿರೆಯು ಕಣ್ಣಿಂಗಿದೊಲು ಮುಗ್ಗುರಿಸಿತ್ತು.
ಆದರೂ ನಿಮಿಷದಲಿ ಜೀವನವನರಳಿಸಿದ
ನಿನ್ನ ಪ್ರೀತಿಯ ರೀತಿ ಅನೃತವೆಂತು?
ವಿಲಯ ತಾಳಲಯಕ್ಕೆ ಕುಣಿವ ಬಾಳಿನ ಕತೆಗೆ
ಅಮೃತ ಗತದ ರಸವು ತುಂಬಿಬಂತು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...