Home / ಕವನ / ಕವಿತೆ / ರಾತ್ರಿಗೆ

ರಾತ್ರಿಗೆ

ನಿನ್ನ ನಾನು ಪ್ರಿತಿಸುವೆನು
ಶ್ಯಾಮ ಮಧುರ ಯಾಮಿನಿ
ನಿನಗಾಗಿಯೆ ಹಾತೊರೆವೆನು
ಸ್ವಪ್ನ ಲೋಕ ಸ್ವಾಮಿನಿ.

ನೀ ಬಂದರೆ ಇಳೆಗಿಳಿವುದು
ಅತುಲ ದಿವ್ಯ ಶಾಂತಿಯು
ನಿನ್ನಿರುಳಲಿ ಕರುಳಿಗೆಲ್ಲಿ
ಸಂಸಾರದ ಭ್ರಾಂತಿಯು

ಉಕ್ಕಿಸುತ್ತ ಕಾಳ್ಗಡಲನು
ಬ್ರಹ್ಮಾಂಡವ ಮುತ್ತಿದೆ
ಬಾನ್ಬಯಲಲಿ ಹಣ್ಣಿಸಿರುವ
ರವಿ ತೇಜವ ಮುಕ್ಕಿದೆ.

ಅಂಧಂತಮವೆಂದು ನಿನ್ನ
ಕರೆದರೇನು ರಜನಿಯೆ
ನಿನ್ನೊಡಲಿದೆ ದೀಪ್ತಿಮಂತ-
ತಾರಾಗೃಹ ರಾಶಿಯೆ.

ಪ್ರತಿ ಜೀವದ ಪ್ರತ್ಯಾಸೆಯು
ನಿನ್ನೆಡೆಯಲಿ ಬೆಳೆಯಿತು
ಈ ಲೋಕವು ಸ್ವರ್ಲೋಕದ
ಸುಖ ಸ್ವಪ್ನವ ಸವಿಯಿತು.

ಅಜ್ಞಾನದ ಕದಡೆಲ್ಲವು
ನೀ ಕರುಣಿಸೆ ತಿಳಿಯಿತು
ನಿನ್ನುಡಿಯಲಿ ಋಷಿವರರಿಗೆ
ಸದ್ದರ್ಶನ ದೊರೆಯಿತು.

ಅರ್ತರ ಮೊರೆ, ದೀನರ ದಯೆ,
ಸೋತವರಿಗೆ ಆಸರೆ
ಮಾದೇವನು ಮರೆತವರಿಗು
ನೀ ಮಮತೆಯ ಹೆದ್ದೊರೆ.

ಮಾದಾಯಿಯೆ ನಿನ್ನೊಲವಿನ
ಹಾಲ್ಬಲವನು ಪಡೆಯಲು.
ವಿಸ್ತಾರಿತ ಹೃತ್ಕುಮುದದ
ಹೂಸೊದೆಯನು ಸವಿಯಲು

ಈ ಮೌನದ ಹಿಮಶೃಂಗಕೆ
ಈ ಶಾಂತಿಯ ಗಂಗೆಗೆ
ಓಡೋಡುತ ನಾ ಬಂದೆನು
ತೃಷಿತಾತ್ಮದ ತುಷ್ಟಿಗೆ.

ನೀ ಬೀಸಿದ ನಿದ್ದೆಯ ಬಲೆ
ಸವಿಕನಸಿನ ಸಂಕಲೆ
ಹರಿದೊಗೆದೆನು ಜಾಗರಿಸುತ-
ಲೀನನಾದೆ ನಿನ್ನೊಳೆ.

ಇಲ್ಲಿ ನಾನು ಕಾಣಲಿಲ್ಲ
ನಿಜ ಮರೆಸುವ ಕಲೆಯನು
ಸುಳ್ಳು ಸುಖದ ಸವಿ ಮಬ್ಬಿನ
ಸೆರೆಹಿಡಿಯುವ ಬಲೆಯನು

ನಿಂತೆ ನಿನ್ನ ಈ ವಿಶಾಲ-
ಅಂತರಂಗ ಸಂಮುಖ
ಕಂಡೆ ನಾನು ಈ ಭುವನದ
ಭವ್ಯವಾದ ಶ್ರೀಮುಖ.

ಹೃದಯದಲ್ಲಿ ಹುದುಗಿರಿಸಿದ
ಭಾವಲತೆಯು ನೆಗೆದಿತು
ಹೂವಿಸುತ್ತ ತೇಲಿಸಿತೊ
ಗಂಧ ಕವನ ಮೆಲ್ಲಿತು.

ಜಗದ ಗಾಯದಿಂದ ಬಸಿವ
ಕರುಣಾಜಲ ಹೊಮ್ಮಿತು
ಎಂಟು ದಿಕ್ಕಿನಿಂದ ಹರಿವ
ಗಾಳಿಯಲ್ಲಿ ತುಂಬಿತು.

ಪತಿತ ಶಪ್ತ ಪಾಪಾತ್ಮರ
ನಿಟ್ಟುಸಿರೂ ಮೊರೆಯಿತು
ನಿನ್ನದೆ ಬಾಗಿಲವ ತಟ್ಟಿ
ಆಸರೆಯನು ಕೇಳಿತು.

ಮುರಿದೊಲವಿನ ಕನಿಕರವೂ
ನಿನ್ನ ಮುಖದಿ ಮೂಡಿತು
ನೊಂದವರಾ ಕಣ್ಣೀರೂ
ನಿನ್ನೆವೆಯಿಂದಿಳಿಯಿತು.

ಕರುಣೆಯಲ್ಲಿ ಕಂಡರಿಸಿದ
ಶ್ಯಾಮನ ಮಧುಮೂರ್ತಿಯು
ನಿನ್ನದೆಯಲಿ ಮಿಂಚಿತದೊ
ಅತಿ ಬಂಧುರ ಜ್ಯೋತಿಯು.

ಸುಳಿಗಾಳಿಯ ಕೊರಳಿನಲ್ಲಿ
ಮುರಲಿ ಗೀತ ಹೊಮ್ಮಿತು
ಜಗದಾತ್ಮದ ಮೂಕ ಮೌನ
ಪ್ರಾರ್ಥನೆಯಲ್ಲರಳಿತು

ಬಾನ್ನೆಲದಲಿ ಸೂಸಿತೊಂದು
ಭಾವಲಹರಿಯದ್ಭುತ
ಪಂಚಕರಣ ಹರಣಗಳನು
ಕಣ ಕಣದಲಿ ಮೀಟುತ

ನವಲೋಕದ ನವತೇಜದ
ಬೀಜಾಂಕುರವಾಯಿತು
ಆ ವಿಭವದ ಉನ್ಮಾದವು
ಎಲ್ಲೆಲ್ಲೂ ತೋರಿತು.

ನನ್ನೆದೆಯನು ಮುಟ್ಟಿ ತಾಯೆ
ಆ ಆಸೆಯ ಚಿಗುರಿಸು
ಹಗೆ ಕೊಳೆಗಳ ತೊಳೆದು ತಾಯೆ
ಹೊಸ ಕೆಳೆಗಳ ಬೆಳೆಯಿಸು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...