Home / ಕವನ / ಕವಿತೆ / ಸ್ವಪ್ನಹರಿಣ!

ಸ್ವಪ್ನಹರಿಣ!

ಸ್ವಪ್ನಹರಿಣ ಚಪಲ ಚರಣ
ಕಂಗಳಲ್ಲಿ ಇಳಿಯೆ ಹರಣ
ಓಡುತಿಹುದು ವಿಧಿಗೆ ಭೀತ
ಎದೆಯ ಕಾಡೊಳು!

ಜೀವನ ನಿರ್ದಯ ನಿಷಾದ
ದುರ್ದೈವದ ಧನು ಸಜ್ಜಿತ
ಚಿಂತೆಯ ನಂಜಲಗ ತಿವಿದು
ಬೆನ್ನ ಹತ್ತಿದ!

ಭೀತಿಯಿಂದ ತನುಕಂಪಿತ
ನಯನಂಗಳು ಅಶ್ರುಭರಿತ
ಬಂದಿತೆಂದಿತದೊ ಸಮೀಪ
ಕೊನೆಯಗಳಿಗೆಯು

ಕರುಣಾಶ್ರಯವಿಲ್ಲದಾಯ್ತು
ನಿಷ್ಕರುಣಿಯ ಜಗವಾಯಿತು
ಕೆನ್ನೀರಿನ ಮಡುವಾಯಿತು
ಮೃದುಲ ದೇಹವು!

ಕಂಗಳ ಬಟ್ಟಲುಗಳಲ್ಲಿ
ಜಗದಾಸೆಯ ಮದಿರೆಯಲ್ಲಿ
ತುಂಬಿದರೂ ತುಳುಕಿ ತಿಂದು
ದುಃಖಸಾಗರ!

ಪ್ರಕೃತಿಯೆಲ್ಲ ಪ್ರತಿಬಿಂಬಿತ
ನಯನಂಗಳಲತಿ ರಂಜಿತ
ಅದನೊರಸುತ ತೇಲಿ ಬಂತು
ದುಗುಡ ಬೆಂತರ!

ಓಡಿದತ್ತ ಬೆಂಬತ್ತಿದೆ
ನೋಡಿದತ್ತ ನೆಗೆದೆದ್ದಿದೆ
ಮೂರ್ತಿಮಂತ ಮರಣದಂತೆ
ಬಾಳ ರಕ್ಕಸ!

ಸ್ವಪ್ನಹರಿಣ, ನಿಲ್ಲರೆ ಚಣ,
ದಿನ ಸತ್ತಿತು ಇದೆ ಈ ಕ್ಷಣ
ಬಿಸಿಲು ಬಾಣ ತಾಗೆ, ಬಾನ್ಗೆ-
ರಕ್ತ ಚಿಮ್ಮಿತು!

ಕಲ್ಪನೆಯುತ್ತುಂಗ ಶಿಖರ
ಮನದಾಸೆಯ ಸೌಖ್ಯ ಶಿಬಿರ
ಕೈಯ ಚಾಚಿ ಕರೆಯುತಿಹುದು
ತನ್ನ ಎಡೆಯಲಿ!

ಇರುಳಿನ ತೋಳ್‌ ತೊಟ್ಟಿಲಲ್ಲಿ
ಬೆಳುಂದಿಗಳ ಸೆರಗಿನಲ್ಲಿ
ವಿರಮಿಸಿ ಆ ಕರುಣೆಯಲ್ಲಿ
ಬೆಳೆಸು ಬಲವನು.

ನೀನಿರುತಿರೆ ಇದೆ ಸಂಸ್ಕೃತಿ
ನೀ ಬೆಳೆದರೆ ಅವ ಸಾಹಿತಿ
ಮನ ಮಂದಿರದಲಿ ಮೂರುತಿ
ಚೆಲುವು ನಿನ್ನದು!

ಮುನ್ನಡೆಯಲಿ ನೀ ಪ್ರೇರಣೆ
ಪ್ರತಿ ಯತ್ನಕೆ ನೀ ಚೇತನೆ
ನಿತ್ಯ ನೂತ್ನ ರಮ್ಯವದನೆ
ಕಹಿಯ ಕಳೆಯುವೆ!

ಸಾಯಬಾರದೆಂದು ನೀನು
ಕರಿಯಿರುಳಲಿ ಬೆಳಕು ನೀನು
ಬೆಂದ ಬಾಳ ಹಾಳಿನಲ್ಲಿ
ತಣಿವಿನೂಟೆಯು!

ನಿನ್ನುಳಿಸಲು ಜನ ಕೂಡಿದೆ
ದೇವರನ್ನು ಜಗ ಬೇಡಿದೆ
ಚಿಂತಾಕುಲ ಜೀವಿತದಲಿ
ನಿನಗೆ ಕಾದಿದೆ!

ಕ್ಷುಬ್ಬವಿದ್ಧ ಮಾನವ ಕುಲ
ಅದರ ದುಃಖವಾಯಿತಚಲ
ಅದಕ ಯತ್ನವೆಲ್ಲ ವಿಫಲ
ವಿರಸ ಬಾಳುವೆ!

ಪಾಪದ ಕೋಳ್‌ ಗೋಣ್‌ ಬಿಗಿಯಲು
ಶಾಪದ ಕೈ ಅಲುಗಿರಿಯಲು
ನಿನ್ನೊಡಲಿನ ಕಸ್ತೂರಿಯು
ಪ್ರಾಣದಾನ ಮಾಡಲಿ!

ನಮ್ಮೊಡಲಿನ ಚಿಂತೆಯನ್ನು
ನೀಗದಿರುವ ಶಂಕೆಯನ್ನು
ಸ್ವಪ್ನ ಸಜಲ ನಯನ ನೀರ
ತಣಿವ ತೋರಲಿ!

ಚೆಲುವದೋರು ಒಲವನೀಡು
ಕೆಡುಕಳಿಯುವ ಹಾಗೆ ಮಾಡು
ಚಿರಮಂಗಲ ಸುರಸುಂದರ
ಬಾಳ ಕೊನರಿಸು.
*****

Tagged:

Leave a Reply

Your email address will not be published. Required fields are marked *

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...