Home / ಲೇಖನ / ವಿಜ್ಞಾನ / ಈಗ ಕುಡಿಯುವ ಕೊಳವೆ ನೀರೂ ಸಹ ವಿಷವೇ?

ಈಗ ಕುಡಿಯುವ ಕೊಳವೆ ನೀರೂ ಸಹ ವಿಷವೇ?

ಬರಗಾಲದ ಭೀಕರತೆಯಿಂದಾಗಿ ನೀರು ಎಲ್ಲಿಯೂ ಸಕ್ಕುವುದಿಲ್ಲ ಹಳ್ಳಕೊಳ್ಳ ತೊರೆ, ನದಿಗಳು ಬತ್ತಿಹೋಗಿವೆ. ಇಂಥಹ ಸಂದರ್ಭಗಳಲ್ಲಿ ಕೊಳವೆಭಾವಿಗಳನ್ನು ಕೊರೆದು ಅದರಿಂದ ನೀರು ಸಂಗ್ರಹಿಸಿ ಕುಡಿಯಲು ಉಪಯೋಗಿಸುತ್ತಿರುವುದು ಇಂದು ಸಾಮಾನ್ಯ ದೃಷ್ಯ.

ಆದರೆ ಇಂಥಹ ಕೊಳವೆ ಭಾವಿಗಳ ನೀರು ವಿಷಯುಕ್ತವಾಗಿವೆ ಎಂಬ ಸತ್ಯ ಇತ್ತೀಚಿಗೆ ಬಯಲಾಗುತ್ತಲಿದೆ. ನಗರೀಕರಣದ ಒತ್ತಡದಿಂದಾಗಿ ಸುರಂಗಗಳನ್ನು ತೋಡಿ ನೀರು ತೆಗೆಯುವ ಸಾಹಸದಿಂದಾಗಿ ಅಂತಾರ್ಜಲ ಬಿತ್ತಿಹೋಗುತ್ತಲಿದೆ. ಹೀಗಾಗಿ ಈ ಸುರಂಗ ಭಾವಿಗಳನ್ನು ೧೦೦ ರಿಂದ ೫೦೦ ಅಡಿಗಳವರೆಗೂ ಕೊರೆಯಲಾಗುತ್ತದೆ. ಇದು ತೀವ್ರವಾಗತೊಡಗಿದಂತೆ ‘ಆರ್ಸನಿಕ್’, ಅಂಶವು ಹೆಚ್ಚಿನ ಪ್ರಮಾಣದಲ್ಲಿ ಅಂತರಜಲದ ಜೊತೆಗೆ ಸೇರಿಕೊಳ್ಳುತ್ತದೆ. ಥೈಲ್ಯಾಂಡಿನಂತಹ ದೇಶಗಳು ಈ ಹಿಂದೆಯೇ ಆರ್ಸನಿಕ್, ವಿಷಪ್ರಾಶನದಿಂದ ಬಳಲಿ ಪಾಠ ಕಲಿತಿವೆ. ಥೈಲ್ಯಾಂಡಿನ ಕೆಲವು ಪ್ರದೇಶಗಳಲ್ಲಿ ಮಳೆಯ ನೀರನ್ನು ಸಿಮೆಂಟ್ ಜಾಡಿಗಳಲಿ ಸಂಗ್ರಹಿಸಿ ಬಳಸಿಕೊಳ್ಳಲಾಗುತ್ತದೆ. ಅಲ್ಲಿ ವರ್ಷದ ಹತ್ತು ತಿಂಗಳ ಕಾಲ ಕುಡಿಯಲು ಮತ್ತು ಅಡಿಗೆ ತಯಾರಿಕೆಗೆ ಬೇಕಾಗುವ ನೀರನ್ನು ಇಂಥಹ ಮಳೆಯ ನೀರಿನ ಸಂಗ್ರಹದಿಂದಲೇ ಪೂರೈಸಿಕೊಳ್ಳಲಾಗುತ್ತದೆ. ಪಶ್ಚಿಮ ಬಂಗಾಳದ ೮೪೦ ಹಳ್ಳಿಗಳಲ್ಲಿ ಲಕ್ಷಾಂತರ ಜನರು ಅರ್ಸನಿಕ್ ವಿಷ ಪ್ರಾಶನದಿಂದ ನರಳುತ್ತಿದ್ದಾರೆ. ನೆಲದಾಳದಲ್ಲಿರುವ ಕಬ್ಬಿಣದ ಪೈರೈಟ್ಗಳು ಕೊಳವೆ ಭಾವಿಗಳ ಮೂಲಕ ಆಮ್ಲಜನಕದ ಸಂಪರ್ಕಕ್ಕೆ ಬಂದಾಗ ಅಪಾಯಕಾರಿಯಾದ ಆರ್ಸನಿಕ್ ಬಿಡುಗಡೆ ಹೊಂದಿ ಅಂತರ್ಜಲವನ್ನು ಸೇರುತ್ತದೆ. ನೀರಿನೊಂದಿಗೆ ಸೇರುವ ಈ ಆರ್ಸೆನಿಕ್ ಮನುಷ್ಯರಿಗೂ, ಪ್ರಾಣಿಗಳಿಗೂ ಅತ್ಯಂತ ಅಪಾಯಕಾರಿಯಾಗಿದೆ.

ಸಾಮಾನ್ಯವಾಗಿ ಇಂತಹ ಸಮಸ್ಯಗಳಿಗೆ ಸರಳವಾದ ಸುಲಭವಾದ ಮತ್ತು ಕಡಿಮೆ ಖರ್ಚಿನ ಮಾರ್ಗಗಳಿವೆ. ಆದರೆ ಹಲವಾರು ಕಾರಣಗಳಿಂದಾಗಿ ಇಂಥಹ ಪರ್ಯಾಯ ವ್ಯವಸ್ಥೆಗೆ ಒಪ್ಪಿಗೆ ಸಿಗುವುದಿಲ್ಲ ಮುಖ್ಯವಾಗಿ ಮಳೆ ನೀರನ್ನು ಸಂಗ್ರಹಿಸಿ ಇರುವುದು. ಜಲಮೂಲಗಳಿಂದ ನೀರನ್ನು ಪಡೆಯುವುದು. ಮುಂತಾದ ಕ್ರಮಗಳನ್ನು ಅನುಸರಿಸಬೇಕಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...