Home / ಲೇಖನ / ಇತರೆ / ವಿಜ್ಞಾನಕ್ಕೆ ಸವಾಲು

ವಿಜ್ಞಾನಕ್ಕೆ ಸವಾಲು

ಕೊಪ್ಪಳ ಸಮೀಪದಲ್ಲಿ ಭಾಗ್ಯ ನಗರವಿದೆ. ಅಲ್ಲಿ ವಿನಯ ವೀರೇಶ ಸವಡಿ ಎಂಬ ನಾಲ್ಕು ವರ್‍ಷದ ಬಾಲಕನಿದ್ದಾನೆ. ಮನೆಯಲ್ಲಿ ಕನ್ನಡ, ಶಾಲೆಯಲ್ಲಿ ಕನ್ನಡ, ಸ್ನೇಹಿತರೂ ಕನ್ನಡ ಮಾತನಾಡುವರು. ಶಾಲೆಯಲ್ಲಿ ನೆರೆಹೊರೆಯವರೂ ಕನ್ನಡ ಮಾತನಾಡುವರು. ಈ ಬಾಲಕನ ಅಣ್ಣ ವಿಕಾಸ ವೀರೇಶ ಸವಡಿಗೂ ಕನ್ನಡ ಮಾತ್ರ ಬರುವುದು. ತಾಯಿಗೆ ಕನ್ನಡ ಮಾತ್ರ ಗೊತ್ತಿರುವುದು, ತಂದೆ-ವೀರೇಶ ಸವಡಿಗೆ ಅಲ್ಪ ಸ್ವಲ್ಪ ಹಿಂದಿ ಗೊತ್ತು ! ಅಷ್ಟು ಬಿಟ್ಟರೆ ಯಾರಿಗೂ ಹಿಂದಿಯ ಗಂಧ ಗಾಳಿಯೇ ತಿಳಿಯದು ! ಆದರೆ.. ವಿನಯ ವೀರೇಶ ಸವಡಿ ಮಾತ್ರ ಮಾತನಾಡುವುದು ಹಿಂದಿಯಲ್ಲಿ. ಕನ್ನಡವೆಂದರೆ… ಅರ್‍ಥವಾಗದು… ಹೇಗಿದೆ ವಿನಯ ವೀರೇಶ ಸವಡಿಯ ಪೂರ್ವಜನ್ಮದ ಸುಕೃತ ಫಲ…??

ಯಾವುದೇ ಮಗು ಹುಟ್ಟಿದ ವರ್ಷದೊಳಗೆ ಮಾತನಾಡಲು ಶುರು ಮಾಡುತ್ತದೆ. ಆದರೆ.. ವಿನಯ ವೀರೇಶ ಸವಡಿ ಸುಮಾರು ಎರಡೂವರೆ ವರ್ಷ ಕಳೆದರೂ ಬರೀ ತೊದಲು ಮಾತನ್ನು ಕೂಡಾ ಆಡಿಲ್ಲ. ಇದು ಮನೆಯವರಿಗೆಲ್ಲ ಭಾರೀ ತಲೆನೋವು ತಂದಿತ್ತು. ಬರುಬರುತ್ತಾ ಮೂರನೆಯ ವರ್ಷಕ್ಕೆ ತೊದಲು ನುಡಿ ಮೊದಲ ನುಡಿ ಮೊದಲಾಯಿತು! ಅಮ್ಮಾ ಎಂದರೆ- ಆಯಿ, ಅಪ್ಪ ಎಂದರೆ ಅಬ್ಬ, ಹೋಗು ಎಂದರೆ- ತು ಜಾವ್, ಊಟಕ್ಕೆ ಬಾರೋ ಎಂದರೆ ಖಾನಾ ರೆಡಿ ಹೈ ? ಎನ್ನುವ.

ಇವರು ಕನ್ನಡ ಎಂದರೆ- ಬಾಲಕ ಮಾತ್ರ ಹಿಂದಿ ನುಡಿವ. ಟೀವಿ ಪ್ರಭಾವವಿಲ್ಲ. ಪರಿಸರ ಒತ್ತಡವಿಲ್ಲ. ಬಾಲಕ ಹಿಂದಿಯಲ್ಲಿ ಉತ್ತರಿಸುವ ಈಗಾಗಲೇ ಬಳ್ಳಾರಿ ಆಸ್ಪತ್ರೆಗೆ ಅಂಡಲೆದಿದ್ದು ಆಯಿತು. ಪರಿಹಾರವಿಲ್ಲ. ಮನೋವೈದ್ಯರು ಭಾಷಾ ವಿಜ್ಞಾನಿಗಳಿಗೆ ಈ ಬಾಲಕನಿಂದು ಸವಾಲಾಗಿದ್ದಾನೆ! ಈ ಬಾಲಕನ ಮಾತಿನ ರಹಸ್ಯ ಭೇದಿಸಲು ಇನ್ನು ಯಾರಿಗೆ ಸಾಧ್ಯವಾಗುತ್ತಿಲ್ಲ. ಹಿಂದಿನ ಜನ್ಮ ರಹಸ್ಯನೂ ಇರಬಹುದೇನೋ.. ಸಾವಿರಕ್ಕೆ ಒಬ್ಬರು ಈ ರೀತಿ ಅಚ್ಚರಿ ಮೂಡಿಸಲು ಸಾಧ್ಯವಿದೆಯೆಂಬುದನ್ನು ಯಾರೂ ತಳ್ಳಿ ಹಾಕುವಂತಿಲ್ಲ.

ಏನೇ ಇರಲಿ ಎಂತ ಮಾತನಾಡಲಿ ಎನಯ ವೀರೇಶ ಸವಡಿಯ ಮಾತಿನ ಮರ್‍ಮ ಇಂದಲ್ಲ ನಾಳೇ ಬೆಳಕಿಗೆ ಬಂದೇ ಬರುವುದು! ಬರುಬರುತ್ತಾ ಬೆಳೆಬೆಳೆಯುತ್ತಾ ಸದರಿ ಬಾಲಕನೇ ಮಾತಿನ ಮರ್ಮ ಹೊರಗೆಡುವ ಸಾಧ್ಯತೆಯನ್ನು ಅಲ್ಲಗೆಳೆಯಲಾಗದು.

ನಾವು ನೀವು ಎಲ್ಲರೂ ಕಾದು ನೋಡೋಣವಲ್ಲವೇ??
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...